AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rules Changing From June 1: ಜೂನ್​ನಲ್ಲಿ ಆರ್​ಟಿಒದಿಂದ ಹಿಡಿದು ಆಧಾರ್​ವರೆಗೆ ಈ ಪ್ರಮುಖ ಬದಲಾವಣೆಗಳಿವೆ, ಗಮನಿಸಿ

June 2024 financial rule changes: ನಮ್ಮ ಹಣಕಾಸು ಪರಿಸ್ಥಿತಿ ಮೇಲೆ ಪರಿಣಾಮ ಬೀರುವಂತಹ ಕೆಲ ಪ್ರಮುಖ ಘಟನೆಗಳು, ನಿಯಮಗಳು ಜೂನ್ ತಿಂಗಳಲ್ಲಿ ಇವೆ. ಜೂನ್ 1ರಂದು ತೈಲ ಮಾರುಕಟ್ಟೆ ಕಂಪನಿಗಳು ಎಲ್​ಪಿಜಿ ದರಗಳನ್ನು ಪರಿಷ್ಕರಿಸುತ್ತವೆ. ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್​ಡೇಟ್ ಮಾಡಲು ಜೂನ್ 14ರವರೆಗೆ ಅವಕಾಶ ಇದೆ. ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕ್ ರಜೆ ಇದೆ. ಕರ್ನಾಟಕದಲ್ಲಿ ಎಂಟು ದಿನ ಇದೆ. ಪೂರ್ಣ ವಿವರ ಈ ಸುದ್ದಿಯಲ್ಲಿದೆ ಓದಿ....

Rules Changing From June 1: ಜೂನ್​ನಲ್ಲಿ ಆರ್​ಟಿಒದಿಂದ ಹಿಡಿದು ಆಧಾರ್​ವರೆಗೆ ಈ ಪ್ರಮುಖ ಬದಲಾವಣೆಗಳಿವೆ, ಗಮನಿಸಿ
ಟ್ರಾಫಿಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 29, 2024 | 10:19 AM

Share

2024ರ ಜೂನ್ ತಿಂಗಳು ಹತ್ತಿರ ಇದೆ. ಆ ತಿಂಗಳು ಏನಾದರೂ ಪ್ರಮುಖ ಹಣಕಾಸು ಘಟನೆಗಳು (financial events) ಇವೆಯಾ ಎಂದು ಮುಂಚಿತವಾಗಿ ತಿಳಿಯುವುದು ಉತ್ತಮ. ಬ್ಯಾಂಕ್ ರಜೆಗಳಲ್ಲದೇ ಇನ್ನೂ ಕೆಲ ಪ್ರಮುಖ ಸಂಗತಿಗಳು, ಜನರ ದೈನಂದಿನ ಹಣವಂತಿಕೆಯ ಮೇಲೆ ಪರಿಣಾಮ ಬೀರಬಲ್ಲಂತಹ ಸಂಗತಿಗಳು ಮೊದಲೇ ಅರಿವಿದ್ದರೆ ಸರಿ. ಜೂನ್ ತಿಂಗಳಲ್ಲಿ ಇಂಥ ಹಣಕಾಸು ಪ್ರಭಾವ ಇರುವ ಪ್ರಮುಖ ವಿಚಾರಗಳು ಇಲ್ಲಿವೆ. ಜೂನ್ 4ರಂದು ಬರುವ ಲೋಕಸಭಾ ಚುನಾವಣೆಯ ಫಲಿತಾಂಶ ಕೂಡ ಪರಿಣಾಮ ಬೀರುತ್ತದೆ. ಅದನ್ನು ಬಿಟ್ಟು ಒಂದಿಷ್ಟು ಪ್ರಮುಖ ಘಟನೆಗಳ ವಿವರ ಇಲ್ಲಿದೆ.

ಎಲ್​ಪಿಜಿ ಸಿಲಿಂಡರ್ ದರ

ಇಂಡಿಯನ್ ಆಯಿಲ್ ಕಾರ್ಪೊರೇಶನ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳು ಪ್ರತೀ ತಿಂಗಳು ಎಲ್​ಜಿಪಿ ದರಗಳ ಪರಿಷ್ಕರಣೆ ಮಾಡುತ್ತವೆ. ಮೇ 1ರಂದು ಕಮರ್ಷಿಯಲ್ ಸಿಲಿಂಡರ್​ಗಳ ಬೆಲೆ ಇಳಿಕೆ ಮಾಡಲಾಗಿತ್ತು. ಜೂನ್ 1ರಂದು ಬೆಲೆ ಇಳಿಕೆ ಆಗುತ್ತದಾ, ಏರಿಕೆ ಆಗುತ್ತದಾ ಅಥವಾ ಬದಲಾವಣೆ ಆಗದಾ ಕಾದು ನೋಡಬೇಕು.

ಬ್ಯಾಂಕ್ ರಜಾ ದಿನಗಳು

ಜೂನ್ ತಿಂಗಳಲ್ಲಿ ದೇಶಾದ್ಯಂತ ಒಟ್ಟು 13 ದಿನಗಳವರೆಗೆ ಬ್ಯಾಂಕುಗಳಿಗೆ ರಜೆ ಇದೆ. ಇದರಲ್ಲಿ ಐದು ಭಾನುವಾರ ಮತ್ತು ಎರಡು ಶನಿವಾರದ ರಜೆಗಳು ಒಳಗೊಂಡಿವೆ. ಕರ್ನಾಟಕದಲ್ಲಿ ಎಂಟು ದಿನ ರಜೆ ಇದೆ.

ಇದನ್ನೂ ಓದಿ: ಪಾನ್ ಕಾರ್ಡ್​ಗೆ ಆಧಾರ್ ಲಿಂಕ್; ಮೇ 31ಕ್ಕೆ ಡೆಡ್​ಲೈನ್; ಮೀರಿದರೆ ಕಷ್ಟಕಷ್ಟ; ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

ಆಧಾರ್ ಕಾರ್ಡ್ ಅಪ್​ಡೇಟ್

ಆಧಾರ್ ಕಾರ್ಡ್ ಅನ್ನು ಆನ್​ಲೈನ್​ನಲ್ಲಿ ಉಚಿತವಾಗಿ ಅಪ್​ಡೇಟ್ ಮಾಡುವ ಅವಕಾಶ ಜೂನ್ 14ರವರೆಗೂ ಇದೆ. ಆ ಬಳಿಕ ಆಧಾರ್ ಅಪ್​ಡೇಟ್ ಮಾಡಲು 50 ರೂ ಶುಲ್ಕ ಪಾವತಿಸಬೇಕು.

ಟ್ರಾಫಿಕ್ ನಿಯಮದಲ್ಲಿ ಬದಲಾವಣೆ

ಜೂನ್ 1ರಿಂದ ಹೆಚ್ಚು ಕಟ್ಟುನಿಟ್ಟಾಗಿರುವ ಟ್ರಾಫಿಕ್ ನಿಯಮಗಳು ಚಾಲನೆಗೆ ಬರಲಿವೆ. ದಂಡದ ಮೊತ್ತ ಹೆಚ್ಚಲಿದೆ. ವಾಹನವನ್ನು ಹೆಚ್ಚು ವೇಗದಲ್ಲಿ ಚಲಾಯಿಸಿದರೆ ಎರಡು ಸಾವಿರ ರೂವರೆಗೂ ದಂಡ ಕಟ್ಟಬೇಕಾದೀತು. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿದರೆ 25,000 ರೂ ದಂಡ ಕಟ್ಟಬೇಕಾಗುತ್ತದೆ. ಆ ಹುಡುಗ ಅಥವಾ ಹುಡುಗಿಗೆ 25 ವರ್ಷ ವಯಸ್ಸಾಗುವವರೆಗೂ ಡ್ರೈವಿಂಗ್ ಲೈಸೆನ್ಸ್ ನೀಡಲಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Tue, 28 May 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!