AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICICI Bank: ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ನೆಟ್​ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ

ದೇಶದ ಎರಡನೇ ಅತಿದೊಡ್ಡ ಖಾಸಗಿ ಬ್ಯಾಂಕ್​ ಆದ ಐಸಿಐಸಿಐ ಬ್ಯಾಂಕ್​ನ ಗ್ರಾಹಕರು ನೆಟ್​ ಬ್ಯಾಂಕಿಂಗ್​ ಸೇವೆಯಲ್ಲಿ ಸಮಸ್ಯೆಯನ್ನು ಎದುರಿಸಿದ ಬಗ್ಗೆ ದೂರಿತ್ತಿದ್ದಾರೆ.

ICICI Bank: ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ನೆಟ್​ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 25, 2022 | 5:47 PM

Share

ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಐಸಿಐಸಿಐ ಬ್ಯಾಂಕ್​ನ (ICICI Bank) ನೆಟ್​ ಬ್ಯಾಂಕಿಂಗ್​ ಸೇವೆಯು ಸಮಸ್ಯೆಗೆ ಈಡಾಗಿರುವ ಬಗ್ಗೆ ಗ್ರಾಹಕರು ಶುಕ್ರವಾರ ದೂರು ನೀಡಿದ್ದು, ಪುಟ ಪ್ರತಿಕ್ರಿಯಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಐಸಿಐಸಿಐ ಬ್ಯಾಂಕ್​ನ ಆ್ಯಪ್​ ಮೂಲಕ ಲಾಗ್ ಇನ್ ಆಗುವುದಕ್ಕೆ ಪ್ರಯತ್ನ ಮಾಡಿದವರಿಗೂ ಕಷ್ಟವಾಗಿದೆ. “ಸದ್ಯಕ್ಕೆ ನಿಮ್ಮ ಮನವಿಯನ್ನು ಪ್ರೊಸೆಸ್​ ಮಾಡುವುದಕ್ಕೆ ಕಷ್ಟವಾಗುತ್ತಿದೆ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ. ಹಲವು ಗ್ರಾಹಕರು ಟ್ವಿಟರ್​ ಮೂಲಕ ತಮ್ಮ ಅಹವಾಲನ್ನು ಹೇಳಿಕೊಂಡಿದ್ದು, ಇಂಟರ್​ನೆಟ್​ ಬ್ಯಾಂಕಿಂಗ್ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಐಸಿಐಸಿಐ ಡೈರೆಕ್ಟ್ ಟ್ವಿಟರ್​ ಹ್ಯಾಂಡಲ್​ನಿಂದ ಮಾಹಿತಿಯನ್ನು ನೀಡಲಾಗಿದೆ. “ಪ್ರಿಯ ಗ್ರಾಹಕರೇ, http://ICICIdirect.com ಸದ್ಯಕ್ಕೆ ಡೌನ್ ಆಗಿದೆ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಸಹಜ ಸ್ಥಿತಿಗೆ ತರುವ ಸಲುವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಈ ಬಗ್ಗೆ ಅಪ್​ಡೇಟ್​ ಮಾಡುತ್ತೇವೆ. ಆಗಿರುವ ಅನನುಕೂಲಕ್ಕೆ ವಿಷಾದಿಸುತ್ತೇವೆ,” ಎಂದು ಟ್ವೀಟ್ ಮಾಡಲಾಗಿದೆ. ಬಳಕೆದಾರರೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದು, @ICICIBank_Care @ICICIBank ಟ್ಯಾಗ್ ಮಾಡಿದ್ದಾರೆ. ವೆಬ್​ ಆಗಲಿ ಅಥವಾ ಮೊಬೈಲ್​ ಆ್ಯಪ್ ಆಗಲೀ ಯಾವುದೂ ಕಳೆದ 3 ಗಂಟೆಯಿಂದ ಕಾರ್ಯ ನಿರ್ವಹಿಸುತ್ತಿಲ್ಲ ಎಂದಿದ್ದಾರೆ.

ಮತ್ತೊಬ್ಬ ಬಳಕೆದಾರರು ಬರೆದಿದ್ದು, ಎಲ್ಲ @ICICIBank ಸೇವೆಗಳು ಇಂಟರ್ನಲ್​ ಸರ್ವರ್​ ಎರರ್ ಕಾರಣಕ್ಕೆ ಡೌನ್ ಆಗಿವೆ @ICICI_Direct ಡಿಮ್ಯಾಟ್, ಯುಪಿಐ, ನೆಟ್​ಬ್ಯಾಂಕಿಂಗ್, ಕ್ರೆಡಿಟ್​ ಕಾರ್ಡ್, ಡೆಬಿಟ್​ ಕಾರ್ಡ್​ ಮತ್ತು ಐಮೊಬೈಲ್ ಎಲ್ಲವೂ ಕಳೆದ 1.5 ಗಂಟೆಯಿಂದ ಡೌನ್ ಆಗಿವೆ @PMOIndia. ಇದು ಬೇಗ ಹಿಂತಿರುಗಬಹುದು ಎಂಬ ಭರವಸೆ ಇದೆ ಎಂದಿದ್ದಾರೆ.

ಇದನ್ನೂ ಓದಿ: ICICI Bank: ಐಸಿಐಸಿಐ ಬ್ಯಾಂಕ್​ಗೆ ಮೂರನೇ ತ್ರೈಮಾಸಿಕದಲ್ಲಿ ಶೇ 25ರಷ್ಟು ಲಾಭ ಹೆಚ್ಚಳ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!