AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು

IMF upgrades India's GDP growth projection to 7.3pc in 2025: ಕಳೆದ ವರ್ಷ (2025) ಭಾರತದ ಜಿಡಿಪಿ ಶೇ. 7.3ರಷ್ಟು ವೃದ್ಧಿಯಾಗಿರುವ ಸಾಧ್ಯತೆ ಇದೆ ಎಂದು ಐಎಂಎಫ್ ಅಂದಾಜು ಮಾಡಿದೆ. ಇನ್ನು, ಮೂಡೀಸ್ ರೇಟಿಂಗ್ ಏಜೆನ್ಸಿ ಮಾಡಿರುವ ಅಂದಾಜು ಪರಿಷ್ಕರಣೆ ಪ್ರಕಾರ 2025-26ರಲ್ಲೂ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು. 2025ರ ಮಾರ್ಚ್, ಜೂನ್ ಮತ್ತು ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ಗಳಲ್ಲಿ ಜಿಡಿಪಿ ಬೆಳವಣಿಗೆ ಕ್ರಮವಾಗಿ ಶೇ. 7.4, ಶೇ.7.8 ಮತ್ತು ಶೇ. 8.2 ದಾಖಲಾಗಿದೆ.

ಭಾರತದ ಆರ್ಥಿಕ ಬೆಳವಣಿಗೆ ಶೇ. 7.3; ಐಎಂಎಫ್ ಮತ್ತು ಮೂಡೀಸ್ ಏಜೆನ್ಸಿ ಅಂದಾಜು
ಭಾರತದ ಆರ್ಥಿಕ ಬೆಳವಣಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 19, 2026 | 6:30 PM

Share

ನವದೆಹಲಿ, ಜನವರಿ 19: 2025ರ ಕ್ಯಾಲಂಡರ್ ವರ್ಷದಲ್ಲಿ, ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕ ಬೆಳವಣಿಗೆ (GDP) ಶೇ. 7.3ರಷ್ಟು ದಾಖಲಾಗಬಹುದು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ಮೂಡೀಸ್ ಏಜೆನ್ಸಿ ಅಂದಾಜು ಮಾಡಿವೆ. ಈ ಎರಡೂ ಸಂಸ್ಥೆಗಳು ಕೂಡ ತಮ್ಮ ಹಿಂದಿನ ಅಂದಾಜನ್ನು ಪರಿಷ್ಕರಿಸಿದ್ದು, ನಿರೀಕ್ಷೆ ಹೆಚ್ಚಿಸಿವೆ. 2025ರಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಐಎಂಎಫ್ ಹೇಳಿದೆ. 2025-26ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದು ಮೂಡೀಸ್ ಹೇಳಿದೆ.

ಐಎಂಎಫ್ ತನ್ನ ಹಿಂದಿನ ವರ್ಲ್ಡ್ ಎಕನಾಮಿಕ್ ಔಟ್​ಲುಕ್ ವರದಿಯಲ್ಲಿ ಭಾರತದ ಜಿಡಿಪಿ 2025ರಲ್ಲಿ ಶೇ. 6.7 ಬೆಳೆಯಬಹುದು ಎಂದು ನಿರೀಕ್ಷಿಸಿತ್ತು. ಇದೀಗ 70 ಮೂಲಾಂಕಗಳಷ್ಟು ಹೆಚ್ಚಿನ ಬೆಳವಣಿಗೆಯ ನಿರೀಕ್ಷೆ ಮಾಡಿದೆ. ಪ್ರಸಕ್ತ ಕ್ಯಾಲಂಡರ್ ವರ್ಷದಲ್ಲಿ (2026) ಮತ್ತು ಮುಂದಿ ವರ್ಷದಲ್ಲಿ (2027) ಜಿಡಿಪಿ ಶೇ. 6.4ಕ್ಕೆ ಸೀಮಿತಗೊಳ್ಳಬಹುದು ಎಂದೂ ಐಎಂಎಫ್ ಹೇಳಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್

2025ರ ಕ್ಯಾಲಂಡರ್ ವರ್ಷದ ಮೊದಲ ಮೂರು ಕ್ವಾರ್ಟರ್​ಗಳಲ್ಲಿ ಜಿಡಿಪಿ ಬೆಳವಣಿಗೆ ಶೇ. 7.4, ಶೇ. 7.8 ಮತ್ತು ಶೇ. 8.2 ದಾಖಲಾಗಿದೆ. ಡಿಸೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ಶೇ. 5.8ರಷ್ಟು ಜಿಡಿಪಿ ವೃದ್ಧಿಯಾದರೂ ಸಾಕು ಐಎಂಎಫ್ ಅಂದಾಜಿನಂತೆ 2025ರಲ್ಲಿ ಜಿಡಿಪಿ ದರ ಶೇ. 7.3 ಆಗುತ್ತದೆ. ಕೊನೆಯ ಕ್ವಾರ್ಟರ್​ನಲ್ಲಿ ಭಾರತೀಯ ಕಾರ್ಪೊರೇಟ್ ಕಂಪನಿಗಳು ನಿರೀಕ್ಷೆಗಿಂತ ಉತ್ತಮ ಹಣಕಾಸು ಲಾಭಗಳನ್ನು ತೋರಿದ ಹಿನ್ನೆಲೆಯಲ್ಲಿ ಆರ್ಥಿಕತೆ ಉತ್ತಮವಾಗಿ ಬೆಳೆಯುವ ಸಾಧ್ಯತೆ ಇದೆ ಎಂಬುದು ಐಎಂಎಫ್​ನ ಅಭಿಪ್ರಾಯ.

ಮೂಡೀಸ್ ವರದಿ ಕೂಡ ಆಶಾದಾಯಕ

ಪ್ರಸಕ್ತ ಹಣಕಾಸು ವರ್ಷವಾದ 2025-26ರಲ್ಲಿ ಭಾರತದ ಆರ್ಥಿಕತೆ ಶೇ. 7.3ರಷ್ಟು ಬೆಳೆಯಬಹುದು ಎಂದು ಮೂಡೀಸ್ ರೇಟಿಂಗ್ಸ್ ಏಜೆನ್ಸಿ ಹೇಳಿದೆ. ಉತ್ತಮ ಆರ್ಥಿಕ ಬೆಳವಣಿಗೆಯ ಪರಿಣಾಮವಾಗಿ ಸರಾಸರಿ ಕೌಟುಂಬಿಕ ಆದಾಯವೂ ಹೆಚ್ಚಳವಾಗಬಹುದು. ಇದರಿಂದ ಹೆಚ್ಚೆಚ್ಚು ಆದಾಯವಂತ ಜನರು ವಿಮಾ ರಕ್ಷಣೆಯ ಮೊರೆ ಹೋಗಬಹುದು. ಇದರಿಂದ ಇನ್ಷೂರೆನ್ಸ್ ಸೆಕ್ಟರ್​ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಬಹುದು ಎಂದು ಮೂಡೀಸ್ ರೇಟಿಂಗ್ಸ್ ವರದಿ ಹೇಳಿದೆ.

ಇದನ್ನೂ ಓದಿ: ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ?

ಭಾರತೀಯ ಜನಸಾಮಾನ್ಯರ ಆದಾಯ ಸ್ಥಿರವಾಗಿ ಹೆಚ್ಚುತ್ತಿದೆ. ಜನರಿಗೆ ತಮ್ಮ ಆದಾಯದ ರಕ್ಷಣೆ ಎಷ್ಟು ಮುಖ್ಯ ಎಂಬುದು ಅರಿವಿರುವುದರಿಂದ ಇನ್ಷೂರೆನ್ಸ್ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹಣಕಾಸು ವ್ಯವಸ್ಥೆ ಡಿಜಿಟಲೀಕರಣಗೊಂಡಿರುವುದರಿಂದ ಇನ್ಷೂರೆನ್ಸ್ ಉತ್ಪನ್ನಗಳು ಜನರನ್ನು ತಲುಪುವುದು ಸುಲಭವಾಗಿದೆ ಎಂಬಿತ್ಯಾದಿ ಅಂಶಗಳನ್ನು ಮೂಡೀಸ್ ರೇಟಿಂಗ್ಸ್ ಗುರುತಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!