AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಅಕ್ರಮ ವಹಿವಾಟು ನಡೆಸಿರುವುದು ಸಾಬೀತು: 19 ಮಂದಿಗೆ ದಂಡ ವಿಧಿಸಿದ ಸೆಬಿ

Illegal trading in stock market: ಷೇರು ಮಾರುಕಟ್ಟೆಯಲ್ಲಿ ಅಕ್ರಮ ವಹಿವಾಟು ನಡೆಸಿ ಶೇರುಗಳನ್ನು ನಕಲಿ ಮಾಡಿರುವುದು ತನಿಖೆಯಿಂದ ಸಾಬೀತಾದ ಹಿನ್ನೆಲೆ ಮಾರುಕಟ್ಟೆ ನಿಯಂತ್ರಕ ಸೆಬಿ 19 ಮಂದಿಗೆ ದಂಡ ವಿಧಿಸಿದೆ.

Stock Market: ಅಕ್ರಮ ವಹಿವಾಟು ನಡೆಸಿರುವುದು ಸಾಬೀತು: 19 ಮಂದಿಗೆ ದಂಡ ವಿಧಿಸಿದ ಸೆಬಿ
ಷೇರುಪೇಟೆಯಲ್ಲಿ ಅಕ್ರಮ ವಹಿವಾಟು ನಡೆಸಿದ 19 ಮಂದಿಗೆ ದಂಡ ವಿಧಿಸಿದ ಸೆಬಿ
TV9 Web
| Updated By: Rakesh Nayak Manchi|

Updated on:Sep 27, 2022 | 5:25 PM

Share

ಷೇರು ಮಾರುಕಟ್ಟೆಯಲ್ಲಿ (Stock Market) ಅಕ್ರಮ ವಹಿವಾಟು ನಡೆಸಿ ಶೇರುಗಳನ್ನು ನಕಲಿ ಮಾಡಿದ್ದಕ್ಕಾಗಿ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ 19 ಮಂದಿಗೆ ಒಟ್ಟು 95 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸೆಬಿ ತನಿಖೆ ನಡೆಸಿದಾಗ 19 ಜನರು ಗ್ಲೋಬಲ್ ಇನ್ಫ್ರಾಟೆಕ್ ಮತ್ತು ಫೈನಾನ್ಸ್ ಲಿಮಿಟೆಡ್ ಷೇರುಗಳನ್ನು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣದ ನಂತರ ಸೆಬಿ ತಪ್ಪಿತಸ್ಥರಿಗೆ 95 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ಆದೇಶ ನೀಡಿದ ದಿನದಿಂದ ದಂಡದ ಮೊತ್ತವನ್ನು 45 ದಿನಗಳಲ್ಲಿ ಪಾವತಿಸಬೇಕಾಗುತ್ತದೆ. ಷೇರುಪೇಟೆಯಲ್ಲಿ ಅಕ್ರಮ ವಹಿವಾಟು ನಡೆಸಿರುವ ಪ್ರಕರಣದ ತನಿಖೆಯನ್ನು 2017-18 ರಲ್ಲಿ ನಡೆಸಲಾಗಿತ್ತು. ಇದೀಗ 19 ಮಂದಿ ಅಕ್ರಮದಲ್ಲಿ ಭಾಗಿಯಾಗಿರುವುದು ತಿಳಿದುಬಂದ ಹಿನ್ನೆಲೆ ದಂಡ ವಿಧಿಸಲಾಗಿದೆ.

ಗ್ಲೋಬಲ್ ಇನ್‌ಫ್ರಾಟೆಕ್ ಮತ್ತು ಫೈನಾನ್ಸ್ ಲಿಮಿಟೆಡ್ (GIFL) ಷೇರುಗಳಲ್ಲಿ ಪಿಎಫ್‌ಯುಟಿಪಿ (ವಂಚನೆಯ ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸಗಳ ನಿಷೇಧ) ನಿಗದಿಪಡಿಸಿದ ನಿಯಮಗಳ ಉಲ್ಲಂಘನೆಯನ್ನು ಕಂಡುಹಿಡಿಯಲು ಮಾರುಕಟ್ಟೆ ನಿಯಂತ್ರಕ ಸೆಬಿ ಡಿಸೆಂಬರ್ 2017 ಮತ್ತು ಫೆಬ್ರವರಿ 2018 ರ ನಡುವೆ ವಿಚಾರಣೆ ನಡೆಸಿತ್ತು. ಅದರಂತೆ 19 ವ್ಯಕ್ತಿಗಳು ಗಣನೀಯ ಪ್ರಮಾಣದ ಷೇರುಗಳಲ್ಲಿ 3,266 ವಹಿವಾಟುಗಳನ್ನು ಕಾರ್ಯಗತಗೊಳಿಸುವ ಅದೇ ತಂತ್ರವನ್ನು ಅಳವಡಿಸಿಕೊಂಡಿದ್ದಾರೆ ಎಂದು ಕಂಡುಹಿಡಿಯಲಾಗಿದೆ. ಇದು 39 ದಿನಗಳವರೆಗೆ ಹೆಚ್ಚಿನ ಸಂಖ್ಯೆಯ ವಹಿವಾಟುಗಳ ಮೂಲಕ 87 ರಿಂದ 458 ವಹಿವಾಟುಗಳವರೆಗಿನ ಒಟ್ಟು ಮಾರುಕಟ್ಟೆ ಪರಿಮಾಣದ 12.86 ಪ್ರತಿಶತವಾಗಿದೆ.

ಪ್ರಕರಣದ ತನಿಖೆಯಂತೆ ಸೆಬಿಯು, ಹರೀಶ್‌ಕುಮಾರ್ ಕಾಂತಿಲಾಲ್ ಪಟೇಲ್, ವಿಶಾಲಕುಮಾರ್ ಕೃಷ್ಣಕಾಂತ್ ಬೋರಿಶಾ, ಪಾರ್ಧಿ ಧೀರೂಭಾಯ್ ಖಾನಾಭಾಯಿ, ಭಾವಿನ್ ನಟ್ವರ್‌ಲಾಲ್ ಪಾಂಚಾಲ್, ಅಂಕಿತ್ ಜಗದೀಶ್‌ಭಾಯ್ ಪಿಥ್ವಾ, ಕೇತನ್ ಪ್ರವೀಣ್‌ಭಾಯ್ ಪಾಂಚಾಲ್, ಪ್ರವೀಣ್ ಕುಮಾರ್ ಮತ್ತು ರಮೇಶ್‌ಚಂದ್ರ ಚಿತುಭಾಯಿ ಸೇರಿದಂತೆ ಒಟ್ಟು 19 ಜನರ ವಿರುದ್ಧ ಕ್ರಮ ಕೈಗೊಂಡಿದ್ದು, ಒಬ್ಬೊಬ್ಬರಿಗೆ ತಲಾ 5 ಲಕ್ಷದಂತೆ ಒಟ್ಟು 95 ಲಕ್ಷ ರೂ. ದಂಡ ವಿಧಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Tue, 27 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?