ಚುನಾವಣೆಯ ವರ್ಷವೂ ಭಾರತದ ಹಣಕಾಸು ಶಿಸ್ತು ಮೆಚ್ಚಿಕೊಂಡ ಐಎಂಎಫ್

IMF Praises India for maintaining fiscal discipline: ಚುನಾವಣೆಯ ವರ್ಷದಲ್ಲಿ ಬಹಳ ದೇಶಗಳು ಹಣಕಾಸು ಶಿಸ್ತು ಗಾಳಿಗೆ ತೂರುತ್ತವೆ. ಆದರೆ, ಭಾರತದಲ್ಲಿ ಸರ್ಕಾರ ಉತ್ತಮವಾಗಿ ಆರ್ಥಿಕ ಶಿಸ್ತು ಕಾಯ್ದುಕೊಂಡಿದೆ ಎಂದು ಐಎಂಎಫ್​ನ ನಿರ್ದೇಶಕರಲ್ಲೊಬ್ಬರಾದ ಕೃಷ್ಣ ಶ್ರೀನಿವಾಸನ್ ಅಭಿಪ್ರಾಯಪಟ್ಟಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು, ಭಾರತದ ಸ್ಥೂಲ ಆರ್ಥಿಕತೆಯ ಮೂಲಾಂಶಗಳು ಬಹಳ ಪ್ರಬಲವಾಗಿವೆ. ಇವು ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಪರಿಣಮಿಸುತ್ತವೆ ಎಂದು ಹೇಳಿದ್ದಾರೆ.

ಚುನಾವಣೆಯ ವರ್ಷವೂ ಭಾರತದ ಹಣಕಾಸು ಶಿಸ್ತು ಮೆಚ್ಚಿಕೊಂಡ ಐಎಂಎಫ್
ಆರ್ಥಿಕತೆ
Follow us
|

Updated on: Apr 19, 2024 | 2:25 PM

ನವದೆಹಲಿ, ಏಪ್ರಿಲ್ 19: ಚುನಾವಣೆಯ ವರ್ಷದಲ್ಲೂ ಭಾರತ ಆರ್ಥಿಕ ಶಿಸ್ತು (fiscal discipline) ಕಾಯ್ದುಕೊಂಡಿದೆ. ಭಾರತದ ಆರ್ಥಿಕತೆ ಉತ್ತಮವಾಗಿ ಸಾಗುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಐಎಂಎಫ್ (IMF) ಶ್ಲಾಘಿಸಿದೆ. ‘ಈ ಹಂತದಲ್ಲಿ ಭಾರತದ ಆರ್ಥಿಕತೆ ಉತ್ತಮವಾಗಿ ಹೋಗುತ್ತಿದೆ. ಶೇ. 6.8ರಷ್ಟು ಬೆಳವಣಿಗೆ ಬಹಳ ಉತ್ತಮ. ಹಣದುಬ್ಬರವೂ ಕಡಿಮೆ ಆಗುತ್ತಿದೆ. ನಿಗದಿತ ಗುರಿಗೆ ಹಣದುಬ್ಬರ ಇಳಿಯುವುದನ್ನು ಖಚಿತಪಡಿಸಿಕೊಳ್ಳಬೇಕು. ಸ್ಥೂಲ ಆರ್ಥಿಕತೆಯ ಅಂಶಗಳು ಬಹಳ ಉತ್ತಮವಾಗಿ ಕಾಣುತ್ತಿವೆ,’ ಎಂದು ಐಎಂಎಫ್​ನಲ್ಲಿನ ಏಷ್ಯಾ ಮತ್ತು ಪೆಸಿಫಿಕ್ ವಿಭಾಗದ ನಿರ್ದೇಶಕ ಕೃಷ್ಣ ಶ್ರೀನಿವಾಸನ್ ಹೇಳಿದ್ದಾರೆ.

‘ಹಣಕಾಸು ವರ್ಷದಲ್ಲಿ, ಅದರಲ್ಲೂ ಚುನಾವಣೆಯ ವರ್ಷದಲ್ಲಿ ಆರ್ಥಿಕ ಶಿಸ್ತು ಕಾಯ್ದುಕೊಳ್ಳುವುದು ನಿಜಕ್ಕೂ ಗಮನಾರ್ಹ ಸಂಗತಿ. ಯಾಕೆಂದರೆ ಚುನಾವಣೆಯ ವರ್ಷ ಬಂದರೆ ದೇಶಗಳು ಆರ್ಥಿಕ ಶಿಸ್ತನ್ನು ಗಾಳಿಗೆ ತೂರುತ್ತವೆ. ಈ ಸರ್ಕಾರ ಶಿಸ್ತು ಕಾಯ್ದುಕೊಂಡಿದೆ. ಅಂತಿಮವಾಗಿ, ಸ್ಥೂಲ ಆರ್ಥಿಕ ಅಂಶಗಳು ಬೆಳವಣಿಗೆಗೆ ಪೂರಕವಾಗಿ ಪರಿಣಮಿಸುತ್ತವೆ,’ ಎಂದು ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಕೃಷ್ಣ ಶ್ರೀನಿವಾಸನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೋರಮಂಗಲದಲ್ಲಿದೆ ಕುಬೇರರ ಏರಿಯಾ; ದಾಖಲೆ ಬೆಲೆಗೆ ಮಾರಾಟವಾಗಿದೆ ನಿವೇಶನ

‘ಸ್ಥೂಲ ಮೂಲಾಂಶಗಳನ್ನು ಗಮನಿಸಿ ನೋಡಿ… ಚುನಾವಣಾ ವರ್ಷವಾದರೂ ಅವು ಬಹಳ ಗಟ್ಟಿಯಾಗಿವೆ. ಸರ್ಕಾರ ಹಣಕಾಸು ಶಿಸ್ತು ಕಾಯ್ದುಕೊಂಡಿದೆ. ಮೀಸಲು ಸ್ಥಾನ ಪ್ರಬಲವಾಗಿದೆ. ಒಟ್ಟಾರೆ ಅಂಶಗಳು ಉತ್ತಮವಾಗಿ ತೋರುತ್ತಿವೆ.

ಕಳೆದ ಹಲವು ವರ್ಷಗಳಲ್ಲಿ ಘಟಿಸಿದ ವಿವಿಧ ಆಘಾತಗಳನ್ನು ಭಾರತ ಯಶಸ್ವಿಯಾಗಿ ದಾಟಿದೆ. ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಭಾರತವೂ ಇದೆ. ಖಾಸಗಿ ಅನುಭೋಗ ಮತ್ತು ಸಾರ್ವಜನಿಕ ಹೂಡಿಕೆಯಿಂದ ಭಾರತದ ಆರ್ಥಿಕ ಬೆಳೆವಣಿಗೆ ಆಶಾದಾಯಕವಾಗಿದೆ. ಹಣದುಬ್ಬರ ಹಂತ ಹಂತರವಾಗಿ ಕಡಿಮೆ ಆಗುತ್ತಿದ್ದು ಈಗ ಶೇ. 5ಕ್ಕಿಂತ ಕಡಿಮೆಗೆ ಬಂದಿದೆ ಎಂದು ಹೇಳಿದ್ದಾರೆ.

ಭಾರತದ ಫಾರೆಕ್ಸ್ ಮೀಸಲು ನಿಧಿ ಏಪ್ರಿಲ್ 5ರಂದು ಹೊಸ ಎತ್ತರವಾದ 648.562 ಬಿಲಿಯನ್ ಡಾಲರ್​ಗೆ ಏರಿದೆ. 2021ರ ಸೆಪ್ಟಂಬರ್​ನಲ್ಲಿ 642 ಬಿಲಿಯನ್ ಡಾಲರ್​ನಷ್ಟು ವಿದೇಶೀ ವಿನಿಮಯ ಮೀಸಲು ನಿಧಿ ಇದ್ದದ್ದು ದಾಖಲೆಯಾಗಿತ್ತು. ಈಗ ಅದನ್ನೂ ಮೀರಿಸಿ ಫಾರೆಕ್ಸ್ ಸಂಪತ್ತು ಹೆಚ್ಚಿದೆ.

ಇದನ್ನೂ ಓದಿ: ಭಾರತ ಮುಂದುವರಿದ ದೇಶವಾಗಬೇಕಾದರೆ ಈ ನಾಲ್ಕು ಅಂಶಗಳು ಮುಖ್ಯ: ಮಾಜಿ ಆರ್​ಬಿಐ ಗವರ್ನರ್ ಸುಬ್ಬಾರಾವ್ ಸಲಹೆ

ಭಾರತದ ಜಿಡಿಪಿ ದರ ಕೂಡ ಕಳೆದ ಹಲವು ತ್ರೈಮಾಸಿಕಗಳಿಂದ ಉತ್ತಮವಾಗಿದೆ. 2023-24ರ ಮೊದಲ ಮೂರು ತ್ರೈಮಾಸಿಕದಲ್ಲಿ ಸರಾಸರಿ ಶೇ. 8ರ ದರದಲ್ಲಿ ಆರ್ಥಿಕತೆ ಬೆಳೆದಿದೆ. ಕೊನೆಯ ತ್ರೈಮಾಸಿಕವೂ ಕೂಡ ಶೇ. 7ಕ್ಕಿಂತಲೂ ಹೆಚ್ಚೇ ಇರುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ