AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ

"ಮಹತ್ವದ ವಹಿವಾಟುಗಳ" ಬಗ್ಗೆ ತಪ್ಪಾದ ಮಾಹಿತಿಯನ್ನು ಹೊಂದಿರುವ ಕೆಲವು ಇ-ಮೇಲ್​ಗಳು ಬರುತ್ತಿರುವ ಬಗ್ಗೆ ಕೆಲವು ಚಾರ್ಟರ್ಡ್ ಅಕೌಂಟಂಟ್​​ಗಳು, ತೆರಿಗೆದಾರರು ತಿಳಿಸಿದ್ದಾರೆ. 2026-27ರ ವರ್ಷದ ಮುಂಗಡ ತೆರಿಗೆ ಇ-ಕ್ಯಾಂಪೇನ್ ಅಡಿಯಲ್ಲಿ ಕಳುಹಿಸಲಾದ ಕೆಲವು ಇಮೇಲ್‌ಗಳನ್ನು ನಿರ್ಲಕ್ಷಿಸಲು ಆದಾಯ ತೆರಿಗೆ ಇಲಾಖೆ ತೆರಿಗೆದಾರರನ್ನು ಮನವಿ ಮಾಡಿದೆ. ಆ ರೀತಿಯ ಯಾವುದೇ ಇ-ಮೇಲ್​ಗಳು ಅಥವಾ ಸಂದೇಶಗಳು ಮಾನ್ಯವಾದುದಲ್ಲ, ಅದನ್ನು ನಿರ್ಲಕ್ಷ್ಯ ಮಾಡಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ
Income TaxImage Credit source: iStock
ಸುಷ್ಮಾ ಚಕ್ರೆ
|

Updated on: Mar 14, 2026 | 6:29 PM

Share

ನವದೆಹಲಿ, ಮಾರ್ಚ್ 14: ಕಳೆದೆರಡು ದಿನಗಳಿಂದ ಅನೇಕ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ತೆರಿಗೆದಾರರಿಗೆ ಮುಂಗಡ ತೆರಿಗೆಯ ಬಗ್ಗೆ ಆದಾಯ ತೆರಿಗೆ (Income Tax) ಇಲಾಖೆಯಿಂದ ಇಮೇಲ್‌ಗಳು ಬರುತ್ತಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಚರ್ಚೆಯೂ ಶುರುವಾಗಿದೆ. ಹೀಗಾಗಿ, ಮುಂಗಡ ತೆರಿಗೆ ಇ-ಅಭಿಯಾನದ ಅಡಿಯಲ್ಲಿ ಕಳುಹಿಸಲಾದ ಇ-ಮೇಲ್‌ಗಳ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣವನ್ನು ನೀಡಿದೆ. ‘ಮಹತ್ವದ ವಹಿವಾಟುಗಳ’ ಬಗ್ಗೆ ನಕಲಿ ಮುಂಗಡ ತೆರಿಗೆ ಪಾವತಿಯ ಇ-ಮೇಲ್​ಗಳು ಕೆಲವರಿಗೆ ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

ಆದಾಯ ತೆರಿಗೆ ಇಲಾಖೆಯು ಪ್ರಸ್ತುತ ಮುಂಗಡ ತೆರಿಗೆ ಇ-ಅಭಿಯಾನವನ್ನು ನಡೆಸುತ್ತಿದೆ. ಈ ಅಭಿಯಾನದ ಅಡಿಯಲ್ಲಿ, ಜನರು ತಮ್ಮ ಮುಂಗಡ ತೆರಿಗೆಯನ್ನು ಸಮಯಕ್ಕೆ ಸರಿಯಾಗಿ ಪಾವತಿಸಲು ಅವರು ಮಾಡಿದ ಪ್ರಮುಖ ಹಣಕಾಸು ವಹಿವಾಟುಗಳನ್ನು ನೆನಪಿಸಲಾಗುತ್ತದೆ. ಈ ಸ್ವಯಂಚಾಲಿತ ಪ್ರಕ್ರಿಯೆಯಲ್ಲಿ ಒಂದು ಪ್ರಮುಖ ತಾಂತ್ರಿಕ ದೋಷ ಸಂಭವಿಸಿದೆ. ಇದರ ಪರಿಣಾಮವಾಗಿ, ಅನೇಕ ತೆರಿಗೆದಾರರು ತಮ್ಮ ಹಣಕಾಸಿನ ವಹಿವಾಟುಗಳ ಬಗ್ಗೆ ವಾಸ್ತವಕ್ಕೆ ಯಾವುದೇ ಸಂಬಂಧವಿಲ್ಲದ ಡೇಟಾ ಮತ್ತು ವಿವರಗಳನ್ನು ಪಡೆದಿದ್ದಾರೆ. ಈ ದೋಷವು ಎಲ್ಲ ತೆರಿಗೆ ದಾಖಲೆಗಳನ್ನು ಹೊಂದಿರುವ ಮತ್ತು ನಿಯಮಗಳಿಗೆ ಅನುಸಾರವಾಗಿ ತಮ್ಮ ಎಲ್ಲಾ ತೆರಿಗೆಗಳನ್ನು ಪಾವತಿಸಿದವರಲ್ಲಿಯೂ ಸಹ ಭಯವನ್ನು ಉಂಟುಮಾಡಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೂ EMI?: ಜಿಬಿಎಯಿಂದ ಬೆಂಗಳೂರಿಗರಿಗೆ ಸಿಗುತ್ತಾ ಗುಡ್​​ ನ್ಯೂಸ್​?

2026-27 (ಹಣಕಾಸು ವರ್ಷ 2025-26)ರಲ್ಲಿ ನಡೆಯುತ್ತಿರುವ ಮುಂಗಡ ತೆರಿಗೆ ಇ-ಅಭಿಯಾನದ ಭಾಗವಾಗಿ ಕೆಲವು ತೆರಿಗೆದಾರರು ಕೈಗೊಂಡ ‘ಮಹತ್ವದ ವಹಿವಾಟುಗಳ’ ಬಗ್ಗೆ ತಪ್ಪಾದ ವಿವರಗಳನ್ನು ಹೊಂದಿರುವ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ. ಅದನ್ನು ನಿರ್ಲಕ್ಷ್ಯಿಸಿ. ಈ ದೋಷವನ್ನು ತಮ್ಮ ಗಮನಕ್ಕೆ ತಂದಿದ್ದಕ್ಕಾಗಿ ತೆರಿಗೆದಾರರಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಇದರಿಂದ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಇದನ್ನೂ ಓದಿ: ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ

“ಕೆಲವು ತೆರಿಗೆದಾರರು ಮುಂಗಡ ತೆರಿಗೆ ಇ-ಅಭಿಯಾನದ ಭಾಗವಾಗಿ ಅವರು ಕೈಗೊಂಡ ‘ಮಹತ್ವದ ವಹಿವಾಟುಗಳ’ ಬಗ್ಗೆ ತಪ್ಪಾದ ವಿವರಗಳನ್ನು ಹೊಂದಿರುವ ಇಮೇಲ್‌ಗಳನ್ನು ಸ್ವೀಕರಿಸಿದ್ದಾರೆ. ನಮ್ಮ ಸೇವಾ ಪೂರೈಕೆದಾರರೊಂದಿಗೆ ಸಮನ್ವಯದಿಂದ ಈ ವಿಷಯವನ್ನು ಪರಿಹರಿಸಲು ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಇಮೇಲ್ ಸಂವಹನವನ್ನು ನಿರ್ಲಕ್ಷಿಸಿ. ಇ-ಫೈಲಿಂಗ್ ಪೋರ್ಟಲ್ ಮೂಲಕ ಪ್ರವೇಶಿಸಬಹುದಾದ ಪೋರ್ಟಲ್‌ನಲ್ಲಿರುವ ಇ-ಕ್ಯಾಂಪೇನ್ ಟ್ಯಾಬ್ ಮೂಲಕ ತಮ್ಮ ವಹಿವಾಟಿನ ವಿವರಗಳನ್ನು ಪರಿಶೀಲಿಸಬಹುದು” ಎಂದು ತೆರಿಗೆದಾರರಿಗೆ ಸಲಹೆ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು