AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಬಿಎಂನಲ್ಲಿ ಲೇ ಆಫ್; ಏಳು ನಿಮಿಷದ ಸಭೆಯಲ್ಲಿ ಪ್ರಕಟವಾದ ನಿರ್ಧಾರಕ್ಕೆ ಬೆಚ್ಚಿಬಿದ್ದ ಉದ್ಯೋಗಿಗಳು

IBM layoffs: ಅಮೆರಿಕ ಮೂಲದ ಐಬಿಎಂ ಸಂಸ್ಥೆ ಮಾರ್ಕೆಟಿಂಗ್ ಮತ್ತು ಕಮ್ಯೂನಿಕೇಶನ್ಸ್ ವಿಭಾಗದಲ್ಲಿ ಲೇ ಆಫ್ ನಡೆಸಲು ನಿರ್ಧರಿಸಿದೆ. ಕಮ್ಯೂನಿಕೇನ್ಸ್ ವಿಭಾಗದ ಪ್ರಮುಖರು ನಡೆಸಿದ ಏಳು ನಿಮಿಷದ ಸಭೆಯಲ್ಲಿ ಉದ್ಯೋಗಿಗಳಿಗೆ ಈ ನಿರ್ಧಾರ ತಿಳಿಸಲಾಗಿದೆ. ಆದರೆ ಎಷ್ಟು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎಂಬುದು ಗೊತ್ತಾಗಿಲ್ಲ. ಜನವರಿಯಲ್ಲಿ ಸಿಕ್ಕ ಸುಳಿವು ಪ್ರಕಾರ, 3,900 ಮಂದಿಯನ್ನು ಲೇ ಆಫ್ ಮಾಡುವ ಪ್ಲಾನ್ ಐಬಿಎಂನಲ್ಲಿ ಇತ್ತೆನ್ನಲಾಗಿದೆ.

ಐಬಿಎಂನಲ್ಲಿ ಲೇ ಆಫ್; ಏಳು ನಿಮಿಷದ ಸಭೆಯಲ್ಲಿ ಪ್ರಕಟವಾದ ನಿರ್ಧಾರಕ್ಕೆ ಬೆಚ್ಚಿಬಿದ್ದ ಉದ್ಯೋಗಿಗಳು
ಐಬಿಎಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 14, 2024 | 2:26 PM

Share

ನವದೆಹಲಿ, ಮಾರ್ಚ್ 14: ಐಟಿ ಸಂಸ್ಥೆ ಐಬಿಎಂ ಮತ್ತೊಮ್ಮೆ ಲೇ ಆಫ್ (layoffs) ಕ್ರಮ ಕೈಗೊಂಡಿದೆ. ಸಂಸ್ಥೆಯ ಮಾರ್ಕೆಟಿಂಗ್ ಮತ್ತು ಕಮ್ಯೂನಿಕೇಶನ್ಸ್ ವಿಭಾಗದಲ್ಲಿನ ಉದ್ಯೋಗಿಗಳ ಲೇ ಆಫ್ ಆಗಿದೆ. ಆದರೆ, ಎಷ್ಟು ಮಂದಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂಬುದು ಗೊತ್ತಾಗಿಲ್ಲ. ಐಬಿಎಂನ ಚೀಫ್ ಕಮ್ಯೂನಿಕೇಶನ್ಸ್ ಆಫೀಸರ್ ಜೋನಾಥನ್ ಅಡಾಶೆಕ್ ಅವರು ತಮ್ಮ ವಿಭಾಗದ ಉದ್ಯೋಗಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತಿಳಿಸಿದರೆನ್ನಲಾಗಿದೆ. ಕೇವಲ ಏಳು ನಿಮಿಷ ನಡೆದ ಈ ಚುಟುಕು ಸಭೆಯಲ್ಲಿ ಲೇ ಆಫ್ ನಿರ್ಧಾರ ತಿಳಿದು ಉದ್ಯೋಗಿಗಳಿಗೆ ಶಾಕ್ ಆಗಿತ್ತು.

ಆದರೆ, ಐಬಿಎಂನಿಂದ ಈ ಲೇ ಆಫ್ ನಿರ್ಧಾರ ಅಧಿಕೃತವಾಗಿ ಬಹಿರಂಗವಾಗಿಲ್ಲ. ಆದರೆ, ಐಬಿಎಂನಲ್ಲಿ ಉದ್ಯೋಗಕಡಿತ ಅಗಬಹುದು ಎಂಬ ಸುಳಿವು ಇತ್ತೀಚೆಗೆ ಸಿಕ್ಕಿತ್ತು. ಸಿಇಒ ಅರವಿಂದ್ ಕೃಷ್ಣ ಅವರು ಮುಂಬರುವ ವರ್ಷಗಳಲ್ಲಿ ಹೊಸ ನೇಮಕಾತಿ ಬದಲು ವಿವಿಧ ಹುದ್ದೆಗಳನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಮೂಲಕ ನಿಭಾಯಿಸುವ ಪ್ರಯತ್ನ ಆಗಲಿದೆ ಎಂದು ಡಿಸೆಂಬರ್​ನಲ್ಲಿ ಹೇಳಿದ್ದರು.

ಇದನ್ನೂ ಓದಿ: ಸರ್ಕಾರದ ಸಿಡಾಟ್ ಅಭಿವೃದ್ದಿಪಡಿಸಿದ ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಶನ್​ಗೆ ಪೇಟೆಂಟ್; ಇದು ಸ್ವಾವಲಂಬಿ ಭಾರತದ ಫಲಶೃತಿ ಎಂದ ಸಚಿವ ವೈಷ್ಣವ್

ಅವರ ಪ್ರಕಾರ ಐದು ವರ್ಷದಲ್ಲಿ ಶೇ. 30ರಷ್ಟು ಉದ್ಯೋಗಗಳ ಕೆಲಸವನ್ನು ಎಐ ಮತ್ತು ಆಟೊಮೇಶನ್​ ಮಾಡಲಿವೆಯಂತೆ. ಅದರ ಭಾಗವಾಗಿ ಲೇ ಆಫ್ ಆಗಿದೆಯಾ ತಿಳಿದುಬಂದಿಲ್ಲ.

ಐಬಿಎಂ 3,900 ಜನರನ್ನು ಕೆಲಸದಿಂದ ತೆಗೆಯಲಿರುವುದಾಗಿ ಜನವರಿಯಲ್ಲಿ ಹೇಳಿತ್ತು. ಈ ಲೇ ಆಫ್​ನಿಂದ ಸಂಸ್ಥೆಗೆ 400 ಮಿಲಿಯನ್ ಡಾಲರ್ ಹಣ ಉಳಿತಾಯವಾಗಬಹುದು. ಈ ಹಣವನ್ನು ಪುನಾರಚನೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಐಬಿಎಂನ ಚೀಫ್ ಫೈನಾನ್ಷಿಯಲ್ ಆಫೀಸರ್ ಜೇಮ್ಸ್ ಕೆವನಾಘ್ ಹೇಳಿದ್ದರು.

ಇದನ್ನೂ ಓದಿ: ವಯಾಕಾಮ್18ನಲ್ಲಿ ಶೇ. 13ರಷ್ಟು ಷೇರುಪಾಲು ಖರೀದಿಸಿದ ರಿಲಾಯನ್ಸ್ ಇಂಡಸ್ಟ್ರೀಸ್

2022ರಿಂದ ಈಚೆ ವಿವಿಧ ಟೆಕ್ ಕಂಪನಿಗಳು ಬಹಳಷ್ಟು ಉದ್ಯೋಗಿಗಳನ್ನು ಲೇ ಆಫ್ ಮಾಡಿವೆ. ಈ ವರ್ಷ ಎರಡು ತಿಂಗಳಲ್ಲಿ 204 ಟೆಕ್ ಕಂಪನಿಗಳು ಉದ್ಯೋಗಕಡಿತ ಕೈಗೊಂಡಿವೆ. ಅಂದಾಜು 50,000 ಮಂದಿ ಟೆಕ್ಕಿಗಳು ಕೆಲಸ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?