AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIP power: ಷೇರು ಮಾರುಕಟ್ಟೆಯನ್ನು ಕಾಪಾಡುತ್ತಿರುವ ಸಾಮಾನ್ಯ ಜನರ ಎಸ್​ಐಪಿ

Indian stock market updates: ಭಾರತೀಯ ಷೇರು ಮಾರುಕಟ್ಟೆ ಕಳೆದ ಕೆಲ ತಿಂಗಳಿಂದ ಹಿನ್ನಡೆಯಲ್ಲಿದೆ. ಸಾಕಷ್ಟು ವಿದೇಶೀ ಹೂಡಿಕೆಗಳು ಹೊರಹೋಗುತ್ತಿವೆ. ಆದಾಗ್ಯೂ ಮಾರುಕಟ್ಟೆ ಒಂದು ದಿನವೂ ಲೋಯರ್ ಸರ್ಕ್ಯೂಟ್​ಗೆ ಬಂದಿಲ್ಲ. ಇದಕ್ಕೆ ಕಾರಣ ಎಸ್​ಐಪಿ. ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್ ಮೂಲಕ ಸಾಕಷ್ಟು ಸಂಖ್ಯೆಯಲ್ಲಿ ಹೂಡಿಕೆದಾರರು ಮ್ಯೂಚುವಲ್ ಫಂಡ್​ಗಳ ಮೇಲೆ ಹಣ ಹಾಕುತ್ತಿರುವುದರಿಂದ ಮಾರುಕಟ್ಟೆ ಹೆಚ್ಚು ಹಿನ್ನಡೆ ಕಂಡಿಲ್ಲ.

SIP power: ಷೇರು ಮಾರುಕಟ್ಟೆಯನ್ನು ಕಾಪಾಡುತ್ತಿರುವ ಸಾಮಾನ್ಯ ಜನರ ಎಸ್​ಐಪಿ
ಎಸ್​ಐಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2025 | 11:17 AM

Share

ನವದೆಹಲಿ, ಫೆಬ್ರುವರಿ 13: ಷೇರು ಮಾರುಕಟ್ಟೆಯಿಂದ ಸಾವಿರಾರು ಕೋಟಿ ರೂ ಮೌಲ್ಯದ ಹೂಡಿಕೆಗಳನ್ನು ವಿದೇಶೀ ಹೂಡಿಕೆದಾರರು ಹೊರತೆಗೆದುಕೊಳ್ಳುತ್ತಿದ್ದರೂ ಭಾರತೀಯ ಷೇರು ಬಜಾರು ತೀರಾ ನೆಲಕಚ್ಚದೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಮ್ಯುಚುವಲ್ ಫಂಡ್ ಸಂಸ್ಥೆಯಿಂದ (ಎಎಂಎಫ್​ಐ) ಬಿಡುಗಡೆ ಮಾಡಲಾದ ದತ್ತಾಂಶದ ಪ್ರಕಾರ ಜನವರಿ ತಿಂಗಳಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ 39,687.78 ಕೋಟಿ ರೂ ಬಂಡವಾಳ ಸಿಕ್ಕಿದೆ. ಇದು ಫಂಡ್​ಗಳಿಂದ ಹಿಂಪಡೆಯಲಾದ ಹಣವನ್ನು ಕಳೆದು ಸಿಕ್ಕಿರುವ ನಿವ್ವಳ ಒಳಹರಿವು. ಹಿಂದಿನ ತಿಂಗಳಾದ ಡಿಸೆಂಬರ್​ಗೆ ಹೋಲಿಸಿದರೆ ಜನವರಿಯಲ್ಲಿ ಈ ನಿವ್ವಳ ಒಳಹರಿವಿನಲ್ಲಿ ಶೇ. 4ರಷ್ಟು ಕಡಿಮೆ ಆಗಿದೆ. ಆದರೂ ಕೂಡ ಹೊರಹರಿವಿಗಿಂತ ಒಳಹರಿವು ಹೆಚ್ಚು ಇದೆ. ಕುತೂಹಲ ಎಂದರೆ, ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ ಕಳೆದ ನಾಲ್ಕು ವರ್ಷಗಳಿಂದ ಪ್ರತೀ ತಿಂಗಳೂ ನಿವ್ವಳ ಒಳಹರಿವು ಸಿಕ್ಕಿದೆ.

ಮಾರುಕಟ್ಟೆ ಕೈಹಿಡಿದ ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್ (ಎಸ್​ಐಪಿ)

ಮ್ಯೂಚುವಲ್ ಫಂಡ್​ಗಳಲ್ಲಿ ನಿಯಮಿತವಾಗಿ ಹೂಡಿಕೆ ಮಾಡುವ ಒಂದು ವಿಧಾನ ಎಸ್​ಐಪಿ. ಈ ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್ ಮೂಲಕ ಸಾಕಷ್ಟು ಹೂಡಿಕೆದಾರರು ಹಣ ತೊಡಗಿಸುತ್ತಾರೆ. ಮಾರುಕಟ್ಟೆ ಕುಸಿತದ ಟ್ರೆಂಡ್​ನಲ್ಲಿದ್ದರೂ ಜನವರಿಯಲ್ಲಿ ಎಸ್​ಐಪಿ ಮೂಲಕ 26,400 ಕೋಟಿ ರೂ ಹಣ ಮ್ಯೂಚುವಲ್ ಫಂಡ್​ಗಳಿಗೆ ಸಂದಾಯವಾಗಿದೆ. ಡಿಸೆಂಬರ್ ತಿಂಗಳಲ್ಲಿ 26,459 ಕೋಟಿ ರೂ ಎಸ್​ಐಪಿ ಮೂಲಕ ಬಂದಿತ್ತು. ಜನವರಿಯಲ್ಲಿ 26,000 ಕೋಟಿ ರೂ ಮಟ್ಟಕ್ಕಿಂತ ಮೇಲೆಯೇ ಎಸ್​ಐಪಿ ಹೂಡಿಕೆಗಳಿವೆ.

ಇದನ್ನೂ ಓದಿ: ಷೇರುಪೇಟೆ ರಕ್ತದೋಕುಳಿ; ಮಕಾಡೆ ಮಲಗಿರುವ ಸಾವಿರಕ್ಕೂ ಹೆಚ್ಚು ಷೇರುಗಳು

ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ ಬಂದ ಹೂಡಿಕೆ ಒಳ ಹರಿವಿನಲ್ಲಿ ಎಸ್​ಐಪಿ ಪಾಲು ದೊಡ್ಡದು. ವಿದೇಶೀ ಸಾಂಸ್ಥಿಕ ಹೂಡಿಕೆದಾರರು ಷೇರು ಮಾರುಕಟ್ಟೆಯಿಂದ ತಮ್ಮ ಹಣ ಹಿಂಪಡೆಯುತ್ತಿದ್ದರೂ ಒಮ್ಮೆಯೂ ಕೂಡ ಮಾರುಕಟ್ಟೆ ಲೋಯರ್ ಸರ್ಕ್ಯುಟ್​ಗೆ ಬರಲಿಲ್ಲ. ಸಿಸ್ಟಮ್ಯಾಟಿಕ್ ಇನ್ವೆಸ್ಟ್​ಮೆಂಟ್ ಪ್ಲಾನ್​ಗಳ ಮೂಲಕ ದೇಶೀಯ ಹೂಡಿಕೆದಾರರು ಮಾರುಕಟ್ಟೆಗೆ ಹಣ ಹರಿಸುತ್ತಿರುವುದು ಈ ಪತನ ಕುಸಿತ ತಡೆಯಲು ಪ್ರಮುಕ ಕಾರಣ.

ಒಟ್ಟಾರೆ ನಿರ್ವಹಿತ ಆಸ್ತಿಯಲ್ಲಿ ತುಸು ಇಳಿಮುಖ….

ಈಕ್ವಿಟಿ ಮ್ಯೂಚುವಲ್ ಫಂಡ್​ಗಳ ಬಳಿ ಇರುವ ಒಟ್ಟು ನಿರ್ವಹಿತ ಆಸ್ತಿ (ಎಯುಎಂ- ಅಸೆಟ್ಸ್ ಅಂಡರ್ ಮ್ಯಾನೇಜ್ಮೆಂಟ್) ಮೊತ್ತ ಶೇ. 4ರಷ್ಟು ಕಡಿಮೆ ಆಗಿದೆ. ಡಿಸೆಂಬರ್​ನಲ್ಲಿ 30.57 ಲಕ್ಷ ಕೋಟಿ ರೂ ಇದ್ದ ಬಂಡವಾಳವು ಜನವರಿಯಲ್ಲಿ 29.47ಕ್ಕೆ ಇಳಿದಿದೆ. ನಿರ್ವಹಿತ ಆಸ್ತಿಯಲ್ಲಿ ಸುಮಾರು ಒಂದು ಲಕ್ಷ ಕೋಟಿ ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ.

ಈಕ್ವಿಟಿ ಮ್ಯೂಚುವಲ್ ಫಂಡ್​ಗಳ ಪೈಕಿ ಜನವರಿಯಲ್ಲಿ ಲಾರ್ಜ್ ಕ್ಯಾಪ್ ಫಂಡ್​ಗಳಿಗೆ ಬಂದ ಬಂಡವಾಳ ಒಳಹರಿವು ಶೇ. 52.3ರಷ್ಟು ಹೆಚ್ಚಾಗಿದೆ. ಸ್ಮಾಲ್​ಕ್ಯಾಪ್ ಫಂಡ್​ಗಳಿಗೆ ಶೇ. 22.6ರಷ್ಟು ಹೆಚ್ಚು ಹೂಡಿಕೆ ಬಂದಿವೆ.

ಇದನ್ನೂ ಓದಿ: ಅಮೆರಿಕದ ಚಿಪ್​ಟೂಲ್ ತಯಾರಿಸುವ ಲ್ಯಾಮ್ ರಿಸರ್ಚ್​ನಿಂದ 10,000 ಕೋಟಿ ರೂ ಹೂಡಿಕೆ; ಇನ್ವೆಸ್ಟ್ ಕರ್ನಾಟಕಕ್ಕೆ ಉದ್ಯಮವಲಯದಿಂದ ನಿರೀಕ್ಷೆಮೀರಿ ಸ್ಪಂದನೆ

ಆದರೆ, ಸೆಕ್ಟರ್ ಅಥವಾ ಥೀಮ್ಯಾಟಿಕ್ ಮ್ಯೂಚುವಲ್ ಫಂಡ್​ಗಳಿಗೆ ಬಂದ ಹೂಡಿಕೆ ಒಳ ಹರಿವಿನಲ್ಲಿ ಶೇ. 41.2ರಷ್ಟು ಇಈಲಿಮುಖವಾಗಿದೆ. ಆದಾಗ್ಯೂ, ಸ್ಮಾಲ್ ಕ್ಯಾಪ್ ಮತ್ತು ಲಾರ್ಜ್ ಕ್ಯಾಪ್ ಫಂಡ್​ಗಳಿಗೆ ಹೋಲಿಸಿದರೆ ಥೀಮ್ಯಾಟಿಕ್ ಫಂಡ್​ಗಳಿಗೆ ಅತಿಹೆಚ್ಚು ಹೂಡಿಕೆಗಳು ಬಂದಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ