AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ವಿಶ್ವಕಪ್ ಫೈನಲ್: ವಿಮಾನಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್; ಅಹ್ಮದಾಬಾದ್​ಗೆ ಫ್ಲೈಟ್ ಬೆಲೆ ಗಗನಕ್ಕೆ

Flight Ticket Prices To Ahmedabad: ನವೆಂಬರ್ 19ಕ್ಕೆ ಫೈನಲ್ ಪಂದ್ಯ ಇದೆ. ವೀಕೆಂಡ್​ನಲ್ಲಿ ದೇಶದ ವಿವಿಧ ಭಾಗಗಳಿಂದ ಅಹ್ಮದಾಬಾದ್​ಗೆ ಹೆಚ್ಚುವರಿ ಫ್ಲೈಟ್​ಗಳನ್ನು ನಿಯೋಜಿಸಲಾಗಿದೆ. ಆದರೂ ಫ್ಲೈಟ್ ಬೆಲೆ ಗಗನಕ್ಕೇರಿದೆ. ಇಂದು ನವೆಂಬರ್ 17 ಮತ್ತು ನಾಳೆ ನವೆಂಬರ್ 18ಕ್ಕೆ ಅಹ್ಮದಾಬಾದ್​ಗೆ ಹೋಗುವ ಎಲ್ಲಾ ಫ್ಲೈಟ್​ಗಳಿಗೆ ಡಿಮ್ಯಾಂಡ್ ಬಹಳ ಹೆಚ್ಚಿದೆ. ಬೆಂಗಳೂರಿನಿಂದ ಅಹ್ಮದಾಬಾದ್​ಗೆ ಬಿಸಿನೆಸ್ ಕ್ಲಾಸ್ ಟಿಕೆಟ್ ಬೆಲೆ 1.6 ಲಕ್ಷ ರೂವರೆಗೂ ಇದೆ.

ಐಸಿಸಿ ವಿಶ್ವಕಪ್ ಫೈನಲ್: ವಿಮಾನಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್; ಅಹ್ಮದಾಬಾದ್​ಗೆ ಫ್ಲೈಟ್ ಬೆಲೆ ಗಗನಕ್ಕೆ
ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 17, 2023 | 6:03 PM

Share

ಬೆಂಗಳೂರು, ನವೆಂಬರ್ 17: ಭಾರತ ಕ್ರಿಕೆಟ್ ತಂಡ (India Cricket Team) ಒಂದೂ ಸೋಲಿಲ್ಲದೇ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ವಿಶ್ವಕಪ್ ಉದ್ಘಾಟನೆ ನಡೆದ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಫೈನಲ್ ಪಂದ್ಯವೂ ನಡೆಯಲಿದೆ. ಭಾರತ ಮೂರನೇ ಬಾರಿ ಚಾಂಪಿಯನ್ ಆಗಲು ಪ್ರಯತ್ನಿಸಿದರೆ, ಆಸ್ಟ್ರೇಲಿಯಾ ದಾಖಲೆಯ ಆರನೇ ಬಾರಿ ಚಾಂಪಿಯನ್ ಪಟ್ಟಕ್ಕೆ ಕಣ್ಣಿಟ್ಟಿದೆ. 1.32 ಲಕ್ಷ ಪ್ರೇಕ್ಷಕರಿಗೆ ಸ್ಥಳಾವಕಾಶ ಈ ಸ್ಟೇಡಿಯಂನಲ್ಲಿದ್ದು, ಅಂತೆಯೇ ಸಾಕಷ್ಟು ಜನರು ದೇಶದ ವಿವಿಧೆಡೆಯಿಂದ ಅಹ್ಮದಾಬಾದ್​ಗೆ ಬರಲಿದ್ದಾರೆ. ವಿಮಾನ ಟಿಕೆಟ್​ಗಳಿಗೆ (flight ticket) ಹಿಂದೆಂದಿಗಿಂತಲೂ ಡಿಮ್ಯಾಂಡ್ ಏರ್ಪಟ್ಟಿದೆ.

ನವೆಂಬರ್ 19ಕ್ಕೆ ಫೈನಲ್ ಪಂದ್ಯ ಇದೆ. ವೀಕೆಂಡ್​ನಲ್ಲಿ ದೇಶದ ವಿವಿಧ ಭಾಗಗಳಿಂದ ಅಹ್ಮದಾಬಾದ್​ಗೆ ಹೆಚ್ಚುವರಿ ಫ್ಲೈಟ್​ಗಳನ್ನು (additional flight) ನಿಯೋಜಿಸಲಾಗಿದೆ. ಆದರೂ ಫ್ಲೈಟ್ ಬೆಲೆ ಗಗನಕ್ಕೇರಿದೆ. ಇಂದು ನವೆಂಬರ್ 17 ಮತ್ತು ನಾಳೆ ನವೆಂಬರ್ 18ಕ್ಕೆ ಅಹ್ಮದಾಬಾದ್​ಗೆ ಹೋಗುವ ಎಲ್ಲಾ ಫ್ಲೈಟ್​ಗಳಿಗೆ ಡಿಮ್ಯಾಂಡ್ ಬಹಳ ಹೆಚ್ಚಿದೆ.

ಇದನ್ನೂ ಓದಿ: ಮಿಂಚುತ್ತಿದೆ ‘ಬ್ರ್ಯಾಂಡ್’ ಶಮಿ; ಜಾಹೀರಾತಿಗಾಗಿ ಎಡೆತಾಕುತ್ತಿರುವ ಕಂಪನಿಗಳು; ಮೊಹಮ್ಮದ್ ಶಮಿಗೆ ಹರಿದುಬರುತ್ತಿದೆ ಹಣದ ಹೊಳೆ

ಮೇಕ್ ಮೈ ಟ್ರಿಪ್ ಪ್ಲಾಟ್​ಫಾರ್ಮ್​ನಲ್ಲಿರುವ ಮಾಹಿತಿ ಪ್ರಕಾರ ಇಂದು ನವೆಂಬರ್ 17ರಂದು ಬೆಂಗಳೂರಿನಿಂದ ಅಹ್ಮದಾಬಾದ್​ಗೆ ಫ್ಲೈಟ್ ಬೆಲೆ 20,577 ರೂನಿಂದ ಆರಂಭವಾಗುತ್ತದೆ. 80,000 ರೂವರೆಗೂ ಟಿಕೆಟ್ ಬೆಲೆ ಇದೆ.

ಇನ್ನು, ನವೆಂಬರ್ 18, ಶನಿವಾರದಂದು ಬೆಂಗಳೂರಿನಿಂದ ಅಹ್ಮದಾಬಾದ್​ಗೆ ಫ್ಲೈಟ್ ಟಿಕೆಟ್ ಬೆಲೆ 18,000 ರೂನಿಂದ ಆರಂಭವಾಗಿ 47,000 ರೂವರೆಗೂ ಇದೆ.

ಈ ಮೇಲಿನವು ಎಕನಾಮಿ ಕ್ಲಾಸ್​ನ ಫ್ಲೈಟ್ ಬೆಲೆ. ಬಿಸಿನೆಸ್ ಕ್ಲಾಸ್ ಟಿಕೆಟ್ ಬೇಕೆಂದರೆ ಇನ್ನೂ ಹೆಚ್ಚಿದೆ. ನವೆಂಬರ್ 18ರಂದು ಬೆಂಗಳೂರಿನಿಂದ ಅಹ್ಮದಾಬಾದ್​ಗೆ ಬಿಸಿನೆಸ್ ಕ್ಲಾಸ್ ಫ್ಲೈಟ್ ಟಿಕೆಟ್ ಬೆಲೆ 52,000 ರೂನಿಂದ ಆರಂಭವಾಗಿ 1,60,000 ರೂವರೆಗೂ ಇದೆ.

ಇದನ್ನೂ ಓದಿ: Explained: ಇಸ್ರೇಲ್ ಯುದ್ಧದ ಮಧ್ಯೆಯೂ ಕಚ್ಛಾ ತೈಲ ಬೆಲೆ ಇಳಿದಿರುವುದು ಯಾಕೆ? ಇಲ್ಲಿವೆ ಕಾರಣಗಳು

ಇನ್ನು, ಇವತ್ತು (ನ. 17) ಬೆಂಗಳೂರಿನಿಂದ ಅಹ್ಮದಾಬಾದ್​ಗೆ ಫ್ಲೈಟ್ ಹತ್ತುವುದಾದರೆ ಟಿಕೆಟ್ ಬೆಲೆ 1 ಲಕ್ಷ ರೂನಿಂದ ಆರಂಭವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?