AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar- PAN Linking: ಆಧಾರ್ ಜತೆ ಪ್ಯಾನ್​ ಕಾರ್ಡ್​ ಮಾರ್ಚ್​ 31ರೊಳಗೆ ಜೋಡಣೆ ಆಗದಿದ್ದಲ್ಲಿ ಹೆಚ್ಚಿನ ಟಿಡಿಎಸ್​

ಮಾರ್ಚ್ 31, 2022ರೊಳಗೆ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್ ಜತೆಗೆ ಜೋಡಣೆ ಆಗಿಲ್ಲ ಎಂದಾದಲ್ಲಿ ಹೆಚ್ಚಿನ ಟಿಡಿಎಸ್​ ಪಾವತಿ ಮಾಡಬೇಕಾಗುತ್ತದೆ. ಆ ಬಗ್ಗೆ ಮಾಹಿತಿ ಇಲ್ಲಿದೆ

Aadhaar- PAN Linking: ಆಧಾರ್ ಜತೆ ಪ್ಯಾನ್​ ಕಾರ್ಡ್​ ಮಾರ್ಚ್​ 31ರೊಳಗೆ ಜೋಡಣೆ ಆಗದಿದ್ದಲ್ಲಿ ಹೆಚ್ಚಿನ ಟಿಡಿಎಸ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 14, 2022 | 8:07 PM

Share

ನಿಮ್ಮ ಪರ್ಮನೆಂಟ್ ಅಕೌಂಟ್ ನಂಬರ್ (Permanent Account Number) ಅಥವಾ ಪ್ಯಾನ್ ಅನ್ನು ಆಧಾರ್​ ಜೊತೆಗೆ ಜೋಡಣೆ ಮಾಡಿಲ್ಲ ಅಂತಾದಲ್ಲಿ ಮುಂದಿನ ತಿಂಗಳಿಂದ ಹೆಚ್ಚಿನ ಟಿಡಿಎಸ್​ (ಟ್ಯಾಕ್ಸ್​ ಡಿಡಕ್ಟಡ್​ ಅಟ್ ಸೋರ್ಸ್) ಕಟ್ಟಬೇಕಾಗುತ್ತದೆ. ಆಧಾರ್ ಸಂಖ್ಯೆ ಜತೆಗೆ ಪ್ಯಾನ್ ಜೋಡಣೆ ಮಾಡುವುದಕ್ಕೆ ಕೊನೆ ದಿನಾಂಕವನ್ನು ಮಾರ್ಚ್ 31, 2022ಕ್ಕೆ ವಿಸ್ತರಣೆ ಮಾಡಲಾಗಿದೆ. ಈ ಗಡುವಿನೊಳಗಾಗಿ ಎರಡನ್ನೂ ಜೋಡಣೆ ಮಾಡದಿದ್ದಲ್ಲಿ ನಿಮ್ಮ ಡೆಬಿಟ್ ಹಾಗೂ ಕ್ರೆಡಿಟ್​ ಕಾರ್ಡ್ ಪಾವತಿ, ಆನ್​ಲೈನ್ ವಹಿವಾಟುಗಳು, ಎಟಿಎಂಗಳಿಂದ ನಗದು ವಿಥ್​ಡ್ರಾಗಳು ಇತ್ಯಾದಿಗಳ ಮೇಲೆ ಪರಿಣಾಮ ಬೀರಲಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 139ಎಎ ಪ್ರಕಾರ, ಜುಲೈ 1, 2017ಕ್ಕೆ ಪ್ಯಾನ್ ಹೊಂದಿರುವ ಮತ್ತು ಆಧಾರ್​ ಪಡೆಯುವುದಕ್ಕೆ ಅರ್ಹರಾದ ಪ್ರತಿಯೊಬ್ಬರು ಎರಡನ್ನೂ ಜೋಡಣೆ ಮಾಡಬೇಕು.

ಕಳೆದ ಮೂರು ವರ್ಷದಲ್ಲಿ ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಪ್ಯಾನ್ ಹಾಗೂ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡುವುದರ ಗಡುವು ಹಲವು ಸಲ ವಿಸ್ತರಣೆ ಮಾಡಿದೆ. ನಿಗದಿತ ದಿನಾಂಕದ ಒಳಗಾಗಿ ಪ್ಯಾನ್​ ಕಾರ್ಡ್ ಜತೆಗೆ ಆಧಾರ್ ಜೋಡಣೆ ಆಗದಿದ್ದಲ್ಲಿ ಪ್ಯಾನ್ ಕಾರ್ಯ ನಿರ್ವಹಿಸುವುದಿಲ್ಲ. ಸೆಕ್ಷನ್ 114ಎಎ(3) ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ಹೀಗಾಗುತ್ತದೆ. ಯಾರು ಹೊಸದಾಗಿ ಪ್ಯಾನ್​ ಕಾರ್ಡ್​ ಅಪ್ಲೈ ಮಾಡುತ್ತಿರುವರೋ ಅವರು ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139ಎಎ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ.​

ಒಂದು ವೇಳೆ ಪ್ಯಾನ್ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದಲ್ಲಿ ಪ್ಯಾನ್​ ಸಲ್ಲಿಸಿಲ್ಲ ಎಂದು ಪರಿಗಣಿಸಲಾಗುತ್ತದೆ. ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 206ಎಎ(6) ಅಡಿಯಲ್ಲಿ ಯಾರಿಗೆ ಆದಾಯ ತೆರಿಗೆ ವ್ಯಾಪ್ತಿಗೆ ಬರುವ ಆದಾಯ ಇರುತ್ತದೋ ಅಂಥವರು ಕಡ್ಡಾಯವಾಗಿ ಪ್ಯಾನ್ ಕಾರ್ಡ್ ಮಾಹಿತಿ ನೀಡಬೇಕು. ಒಂದು ವೇಳೆ ತೆರಿಗೆ ಪಾವತಿದಾರರು ನೀಡಿದ ಪ್ಯಾನ್ ಸಿಂಧು ಅಲ್ಲ ಎಂದಾದಲ್ಲಿ ಪ್ಯಾನ್ ಮಾಹಿತಿಯನ್ನು ಒದಗಿಸಿಲ್ಲ ಎಂಬಂತೆ ಬಿಂಬಿತ ಆಗುತ್ತದೆ.

ಆದ್ದರಿಂದ ಮಾರ್ಚ್ 31ನೇ ತಾರೀಕಿನೊಳಗೆ ಇರುವ ಗಡುವಿ ಮೀರಿದಲ್ಲಿ ಪ್ಯಾನ್​ ಕಾರ್ಡ್ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸುತ್ತದೆ. ಆ ನಂತರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 206ಎಎ ಅಡಿಯಲ್ಲಿ ಶೇ 20ರಷ್ಟು ಟಿಡಿಎಸ್​ ಕಡಿತ ಆಗುತ್ತದೆ. ಫಿಕ್ಸೆಡ್ ಡೆಪಾಸಿಟ್ ಮೇಲಿನ ಬಡ್ಡಿ, ಡಿವಿಡೆಂಡ್ ಮತ್ತು ಇತರ ಆದಾಯಗಳಿಗೆ ಹೆಚ್ಚಿನ ಟಿಡಿಎಸ್​ ಆಗುತ್ತದೆ. ಒಂದು ವೇಳೆ ಆಧಾರ್ ಜತೆ ಪ್ಯಾನ್ ಜೋಡಣೆ ಆಗದಿದ್ದಲ್ಲಿ ಆದಾಯ ತೆರಿಗೆ ವ್ಯಾಪ್ತಿಗೆ ಬರುವುದಕ್ಕೆ ಶೇ 20ರಷ್ಟು ಟಿಡಿಎಸ್​ ಆಗುತ್ತದೆ. ಉದಾಹರಣೆಗೆ ಬಡ್ಡಿ ಆದಾಯವು 40 ಸಾವಿರ ರೂಪಾಯಿ ದಾಟಿದಲ್ಲಿ ಸೆಕ್ಷನ್ 206ಎಎ ಅಡಿಯಲ್ಲಿ ಶೇ 10ರಷ್ಟು ಟಿಡಿಎಸ್​ ಆಗುತ್ತದೆ, ಅದೇ ಒಂದು ವೇಳೆ ಆಧಾರ್ ಅನ್ನು ಪ್ಯಾನ್ ಜತೆ ಜೋಡಣೆ ಮಾಡಿಲ್ಲ ಅಂತಾದಲ್ಲಿ ಶೇ 20ರಷ್ಟು ಟಿಡಿಎಸ್​ ಆಗುತ್ತದೆ.

ಆದಾಯ ತೆರಿಗೆ ಕಾನೂನು ಅನ್ವಯ ಒಂದು ವೇಳೆ ಪ್ಯಾನ್ ಮಾಹಿತಿ ಒದಗಿಸದೆ ಇದ್ದಲ್ಲಿ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 272ಬಿ ಅಡಿಯಲ್ಲಿ 10 ಸಾವಿರ ತೆರಿಗೆ ಬೀಳುತ್ತದೆ. ಪ್ರತಿ ನಿಯಮಾವಳಿ ಪಾಲನೆಯಲ್ಲಿ ತಪ್ಪಿದಾಗಲೂ ದಂಡವನ್ನು ವಿಧಿಸಬಹುದು. ಪ್ರತಿ ಬಾರಿ ಪ್ಯಾನ್ ಒದಗಿಸಲು ವಿಫಲವಾದಾಗಲೂ 10 ಸಾವಿರ ದಂಡ ವಿಧಿಸಬಹುದಾಗಿದೆ. ಆಧಾರ್​ ಜತೆಗೆ ಪ್ಯಾನ್​ ಸಂಖ್ಯೆ ಜೋಡಣೆ ಆಗದಿದ್ದಲ್ಲಿ ಪ್ಯಾನ್​ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸುವುದರ ಜತೆಗೆ, ಹೆಚ್ಚಿನ ಟಿಡಿಎಸ್​ ದರ ಹಾಗೂ ಮತ್ತಿತರ ಪರಿಣಾಮಗಳು ಆಗುತ್ತವೆ.

ಇದನ್ನೂ ಓದಿ: ಮಾಹಿತಿ ಹೊಂದಾಣಿಕೆಯಾಗದ ಕಾರಣ ಪ್ಯಾನ್-ಆಧಾರ್ ಲಿಂಕ್ ಆಗುತ್ತಿಲ್ಲವಾ?; ಹೀಗೆ ಮಾಡಿ ನೋಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ