AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ, ತೈಲ ಬಿಕ್ಕಟ್ಟಿನ ಸ್ಥಿತಿಯಲ್ಲೂ ಭಾರತದ ಆರ್ಥಿಕತೆ ಶೇ. 7.8 ಬೆಳೆಯಲು ಸಾಧ್ಯವಾಗಿದ್ದು ಹೇಗೆ?

Reasons why Indian economy grew faster that expected in Q1 of 27fy: 2026-27ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ. 7.8ರಷ್ಟು ಬೆಳೆದು ಅಚ್ಚರಿ ಸೃಷ್ಟಿಸಿದೆ. ಯುದ್ಧ, ತೈಲ ಬಿಕ್ಕಟ್ಟು, ಜಾಗತಿಕ ಆರ್ಥಿಕ ಮಂದಗತಿ ನಡುವೆ ಭಾರತ ಉತ್ತಮ ಬೆಳವಣಿಗೆ ದಾಖಲಿಸಿದ್ದು ಹೇಗೆ? ಆಂತರಿಕ ಅನುಭೋಗ, ಉತ್ಪಾದನೆ ಹೆಚ್ಚಳ ಮೊದಲಾದ ಕೆಲ ಕಾರಣಗಳಿಂದ ಜಿಡಿಪಿ ವೃದ್ಧಿ ಉತ್ತಮವಾಗಿದೆ.

ಯುದ್ಧ, ತೈಲ ಬಿಕ್ಕಟ್ಟಿನ ಸ್ಥಿತಿಯಲ್ಲೂ ಭಾರತದ ಆರ್ಥಿಕತೆ ಶೇ. 7.8 ಬೆಳೆಯಲು ಸಾಧ್ಯವಾಗಿದ್ದು ಹೇಗೆ?
ಆರ್ಥಿಕತೆImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2026 | 9:02 PM

Share

ನವದೆಹಲಿ, ಆಗಸ್ಟ್ 31: ಭಾರತದ ಆರ್ಥಿಕತೆ (Indian Economy) ಶೇ. 6ರ ಆಸುಪಾಸಿನಲ್ಲಿ ಇರಬಹುದು, ಶೇ. 7ರ ಬೆಳವಣಿಗೆ ದರ ದಾಟುವುದು ಕಷ್ಟ ಎಂದು ಹೆಚ್ಚಿನ ಅಂತರರಾಷ್ಟ್ರೀಯ ಏಜೆನ್ಸಿಗಳು, ಆರ್ಥಿಕ ತಜ್ಞರು ಹೇಳುತ್ತಿದ್ದರೂ, ಎಲ್ಲರ ಎಣಿಕೆ ತಲೆಕೆಳಗಾಗುವ ರೀತಿಯಲ್ಲಿ ದೇಶದ ಜಿಡಿಪಿ ವೃದ್ಧಿಸಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಮೊದಲ ಕ್ವಾರ್ಟರ್​ನಲ್ಲಿ (ಏಪ್ರಿಲ್-ಜೂನ್) ಜಿಡಿಪಿ ಶೇ. 7.8ರಷ್ಟು ಏರಿ ಅಚ್ಚರಿ ಮೂಡಿಸಿದೆ. ಜಾಗತಿಕವಾಗಿ ಅಮೆರಿಕ-ಇರಾನ್ ಯುದ್ಧ ಮತ್ತು ಹಾರ್ಮುಜ್ ಜಲಸಂಧಿ (Strait of Hormuz) ಬಿಕ್ಕಟ್ಟಿನಿಂದ ಉಂಟಾದ ಭಾರಿ ತೈಲ ಬೆಲೆ ಏರಿಕೆಯ ಸವಾಲುಗಳ ನಡುವೆಯೂ, ಭಾರತವು ಅಚ್ಚರಿ ಎನಿಸುವ ನೈಜ ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಜಾಗತಿಕ ಅರ್ಥಶಾಸ್ತ್ರಜ್ಞರ ಅಂದಾಜುಗಳನ್ನು ಹುಸಿಗೊಳಿಸಿದೆ.

ಜಾಗತಿಕ ತೈಲ ಆಘಾತ ಮತ್ತು ಸವಾಲುಗಳು

ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನಿಂದಾಗಿ ಇಡೀ ಜಗತ್ತಿನಲ್ಲಿ ಅಂತರರಾಷ್ಟ್ರೀಯ ಕಚ್ಚಾ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ತೈಲ ದರಗಳು ತೀವ್ರವಾಗಿ ಏರಿಕೆಯಾಗಿದ್ದವು. ಶೇ. 90 ರಷ್ಟು ತೈಲವನ್ನು ಆಮದು ಮಾಡಿಕೊಳ್ಳುವ ಭಾರತದ ಮೇಲೆ ಇದು ಭಾರಿ ಹಣದುಬ್ಬರ ಹಾಗೂ ರೂಪಾಯಿ ಮೌಲ್ಯ ಕುಸಿತದ ಆತಂಕವನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಭರ್ಜರಿ ಶೇ. 7.8 ಏರಿಕೆ; ಅದ್ಭುತ ಸಾಧನೆ ಎಂದ ಪ್ರಧಾನಿ ಮೋದಿ

ಸವಾಲುಗಳನ್ನು ಮೆಟ್ಟಿ ನಿಂತ ಭಾರತ

ಹಲವು ಅಂತರರಾಷ್ಟ್ರೀಯ ಆರ್ಥಿಕ ಸಂಸ್ಥೆಗಳು ಭಾರತದ ಪ್ರಗತಿ ನಿಧಾನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಭಾರತವು ಸಾಗರ ಆಮದು ಮೂಲಗಳನ್ನು ವೈವಿಧ್ಯಗೊಳಿಸುವುದು (Diversification) ಮತ್ತು ಆಂತರಿಕವಾಗಿ ಗಟ್ಟಿ ಆರ್ಥಿಕ ತಡಿ ಒದಗಿಸುವ ಮೂಲಕ ಜಾಗತಿಕ ಹಿಂಜರಿತದ ಪ್ರಭಾವದಿಂದ ತಪ್ಪಿಸಿಕೊಂಡಿದೆ.

ಭಾರತದ ಆರ್ಥಿಕ ಪ್ರಗತಿಗೆ ಪ್ರಮುಖ ಕಾರಣಗಳು

  • ದೇಶೀಯ ಬಳಕೆ (Domestic Consumption): ಭಾರತದ ಬೃಹತ್ ಆಂತರಿಕ ಮಾರುಕಟ್ಟೆ ಮತ್ತು ಗ್ರಾಹಕರ ಬೇಡಿಕೆಯು ಜಾಗತಿಕ ಆಘಾತಗಳನ್ನು ಹೀರಿಕೊಂಡಿದೆ. ಅಂದರೆ, ದೇಶದೊಳಗೆ ಮಾರುಕಟ್ಟೆ ಉತ್ತಮ ಆರೋಗ್ಯದಲ್ಲಿ ಇದ್ದು, ಉದ್ಯಮಗಳ ಕೈಹಿಡಿದಿದೆ.
  • ಸೇವಾ ಮತ್ತು ತಯಾರಿಕಾ ರಂಗ: ದೇಶದ ಸೇವಾ ವಲಯ (Services) ಹಾಗೂ ತಯಾರಿಕಾ ರಂಗದಲ್ಲಿ (Manufacturing) ದೃಢ ಪ್ರಗತಿ ದಾಖಲಾಗಿದೆ.
  • ಸರ್ಕಾರದ ಬಂಡವಾಳ ಹೂಡಿಕೆ: ಮೂಲಸೌಕರ್ಯ (Infrastructure) ಯೋಜನೆಗಳಿಗೆ ಸರ್ಕಾರ ನಿರಂತರವಾಗಿ ಮಾಡಿದ ಹೂಡಿಕೆಗಳು ಆರ್ಥಿಕತೆಗೆ ಬಲ ನೀಡಿವೆ.

ಇದನ್ನೂ ಓದಿ: ಪೆಟ್ರೋಲ್ ನಳಿಕೆ, ಬಿಲ್​ಗಳಲ್ಲಿ ಎಥೆನಾಲ್ ಶೇಕಡಾವಾರು ಮಾಹಿತಿ ಕಡ್ಡಾಯಕ್ಕೆ ಸುಪ್ರೀಂ ನಕಾರ

ಜಾಗತಿಕವಾಗಿ ಮಾರುಕಟ್ಟೆಗಳು ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಬೃಹತ್ ಆರ್ಥಿಕತೆಯಾಗಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದು ಹೌದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ