AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyundai: ಭಾರತದ ಷೇರುಮಾರುಕಟ್ಟೆಗೆ ಬರಲು ಹ್ಯೂಂಡಾಯ್ ಕಾರ್ ಕಂಪನಿ ಆಲೋಚನೆ; ಬಂದರೆ ಎಲ್ಲಾ ದಾಖಲೆ ಧೂಳೀಪಟವಾಗುವ ಸಾಧ್ಯತೆ

Hyundai IPO likely in Deepavali: ದಕ್ಷಿಣ ಕೊರಿಯಾದ ಆಟೊಮೊಬೈಲ್ ಸಂಸ್ಥೆ ಹ್ಯೂಂಡಾಯ್ ಭಾರತದ ಷೇರುಮಾರುಕಟ್ಟೆಯಲ್ಲಿ ಲಿಸ್ಟ್ ಆಗಲು ನಿರ್ಧರಿಸಿದೆ ಎನ್ನುವ ಸುದ್ದಿ ಇದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹ್ಯುಂಡೈನ ಐಪಿಒ ಆಫರ್ ಬಿಡುಗಡೆ ಆಗಬಹುದು. ಇದುವರೆಗಿನ ಭಾರತದ ಐಪಿಒಗಳಲ್ಲೇ ಇದು ದೊಡ್ಡದಿರಲಿದೆ. ಹ್ಯೂಂಡಾಯ್ ಮೋಟಾರ್ ಕೋ ಭಾರತದ ಮಾರುಕಟ್ಟೆ ಪ್ರವೇಶಿಸಿ ಮೂರು ದಶಕದ ಬಳಿಕ ಷೇರು ಮಾರುಕಟ್ಟೆಗೆ ಅಡಿ ಇಡಲು ಹೊರಟಿರುವುದು ಕುತೂಹಲ ಮೂಡಿಸಿದೆ.

Hyundai: ಭಾರತದ ಷೇರುಮಾರುಕಟ್ಟೆಗೆ ಬರಲು ಹ್ಯೂಂಡಾಯ್ ಕಾರ್ ಕಂಪನಿ ಆಲೋಚನೆ; ಬಂದರೆ ಎಲ್ಲಾ ದಾಖಲೆ ಧೂಳೀಪಟವಾಗುವ ಸಾಧ್ಯತೆ
ಹ್ಯೂಂಡಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 05, 2024 | 11:06 AM

Share

ನವದೆಹಲಿ, ಫೆಬ್ರುವರಿ 5: ದಕ್ಷಿಣ ಕೊರಿಯಾ ಮೂಲದ ಕಾರ್ ಕಂಪನಿಯಾದ ಹ್ಯೂಂಡಾಯ್ ಮೋಟಾರ್ಸ್ (Hyundai Motor Co) ಭಾರತದ ಷೇರು ಮಾರುಕಟ್ಟೆ ಪ್ರವೇಶಿಸಲು ಯೋಜಿಸಿದೆ. ಹ್ಯುಂಡೈ ಸಂಸ್ಥೆ ಐಪಿಒ (Hyundai IPO) ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಈ ವರದಿ ಪ್ರಕಾರ ಹ್ಯೂಂಡಾಯ್ ಐಪಿಒ ಅತಿದೊಡ್ಡದಿರಲಿದೆ. 21,000 ಕೋಟಿ ರೂ ಗಾತ್ರದ ಎಲ್​ಐಸಿ ಐಪಿಒಗಿಂತಲೂ ಹ್ಯುಂಡೈ ಬಂಡವಾಳ ಗುರಿ ದೊಡ್ಡದಿರಲಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಐಪಿಒ ಆಫರ್ ಕೊಡಬಹುದು ಎನ್ನಲಾಗಿದೆ.

ಹ್ಯೂಂಡಾಯ್ ಭಾರತದ ಮಾರುಕಟ್ಟೆಗೆ ಬಂದು ಮೂರು ದಶಕಗಳಾಗಿವೆ. ಈಗ ಷೇರುಪೇಟೆಯಲ್ಲಿ ಲಿಸ್ಟ್ ಆಗಲು ಯೋಜಿಸಿರುವುದು ಗಮನಾರ್ಹ. ಸೌತ್ ಕೊರಿಯಾದ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗಿದ್ದು, ಅದರ ಷೇರುಸಂಪತ್ತು ಅಥವಾ ಮಾರ್ಕೆಟ್ ಕ್ಯಾಪ್ 39 ಬಿಲಿಯನ್ ಡಾಲರ್ ಇದೆ. ಭಾರತದಲ್ಲಿ ಮಾರುತಿ ಸುಜುಕಿ ಬಿಟ್ಟರೆ ಹ್ಯುಂಡೈ ಮೋಟಾರ್ಸ್ ಕಂಪನಿ ಅತಿದೊಡ್ಡದು. ಇದರ ಮೌಲ್ಯವನ್ನು 22ರಿಂದ 28 ಬಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಕೇಂದ್ರದಿಂದ ಅತಿಹೆಚ್ಚು ತೆರಿಗೆ ಪಾಲು ಪಡೆಯುವ ರಾಜ್ಯಗಳ್ಯಾವುವು? ಕರ್ನಾಟಕದ ಪಾಲೆಷ್ಟು? ಇಲ್ಲಿದೆ ತೆರಿಗೆ ಹಂಚಿಕೆ ಸೂತ್ರ ಇತ್ಯಾದಿ ಮಾಹಿತಿ

ಹ್ಯೂಂಡಾಯ್ ಮೋಟಾರ್ಸ್ ಸಂಸ್ಥೆ ಭಾರತದಲ್ಲಿ ಷೇರುಪೇಟೆಗೆ ಪದಾರ್ಪಣೆ ಮಾಡುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಹಲವು ಇನ್ವೆಸ್ಟ್​ಮೆಂಟ್ ಬ್ಯಾಂಕುಗಳ ಅಧಿಕಾರಿಗಳು ದಕ್ಷಿಣ ಕೊರಿಯಾ ರಾಜಧಾನಿ ಸೋಲ್ ನಗರಕ್ಕೆ ಭೇಟಿ ನೀಡಿದ್ದಾರೆ. ಹ್ಯುಂಡೈ ಐಪಿಒ ಯೋಜನೆ ಕುರಿತು ಮಾತುಕತೆ ನಡೆದಿರಬಹುದು ಎಂದು ಹೇಳಲಾಗಿದೆ.

ಸೌತ್ ಕೊರಿಯಾ ಆಡಳಿತದಿಂದ ಬಿಸಿ…?

ದೇಶದ ಕಾರ್ಪೊರೇಟ್ ಕಂಪನಿಗಳು ಕಾಲ ಕಾಲಕ್ಕೆ ಸುಧಾರಣೆ ಮಾಡಿಕೊಳ್ಳಬೇಕು, ಅಪ್​ಡೇಟ್ ಆಗುತ್ತಿರಬೇಕು ಎಂಬುದು ಸೌತ್ ಕೊರಿಯಾ ಆಡಳಿತದ ಆಗ್ರಹವಾಗಿದೆ. ಜಪಾನ್ ಕಾರ್ಪೊರೇಟ್ ಸುಧಾರಣೆಗಳ ಮಾದರಿಯಲ್ಲಿ ಕೊರಿಯಾ ಸರ್ಕಾರ ಕೂಡ ತನ್ನ ಕಳಪೆ ಕಾರ್ಪೊರೇಟ್ ಕಂಪನಿಗಳನ್ನು ಬಹಿರಂಗವಾಗಿ ಹೆಸರಿಸುವ ಕೆಲಸಕ್ಕೆ ಕೈಹಾಕಲು ಯೋಜಿಸಿದೆ. ಈ ಹಿನ್ನೆಲೆಯಲ್ಲಿ ಹ್ಯುಂಡೈ ಸಂಸ್ಥೆ ಒಂದಷ್ಟು ಯೋಜನೆಗಳನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನ ತಯಾರಿಸುವ ಯಂತ್ರಗಳ ನೊಂದಣಿ ಆಗದಿದ್ದರೆ ಲಕ್ಷ ರೂ ದಂಡ: ಆದಾಯ ಸೋರಿಕೆ ತಡೆಗೆ ಸರ್ಕಾರ ಕ್ರಮ

ಈ ವರ್ಷ ಹಾಗೂ ಮುಂದಿನ ವರ್ಷ ಲಕ್ಷಾಂತರ ಕೋಟಿ ಹಣದ ಹೂಡಿಕೆ ಮಾಡಲು ಹ್ಯುಂಡೈ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆ ಮೂಲಕ ಒಂದಷ್ಟು ಬಂಡವಾಳ ಸಂಗ್ರಹಿಸುವುದು ಅದರ ಚಿಂತನೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ