AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICICI Bank: ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ನೆಟ್​ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ

ದೇಶದ ಎರಡನೇ ಅತಿದೊಡ್ಡ ಖಾಸಗಿ ಬ್ಯಾಂಕ್​ ಆದ ಐಸಿಐಸಿಐ ಬ್ಯಾಂಕ್​ನ ಗ್ರಾಹಕರು ನೆಟ್​ ಬ್ಯಾಂಕಿಂಗ್​ ಸೇವೆಯಲ್ಲಿ ಸಮಸ್ಯೆಯನ್ನು ಎದುರಿಸಿದ ಬಗ್ಗೆ ದೂರಿತ್ತಿದ್ದಾರೆ.

ICICI Bank: ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ನೆಟ್​ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 25, 2022 | 5:47 PM

Share

ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಐಸಿಐಸಿಐ ಬ್ಯಾಂಕ್​ನ (ICICI Bank) ನೆಟ್​ ಬ್ಯಾಂಕಿಂಗ್​ ಸೇವೆಯು ಸಮಸ್ಯೆಗೆ ಈಡಾಗಿರುವ ಬಗ್ಗೆ ಗ್ರಾಹಕರು ಶುಕ್ರವಾರ ದೂರು ನೀಡಿದ್ದು, ಪುಟ ಪ್ರತಿಕ್ರಿಯಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಐಸಿಐಸಿಐ ಬ್ಯಾಂಕ್​ನ ಆ್ಯಪ್​ ಮೂಲಕ ಲಾಗ್ ಇನ್ ಆಗುವುದಕ್ಕೆ ಪ್ರಯತ್ನ ಮಾಡಿದವರಿಗೂ ಕಷ್ಟವಾಗಿದೆ. “ಸದ್ಯಕ್ಕೆ ನಿಮ್ಮ ಮನವಿಯನ್ನು ಪ್ರೊಸೆಸ್​ ಮಾಡುವುದಕ್ಕೆ ಕಷ್ಟವಾಗುತ್ತಿದೆ. ದಯವಿಟ್ಟು ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ” ಎಂಬ ಸಂದೇಶ ಕಾಣಿಸಿಕೊಳ್ಳುತ್ತಿದೆ. ಹಲವು ಗ್ರಾಹಕರು ಟ್ವಿಟರ್​ ಮೂಲಕ ತಮ್ಮ ಅಹವಾಲನ್ನು ಹೇಳಿಕೊಂಡಿದ್ದು, ಇಂಟರ್​ನೆಟ್​ ಬ್ಯಾಂಕಿಂಗ್ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಐಸಿಐಸಿಐ ಡೈರೆಕ್ಟ್ ಟ್ವಿಟರ್​ ಹ್ಯಾಂಡಲ್​ನಿಂದ ಮಾಹಿತಿಯನ್ನು ನೀಡಲಾಗಿದೆ. “ಪ್ರಿಯ ಗ್ರಾಹಕರೇ, http://ICICIdirect.com ಸದ್ಯಕ್ಕೆ ಡೌನ್ ಆಗಿದೆ. ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಸಹಜ ಸ್ಥಿತಿಗೆ ತರುವ ಸಲುವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಈ ಬಗ್ಗೆ ಅಪ್​ಡೇಟ್​ ಮಾಡುತ್ತೇವೆ. ಆಗಿರುವ ಅನನುಕೂಲಕ್ಕೆ ವಿಷಾದಿಸುತ್ತೇವೆ,” ಎಂದು ಟ್ವೀಟ್ ಮಾಡಲಾಗಿದೆ. ಬಳಕೆದಾರರೊಬ್ಬರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದು, @ICICIBank_Care @ICICIBank ಟ್ಯಾಗ್ ಮಾಡಿದ್ದಾರೆ. ವೆಬ್​ ಆಗಲಿ ಅಥವಾ ಮೊಬೈಲ್​ ಆ್ಯಪ್ ಆಗಲೀ ಯಾವುದೂ ಕಳೆದ 3 ಗಂಟೆಯಿಂದ ಕಾರ್ಯ ನಿರ್ವಹಿಸುತ್ತಿಲ್ಲ ಎಂದಿದ್ದಾರೆ.

ಮತ್ತೊಬ್ಬ ಬಳಕೆದಾರರು ಬರೆದಿದ್ದು, ಎಲ್ಲ @ICICIBank ಸೇವೆಗಳು ಇಂಟರ್ನಲ್​ ಸರ್ವರ್​ ಎರರ್ ಕಾರಣಕ್ಕೆ ಡೌನ್ ಆಗಿವೆ @ICICI_Direct ಡಿಮ್ಯಾಟ್, ಯುಪಿಐ, ನೆಟ್​ಬ್ಯಾಂಕಿಂಗ್, ಕ್ರೆಡಿಟ್​ ಕಾರ್ಡ್, ಡೆಬಿಟ್​ ಕಾರ್ಡ್​ ಮತ್ತು ಐಮೊಬೈಲ್ ಎಲ್ಲವೂ ಕಳೆದ 1.5 ಗಂಟೆಯಿಂದ ಡೌನ್ ಆಗಿವೆ @PMOIndia. ಇದು ಬೇಗ ಹಿಂತಿರುಗಬಹುದು ಎಂಬ ಭರವಸೆ ಇದೆ ಎಂದಿದ್ದಾರೆ.

ಇದನ್ನೂ ಓದಿ: ICICI Bank: ಐಸಿಐಸಿಐ ಬ್ಯಾಂಕ್​ಗೆ ಮೂರನೇ ತ್ರೈಮಾಸಿಕದಲ್ಲಿ ಶೇ 25ರಷ್ಟು ಲಾಭ ಹೆಚ್ಚಳ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ