AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕ ಬೆಳವಣಿಗೆ ವೇಗ ಕನಿಷ್ಠ ಹಂತ ಮುಟ್ಟಿರಬಹುದು; ಇನ್ನೇನಿದ್ದರೂ ಮೇಲೇರುವ ಸಮಯ: ಎಚ್​ಎಸ್​ಬಿಸಿ ಎಂಎಫ್ ವರದಿ

HSBC MF's report predicts strong future growth of Indian economy: ಭಾರತದ ಆರ್ಥಿಕ ಬೆಳವಣಿಗೆಯ ಚಕ್ರವು ತಳಮಟ್ಟ ಮುಟ್ಟಿದೆ ಎಂದು ಎಚ್​ಎಸ್​ಬಿಸಿ ಎಂಎಫ್​ನ ವರದಿಯಲ್ಲಿ ಶುಭನುಡಿಯಲಾಗಿದೆ. ಭಾರತದ ಮುಂದಿನ ಆರ್ಥಿಕ ಬೆಳವಣಿಗೆಯು ಹೆಚ್ಚಿನ ವೇಗದಲ್ಲಿ ಸಾಗಬಹುದು ಎಂದು ಹೇಳಲಾಗಿದೆ. ತೈಲ ಬೆಲೆ ಇಳಿಕೆ, ಬಡ್ಡಿದರ ಇಳಿಕೆ, ಹೂಡಿಕೆ ಹೆಚ್ಚಳ ಇತ್ಯಾದಿ ಅಂಶಗಳು ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಈ ವರದಿ ಅಭಿಪ್ರಾಯಪಟ್ಟಿದೆ.

ಭಾರತದ ಆರ್ಥಿಕ ಬೆಳವಣಿಗೆ ವೇಗ ಕನಿಷ್ಠ ಹಂತ ಮುಟ್ಟಿರಬಹುದು; ಇನ್ನೇನಿದ್ದರೂ ಮೇಲೇರುವ ಸಮಯ: ಎಚ್​ಎಸ್​ಬಿಸಿ ಎಂಎಫ್ ವರದಿ
ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 14, 2025 | 4:58 PM

Share

ನವದೆಹಲಿ, ಅಕ್ಟೋಬರ್ 14: ಭಾರತದ ಆರ್ಥಿಕ ಬೆಳವಣಿಗೆ (GDP growth rate) ಶೇ. 8ಕ್ಕಿಂತಲೂ ಹೆಚ್ಚಿನ ವೇಗದಲ್ಲಿ ಆಗಬಹುದು ಎನ್ನುವ ನಿರೀಕ್ಷೆ ಕೆಲ ವರ್ಷಗಳ ಹಿಂದೆ ಇತ್ತು. ಆದರೆ, ಶೇ. 6-7ರ ಆಸುಪಾಸಿನ ಬೆಳವಣಿಗೆಗೆ ತೃಪ್ತಿಪಡುವಂತಾಗಿದೆ. ಈ ಮಂದಗತಿಗೆ ನಿರ್ದಿಷ್ಟ ಕಾರಣಗಳು ಕಾಣದಾಗಿವೆ. ಆದರೆ, ಎಚ್​ಎಸ್​ಬಿಸಿ ಎಂಎಫ್ ಸಂಸ್ಥೆಯ ವರದಿಯೊಂದು ಖುಷಿಯ ವಿಚಾರ ಪ್ರಸ್ತುತಪಡಿಸಿದೆ. ಭಾರತದ ಅಭಿವೃದ್ಧಿ ಚಕ್ರ ತನ್ನ ಕನಿಷ್ಠ ಮಟ್ಟ ಮುಟ್ಟಿರಬಹುದು ಎಂದು ಈ ವರದಿಯಲ್ಲಿ ಹೇಳಲಾಗಿದೆ. ಅಂದರೆ, ಜಿಡಿಪಿ ದರ ಕನಿಷ್ಠ ಹಂತ ಮುಟ್ಟಿದ್ದು, ಮುಂದಿನ ದಿನಗಳು ವೇಗದ ಚಲನೆಗೆ ಸಾಕ್ಷಿಯಾಗಲಿವೆ.

ಎಚ್​ಎಸ್​ಸಿಬಿ ಮ್ಯುಚುವಲ್ ಫಂಡ್ ಸಂಸ್ಥೆಯ ವರದಿ ಪ್ರಕಾರ ಭಾರತದ ಆರ್ಥಿಕತೆಯ ಎಲ್ಲಾ ಸಂಕೇತಗಳೂ ಸಕಾರಾತ್ಮಕವಾಗಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ವೇಗ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಗೂಗಲ್​ನಿಂದ ಬೃಹತ್ ಎಐ ಹಬ್; 15 ಬಿಲಿಯನ್ ಡಾಲರ್ ಹೂಡಿಕೆ; ಪ್ರಧಾನಿ ಮೋದಿ ಸ್ವಾಗತ

‘ಬಡ್ಡಿದರ, ಹಣದ ಹರಿವಿನ ಚಕ್ರ, ಕಚ್ಚಾ ತೈಲ ಬೆಲೆಗಳಲ್ಲಿ ಇಳಿಕೆ, ಸಹಜ ಮುಂಗಾರು ಮೊದಲಾದ ಅಂಶಗಳು ಭಾರತದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿವೆ’ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಆದರೆ, ಜಾಗತಿಕ ವ್ಯಾಪಾರ ಅನಿಶ್ಚಿತತೆಯಿಂದ ಹಿಡಿದು ಖಾಸಗಿ ಬಂಡವಾಳ ವೆಚ್ಚದಲ್ಲಿ ಇಳಿಕೆವರೆಗೆ ಒಂದಷ್ಟು ಹಿನ್ನಡೆಗಳೂ ಇವೆ ಎಂದು ಈ ಎಚ್ಚರಿಸಿದೆ ಈ ವರದಿ.

ಇದನ್ನೂ ಓದಿ: ಟೆಲಿಗ್ರಾಮ್ ಸಿಇಒ ಆದರೂ ಮೊಬೈಲ್ ಮುಟ್ಟಲ್ಲ, ಒಂದೂ ಚಟ ಹೊಂದಿಲ್ಲ; ಪಾವೆಲ್ ದುರೋವ್ ಕಥೆ ಇದು…

ಈ ಹಿನ್ನಡೆಗಳ ಹೊರತಾಗಿಯೂ ಭಾರತದಲ್ಲಿ ಹೂಡಿಕೆಗಳು ಉತ್ತಮವಾಗಿ ಆಗಬಹುದು. ಖಾಸಗಿ ಬಂಡವಾಳ ವೆಚ್ಚದಲ್ಲಿ ಏರುಪೇರಾದರೂ ಸರ್ಕಾರಿ ಹೂಡಿಕೆಗಳು ಸರಾಗವಾಗಿ ಮುಂದುವರಿಯಬಹುದು. ಖಾಸಗಿ ಹೂಡಿಕೆಗಳೂ ಕೂಡ ಚೇತರಿಕೆ ಪಡೆಯಬಹುದು. ರಿಯಲ್ ಎಸ್ಟೇಟ್ ಚಕ್ರದಲ್ಲೂ ಚೇತರಿಕೆ ಆಗಬಹುದು ಎಂದು ಎಚ್​ಎಸ್​ಬಿಸಿ ಎಂಎಫ್​ನ ಈ ವರದಿಯಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!