AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parag Agarwal: ಟ್ವಿಟ್ಟರ್ ಸಿಇಒ ಪರಾಗ್ ಅಗರ್​ವಾಲ್​ರನ್ನು ಕೆಲಸದಿಂದ ತೆಗೆದಲ್ಲಿ 300 ಕೋಟಿ ರೂ.ಗೂ ಹೆಚ್ಚು ಪರಿಹಾರ

ಎಲಾನ್ ಮಸ್ಕ್​ರಿಂದ ಟ್ವಿಟ್ಟರ್ ಇಂಕ್ ಖರೀದಿ ಮಾಡಿಯಾಗಿದೆ. ಒಂದು ವೇಳೆ ಸಿಇಒ ಪರಾಗ್ ಅಗರ್​ವಾಲ್​ ಅವರನ್ನು ಹನ್ನೆರಡು ತಿಂಗಳ ಒಳಗಾಗಿ ಪದಚ್ಯುತಗೊಳಿಸಿದರೆ 321 ಕೋಟಿ ರೂ. ಪಡೆಯುತ್ತಾರೆ.

Parag Agarwal: ಟ್ವಿಟ್ಟರ್ ಸಿಇಒ ಪರಾಗ್ ಅಗರ್​ವಾಲ್​ರನ್ನು ಕೆಲಸದಿಂದ ತೆಗೆದಲ್ಲಿ 300 ಕೋಟಿ ರೂ.ಗೂ ಹೆಚ್ಚು ಪರಿಹಾರ
ಪರಾಗ್ ಅಗರ್​ವಾಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Apr 26, 2022 | 10:27 AM

Share

ಸಾಮಾಜಿಕ ಮಾಧ್ಯಮ ಕಂಪೆನಿಯಾದ ಟ್ವಿಟ್ಟರ್ ಇಂಕ್​ನಲ್ಲಿ (Twitter) ನಿಯಂತ್ರಣ ಬದಲಾವಣೆ ಆದ 12 ತಿಂಗಳೊಳಗೆ ಸಿಇಒ ಪರಾಗ್ ಅಗರವಾಲ್ ಅವರನ್ನು ವಜಾಗೊಳಿಸಿದರೆ ಅಂದಾಜು 42 ಮಿಲಿಯನ್ ಡಾಲರ್, ಅಂದರೆ ಇವತ್ತಿನ (ಏಪ್ರಿಲ್ 26, 2022) ಭಾರತದ ರೂಪಾಯಿ ಲೆಕ್ಕದಲ್ಲಿ 321.19 ಕೋಟಿ ಪಡೆಯುತ್ತಾರೆ ಎಂದು ಸಂಶೋಧನಾ ಸಂಸ್ಥೆ ಈಕ್ವಿಲಾರ್ ತಿಳಿಸಿದೆ. ಸೋಮವಾರದಂದು ಬಿಲಿಯನೇರ್ ಎಲಾನ್ ಮಸ್ಕ್ ಅವರು ಟ್ವಿಟ್ಟರ್ ಅನ್ನು 44 ಶತಕೋಟಿ ಯುಎಸ್​ಡಿಗೆ ಖರೀದಿಸಲು ಒಪ್ಪಂದವನ್ನು ಮಾಡಿಕೊಂಡಿದ್ದು, 2013ರಿಂದ ಸಾರ್ವಜನಿಕ ಕಂಪೆನಿಯಾಗಿದ್ದ ಅದರ ಓಟವನ್ನು ಕೊನೆಗೊಳಿಸಿದರು. ಏಪ್ರಿಲ್ 14ರಂದು ಸೆಕ್ಯೂರಿಟೀಸ್ ಫೈಲಿಂಗ್‌ನಲ್ಲಿ ಮಸ್ಕ್ ಅವರು ಟ್ವಿಟ್ಟರ್‌ನ ನಿರ್ವಹಣೆಯಲ್ಲಿ ವಿಶ್ವಾಸ ಹೊಂದಿಲ್ಲ ಎಂದು ಹೇಳಿದ್ದರು.

ಈಕ್ವಿಲಾರ್‌ನ ಅಂದಾಜು ಒಂದು ವರ್ಷದ ಮೌಲ್ಯದ ಅಗರವಾಲ್‌ರ ಮೂಲ ವೇತನ ಮತ್ತು ಎಲ್ಲ ಈಕ್ವಿಟಿ ಅವಾರ್ಡ್​ಗಳ ಹಸ್ತಾಂತರವನ್ನು ಒಳಗೊಂಡಿದೆ ಎಂದು ಈಕ್ವಿಲರ್ ವಕ್ತಾರರು ಹೇಳಿದ್ದಾರೆ. ಇದು ಮಸ್ಕ್‌ನ ಪ್ರತಿ ಷೇರಿಗೆ ಯುಎಸ್​ಡಿ 54.20 ಆಫರ್ ಬೆಲೆ ಮತ್ತು ಕಂಪೆನಿಯ ಇತ್ತೀಚಿನ ಪ್ರಾಕ್ಸಿ ಹೇಳಿಕೆಯಲ್ಲಿನ ನಿಯಮಗಳ ಆಧಾರದ ಮೇಲೆ ಆಗಿದೆ. ಈಕ್ವಿಲರ್‌ನ ಅಂದಾಜಿನ ಕುರಿತು ಪ್ರತಿಕ್ರಿಯಿಸಲು ಟ್ವಿಟ್ಟರ್ ಪ್ರತಿನಿಧಿ ನಿರಾಕರಿಸಿದ್ದಾರೆ.

ಈ ಹಿಂದೆ ಟ್ವಿಟ್ಟರ್‌ನ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿದ್ದ ಅಗರವಾಲ್ ಅವರನ್ನು ನವೆಂಬರ್‌ನಲ್ಲಿ ಸಿಇಒ ಆಗಿ ನೇಮಿಸಲಾಯಿತು. ಟ್ವಿಟ್ಟರ್‌ನ ಪ್ರಾಕ್ಸಿ ಪ್ರಕಾರ, 2021ಕ್ಕೆ ಅವರ ಒಟ್ಟು ವೇತನ ಯುಎಸ್​ಡಿ 30.4 ಮಿಲಿಯನ್ ಆಗಿದ್ದು, ಹೆಚ್ಚಾಗಿ ಸ್ಟಾಕ್ ರೂಪದಲ್ಲಿದೆ.

ಇದನ್ನೂ ಓದಿ: ಎಲಾನ್ ಮಸ್ಕ್ ಅಧೀನದಲ್ಲಿ ಟ್ವಿಟ್ಟರ್ ಭವಿಷ್ಯ ಅಸ್ಪಷ್ಟ: ಸಿಇಒ ಪರಾಗ್ ಅಗರ್​ವಾಲ್ ಮಾತಿಗೆ ಹಲವು ಅರ್ಥ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್