AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?

IDFC First Bank's Rs 590 fraud case: company shares hit 20pc lower circuit: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಷೇರುಗಳು ಸೋಮವಾರ ಶೇ. 20ರಷ್ಟು ಬೆಲೆ ಕಳೆದುಕೊಂಡಿವೆ. ಹೂಡಿಕೆದಾರರು ಷೇರುಗಳನ್ನು ಮಾರಲು ಮುಗಿಬೀಳುತ್ತಿದ್ದಾರೆ. ಬ್ಯಾಂಕ್​ನ ಚಂಡೀಗಡ ಬ್ರ್ಯಾಂಚ್​ನಲ್ಲಿ ಒಟ್ಟು 590 ಕೋಟಿ ರೂ ಮೌಲ್ಯದ ಅನಧಿಕೃತ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಹರ್ಯಾಣ ಸರ್ಕಾರದ ಇಲಾಖೆಗಳಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿ ಅನಧಿಕೃತ ವಹಿವಾಟು ಆಗಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ?
ಐಡಿಎಫ್​ಸಿ ಫಸ್ಟ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 23, 2026 | 1:25 PM

Share

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು?

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ ಶಾಖೆಯ ಸಿಬ್ಬಂದಿಯಿಂದ ವಂಚನೆ ನಡೆದಿರುವ ಆರೋಪ ಇದೆ. ಹರ್ಯಾಣ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಸಂಸ್ಥೆಗಳ ಅಕೌಂಟ್​ಗಳಲ್ಲಿ ಅನಧಿಕೃತ ವಹಿವಾಟುಗಳು ನಡೆದಿರುವುದು ಬೆಳಕಿಗೆ ಬಂದಿದೆ. ಸರ್ಕಾರವು ಈ ಅಕೌಂಟ್​ಗಳನ್ನು ಮುಚ್ಚಲು ಹೋದಾಗ ಅಕೌಂಟ್ ಬ್ಯಾಲನ್ಸ್​ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಆಗ ಒಟ್ಟು 590 ಕೋಟಿ ರೂ ಹಣಕಾಸು ಅಕ್ರಮ ನಡೆದಿರುವುದು ಗೊತ್ತಾಗಿದೆ. ಈ ಬ್ಯಾಂಕ್​ನ ಮೂರನೇ ಕ್ವಾರ್ಟರ್​ನ ನಿವ್ವಳ ಆದಾಯವೇ 503 ಕೋಟಿ ರೂ ಇದೆ. ಅದಕ್ಕಿಂತಲೂ ಹೆಚ್ಚಿನ ಮೊತ್ತದ ಅಕ್ರಮವನ್ನು ಕೆಲ ಸಿಬ್ಬಂದಿ ಎಸಗಿದ್ದಾರೆ.

ಇದನ್ನೂ ಓದಿ: ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ

ಸದ್ಯ ಐಡಿಎಫ್​ಸಿ ಬ್ಯಾಂಕ್​ನ ಚಂಡೀಗಡ ಬ್ರ್ಯಾಂಚ್​ನಿಂದ ಅನಧಿಕೃತವಾಗಿ ನಡೆದಿರುವ ವಹಿವಾಟುಗಳನ್ನು ಟ್ರ್ಯಾಕ್ ಮಾಡಲಾಗುತ್ತಿದೆ. ಈ ಹಣವನ್ನು ಫ್ರೀಜ್ ಮಾಡುವಂತೆ ಸಂಬಂಧಿಸಿದ ಎಲ್ಲಾ ಬ್ಯಾಂಕುಗಳಿಗೂ ಮನವಿ ಮಾಡಲಾಗಿದೆ. ಎಷ್ಟು ಸಾಧ್ಯವೋ ಎಷ್ಟು ಹಣ ರಿಕವರ್ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ. ಹರ್ಯಾಣ ಸರ್ಕಾರವು ತನ್ನ ಎಂಪ್ಯಾನಲ್ ಪಟ್ಟಿಯಿಂದ ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಅನ್ನು ತೆಗೆದುಹಾಕಿದೆ. ತನ್ನ ಅಧೀನದ ಇಲಾಖೆಗಳು ಈ ಬ್ಯಾಂಕ್​ನಲ್ಲಿ ಹೊಂದಿರುವ ಅಕೌಂಟ್​ಗಳನ್ನು ಮುಚ್ಚುವಂತೆಯೂ ಸರ್ಕಾರ ತಿಳಿಸಿದೆ.

ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಈ ಅಕ್ರಮದ ಬಗ್ಗೆ ತನ್ನ ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ತಿಳಿಸಿದೆ. ಬ್ಯಾಂಕ್​ನ ಸಿಸ್ಟಂನಲ್ಲಿ ಯಾವುದೇ ಲೋಪ ಇಲ್ಲ. ನಿರ್ದಿಷ್ಟ ಬ್ರ್ಯಾಂಚ್​ನ ಕೆಲ ಸಿಬ್ಬಂದಿ ಹಾಗೂ ನಿರ್ದಿಷ್ಟ ಖಾತೆಗಳಿಗೆ ಮಾತ್ರವೇ ಈ ಅಕ್ರಮ ಸೀಮಿತವಾಗಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಹಾಗೆಯೇ, ಬ್ಯಾಂಕ್ ಆಂತರಿಕ ತನಿಖೆ ನಡೆಸಿದ್ದು, ಅಕ್ರಮ ಎಸಗಿದ ಶಂಕೆಯ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗಿದೆ. ಬ್ಯಾಂಕ್​ನಿಂದ ಪೊಲೀಸ್ ದೂರು ಕೂಡ ಸಲ್ಲಿಕೆಯಾಗಿದೆ. ಸರ್ಕಾರಿ ಆಡಿಟಿಂಗ್​ಗೆ ಸೂಚಿಸಲಾಗಿದೆ. ಸ್ವತಂತ್ರವಾದ ಫೋರೆನ್ಸಿಕ್ ತನಿಖೆ ನಡೆಸುವಂತೆ ಕೆಪಿಎಂಜಿ ಸಂಸ್ಥೆಗೂ ತಿಳಿಸಲಾಗಿದೆ ಎಂದು ಬ್ಯಾಂಕ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಸರ್ಕಾರದ ಷೇರುಪಾಲು ಅಧಿಕ

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ಅತಿಹೆಚ್ಚು ಷೇರುಮಾಲಿಕತ್ವ ಹೊಂದಿರುವುದು ಸರ್ಕಾರವೇ. ಶೇ. 7.75 ಷೇರುಪಾಲು ಹೊಂದಿದೆ. 66 ಕೋಟಿಗೂ ಅಧಿಕ ಷೇರುಗಳನ್ನು ಸರ್ಕಾರ ಹೊಂದಿದೆ. ಎಲ್​ಐಸಿ, ಟಾಟಾ ಎಐಎ ಲೈಫ್ ಇನ್ಷೂರೆನ್ಸ್, ಐಸಿಐಸಿಐ ಪ್ರುಡೆನ್ಷಿಯಲ್ ಲೈಫ್ ಇನ್ಷೂರೆನ್ಸ್, ಎಚ್​ಡಿಎಫ್​ಸಿ ಲೈಫ್ ಇನ್ಷೂರೆನ್ಸ್ ಸಂಸ್ಥೆಗಳು ಗಣನೀಯ ಪ್ರಮಾಣದ ಷೇರುಪಾಲು ಹೊಂದಿವೆ. ರೀಟೇಲ್ ಹೂಡಿಕೆದಾರರ ಬಳಿ 129 ಕೋಟಿಗೂ ಅಧಿಕ ಷೇರುಗಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ