AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIFL Securities: ಐಐಎಫ್​ಎಲ್ ಸೆಕ್ಯೂರಿಟೀಸ್ ಮೇಲೆ ಸೆಬಿ ನಿರ್ಬಂಧ; ಷೇರುಬೆಲೆ ಶೇ. 18ಕ್ಕಿಂತ ಹೆಚ್ಚು ಕುಸಿತ

SEBI Action Against IIFL Securities: ಐಐಎಫ್​ಎಲ್ ಸೆಕ್ಯೂರಿಟೀಸ್ ಮುಂದಿನ 2 ವರ್ಷ ಯಾವುದೇ ಹೊಸ ಕ್ಲೈಂಟ್​ಗಳನ್ನು ಹೊಂದುವಂತಿಲ್ಲ ಎಂದು ಸೆಬಿ ನಿರ್ಬಂಧ ಹಾಕಿದೆ. ಇದರ ಬೆನ್ನಲ್ಲೇ ಅದರ ಷೇರುಬೆಲೆ ಜೂನ್ 20ರಂದು ಬೆಳಗ್ಗೆ ಶೇ. 18ರಷ್ಟು ಕುಸಿತಕಂಡಿದೆ.

IIFL Securities: ಐಐಎಫ್​ಎಲ್ ಸೆಕ್ಯೂರಿಟೀಸ್ ಮೇಲೆ ಸೆಬಿ ನಿರ್ಬಂಧ; ಷೇರುಬೆಲೆ ಶೇ. 18ಕ್ಕಿಂತ ಹೆಚ್ಚು ಕುಸಿತ
ಸ್ಟಾಕ್ ಮಾರ್ಕೆಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 20, 2023 | 10:56 AM

Share

ನವದೆಹಲಿ: ಗ್ರಾಹಕರ ಹಣವನ್ನು ದುರುಪಡಿಸಿಕೊಂಡ ಕಾರಣಕ್ಕೆ ಸೆಬಿ (SEBI) ನಿನ್ನೆ (ಜೂನ್ 19) ಐಐಎಫ್​ಎಲ್ ಸೆಕ್ಯೂರಿಟೀಸ್ ಸಂಸ್ಥೆಯ (IIFL Securities) ಮೇಲೆ ಕ್ರಮ ಜಾರಿ ಮಾಡಿತು. ಇದರ ಬೆನ್ನಲ್ಲೇ ಈ ಷೇರು ಬ್ರೋಕರೇಜ್ ಕಂಪನಿಯ ಷೇರುಬೆಲೆ ಪ್ರಪಾತಕ್ಕೆ ಬೀಳುತ್ತಿದೆ. ಮಂಗಳವಾರದ ಬೆಳಗಿನ ವಹಿವಾಟಿನಲ್ಲಿ ಐಐಎಫ್​ಎಲ್ ಸೆಕ್ಯೂರಿಟೀಸ್​ನ ಷೇರುಬೆಲೆ ಶೇ. 18ಕ್ಕಿಂತಲೂ ಕುಸಿತ ಕಂಡಿತು. ಒಂದು ಹಂತದಲ್ಲಿ ಅದರ ಷೇರು ಬೆಲೆ 71.20 ರೂ ಇದ್ದದ್ದು 58 ರುಪಾಯಿಗೆ ಇಳಿದಿತ್ತು. ಬೆಳಗ್ಗೆ 10:30ರ ಹೊತ್ತಿನಲ್ಲಿ ಅದರ ಷೇರುಬೆಲೆ 61.75ಕ್ಕೆ ಹೋಗಿತ್ತು.

ಐಐಎಫ್​ಎಲ್ ಸೆಕ್ಯೂರಿಟೀಸ್ ಮೇಲೆ ಸೆಬಿ ಕ್ರಮ ಯಾಕೆ?

ಐಐಎಫ್​ಎಲ್ ಸೆಕ್ಯೂರಿಟೀಸ್ ಮುಂದಿನ 2 ವರ್ಷ ಯಾವುದೇ ಹೊಸ ಕ್ಲೈಂಟ್​ಗಳನ್ನು ಹೊಂದುವಂತಿಲ್ಲ ಎಂದು ಸೆಬಿ ನಿರ್ಬಂಧ ಹಾಕಿತು. ತನ್ನ ಗ್ರಾಹಕರ ಹಣವನ್ನು ಅಕ್ರಮವಾಗಿ ಉಪಯೋಗಿಸಿಕೊಂಡಿದ್ದ ಕಂಡುಬಂದ ಹಿನ್ನೆಲೆಯಲ್ಲಿ ಸೆಬಿ ಈ ಕ್ರಮ ಕೈಗೊಂಡಿತ್ತು.

ಇದನ್ನೂ ಓದಿIndiGo: ಏರ್​ಬಸ್​ನಿಂದ 500 ವಿಮಾನ ಖರೀದಿಸಲಿದೆ ಇಂಡಿಗೋ; ದಾಖಲೆಯ ಒಪ್ಪಂದ

ಸ್ಟಾಕ್ ಬ್ರೋಕರೇಜ್ ಸಂಸ್ಥೆ ಎನಿಸಿದ ಐಐಎಫ್​ಎಲ್ ಸೆಕ್ಯೂರಿಟೀಸ್ ವಿರುದ್ಧದ ಪ್ರಕರಣ ಸುದೀರ್ಘ 8-9 ವರ್ಷಗಳ ಹಿಂದಿನದ್ದು. 2014ರಲ್ಲಿ ಐಐಎಫ್​ಎಲ್ ಸೆಕ್ಯೂರಿಟೀಸ್​ನ ಬುಕ್ ಆಫ್ ಅಕೌಂಟ್​ಗಳನ್ನು ಪರಿಶೀಲನೆ ನಡೆಸಿದಾಗ ಸೆಬಿಗೆ ಕೆಲವೊಂದಿಷ್ಟು ಅಕ್ರಮದ ಸುಳಿವು ಸಿಕ್ಕಿತ್ತು. ಗ್ರಾಹಕರ ನಿಧಿ ಹಾಗೂ ಸಂಸ್ಥೆಯ ನಿಧಿ ಎರಡನ್ನೂ ಪ್ರತ್ಯೇಕವಾಗಿಟ್ಟಿರಲಿಲ್ಲ. ಗ್ರಾಹಕರ ಹಣದ ದುರುಪಯೋಗ ಮಾಡಿಕೊಳ್ಳಲಾಗಿದ್ದುದು ಕಂಡು ಬಂದಿತ್ತು.

ಇದರ ಬಳಿಕ ಸೆಬಿ ಹಲವು ಬಾರಿ ಪರಿಶೀಲನೆಗಳನ್ನು ನಡೆಸಿತು. ಐಐಎಫ್​ಎಲ್ ಸೆಕ್ಯೂರಿಟೀಸ್ ವಿರುದ್ಧ ಎರಡು ತನಿಖೆಗಳನ್ನೂ ಕೈಗೊಳ್ಳಲಾಯಿತು. 2017 ಮತ್ತು 2021ರಲ್ಲಿ ಎರಡು ಬಾರಿ ಶೋಕಾಸ್ ನೋಟೀಸ್ ಕೊಡಲಾಗಿತ್ತು. 6 ವರ್ಷದಷ್ಟು ಸುದೀರ್ಘ ಕಾಲ ತನಿಖೆ ನಡೆದಿತ್ತು. ಇದರಲ್ಲಿ ಐಐಎಫ್​ಎಲ್ ಸೆಕ್ಯೂರಿಟೀಸ್​ನಿಂದ ಅಕ್ರಮ ನಡಾವಳಿ ಆಗಿದ್ದುದು ಮತ್ತು ಷೇರುಪೇಟೆ ಬ್ರೋಕರೇಜ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿರುವುದು ಸೆಬಿಗೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಐಐಎಎಫ್​ಎಲ್​ಗೆ 2 ವರ್ಷ ಹೊಸ ಗ್ರಾಹಕರನ್ನು ಒಳಗೊಳ್ಳದಂತೆ ನಿರ್ಬಂಧ ಹಾಕಲಾಗಿದೆ.

ಇದನ್ನೂ ಓದಿModinomics: ತಲೆತಲೆಮಾರುಗಳಿಗೆ ಲಾಭ ಕೊಡುವ ದೂರದೃಷ್ಟಿಕೋನದೊಂದಿಗೆ ಹೂಡಿಕೆ ಮಾಡುವುದು ಮೋದಿನಾಮಿಕ್ಸ್

ಐಐಎಫ್​ಎಲ್ ಸೆಕ್ಯೂರಿಟೀಸ್ ಸಂಸ್ಥೆ ಮೇಲೆ ಏನು ಪರಿಣಾಮ?

ಸೆಬಿ ನಿರ್ಬಂಧವು ಐಐಎಫ್​ಎಲ್ ಹೊಸ ಗ್ರಾಹಕರನ್ನು ಒಳಗೊಳ್ಳಬಾರದು ಎಂಬುದಾಗಿದೆ. ಅದು ಪ್ರಸ್ತುತ ಹೊಂದಿರುವ ಗ್ರಾಹಕರಿಗೆ ಸೇವೆ ಮುಂದುವರಿಸಬಹುದು. ಅಲ್ಲದೇ ಐಐಎಫ್​ಎಲ್ ಸೆಕ್ಯೂರಿಟೀಸ್​ನಿಂದ ಗ್ರಾಹಕರಿಗೆ ವಂಚನೆ ಆಗಿರುವುದು ಕಂಡುಬಂದಿಲ್ಲ. ಇದರಿಂದ ಐಎಎಫ್​ಎಲ್ ಸೆಕ್ಯೂರಿಟೀಸ್ ತನ್ನ ಗ್ರಾಹಕರನ್ನು ಉಳಿಸಿಕೊಳ್ಳಲು ಪ್ರಯತ್ನಿಸಬಹುದು.

ತಾನು ಸೆಬಿ ಆದೇಶವನ್ನು ಪ್ರಶ್ನಿಸಿ ಸೆಕ್ಯೂರಿಟೀಸ್ ಮೇಲ್ಮನವಿ ನ್ಯಾಯಾಲಯದ ಮೊರೆ ಹೋಗುವುದಾಗಿ ಐಐಎಫ್​ಎಲ್ ಸೆಕ್ಯೂರಿಟೀಸ್ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ