AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Pension Yojana ಆದಾಯ ತೆರಿಗೆ ಪಾವತಿದಾರರು ಅಕ್ಟೋಬರ್‌ನಿಂದ ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ

2022 ಅಕ್ಟೋಬರ್ 1 ರಂದು ಅಥವಾ ನಂತರ ಸೇರ್ಪಡೆಗೊಂಡ ಚಂದಾದಾರರು, ಅರ್ಜಿ ಸಲ್ಲಿಸಿದ ದಿನಾಂಕದಂದು ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ.

Atal Pension Yojana ಆದಾಯ ತೆರಿಗೆ ಪಾವತಿದಾರರು ಅಕ್ಟೋಬರ್‌ನಿಂದ ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 11, 2022 | 9:41 PM

Share

ದೆಹಲಿ: ಆದಾಯ ತೆರಿಗೆ ಪಾವತಿದಾರರು (Income tax payers) ಅಕ್ಟೋಬರ್ 1 ರಿಂದ ಅಟಲ್ ಪಿಂಚಣಿ ಯೋಜನೆಯಡಿ (Atal Pension Scheme) ನೋಂದಣಿಗೆ ಅರ್ಹರಾಗಿರುವುದಿಲ್ಲ. ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ತಿದ್ದುಪಡಿಯನ್ನು ಮಾಡಲಾಗಿದೆ. ಇದನ್ನು ಅಕ್ಟೋಬರ್ 16, 2015 ರಂದು ತಿಳಿಸಲಾಗಿದೆ. 2022 ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಪಾವತಿದಾರರಾಗಿರುವ  ಯಾವುದೇ ನಾಗರಿಕರು ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಆದಾಯ-ತೆರಿಗೆ ಪಾವತಿದಾರ ಎಂಬ ಅಭಿವ್ಯಕ್ತಿಯು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಆದಾಯ ತೆರಿಗೆ ಕಾಯಿದೆ, 1961 ರ ಪ್ರಕಾರ ಆದಾಯ ತೆರಿಗೆಯನ್ನು ಪಾವತಿಸುವ ವ್ಯಕ್ತಿಯನ್ನು ಅರ್ಥೈಸುತ್ತದೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ಹೇಳಲಾಗಿದೆ. 2022 ಅಕ್ಟೋಬರ್ 1 ರಂದು ಅಥವಾ ನಂತರ ಸೇರ್ಪಡೆಗೊಂಡ ಚಂದಾದಾರರು, ಅರ್ಜಿ ಸಲ್ಲಿಸಿದ ದಿನಾಂಕದಂದು ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ. ಇಲ್ಲಿಯವರೆಗೆ ಸಂಗ್ರಹಿಸಲಾದ ಪಿಂಚಣಿಯನ್ನು ಅವರಿಗೆ ನೀಡಲಾಗುತ್ತದೆ.

ಏನಿದು ಅಟಲ್ ಪಿಂಚಣಿ ಯೋಜನೆ?

ಇದು ಸ್ವಯಂಪ್ರೇರಿತ, ಆವರ್ತಕ ಕೊಡುಗೆ ಆಧಾರಿತ ಪಿಂಚಣಿ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಚಂದಾದಾರರು 60 ವರ್ಷ ವಯಸ್ಸನ್ನು ತಲುಪಿದ ನಂತರ ಪಿಂಚಣಿ ಪಡೆಯುತ್ತಾರೆ. ಯೋಜನೆಯಡಿಯಲ್ಲಿ ಪ್ರತಿ ಚಂದಾದಾರರು ಕೇಂದ್ರ ಸರ್ಕಾರದ ಖಾತರಿಯ ಕನಿಷ್ಠ ಪಿಂಚಣಿ ತಿಂಗಳಿಗೆ ರೂ 1,000 ಅಥವಾ ತಿಂಗಳಿಗೆ ರೂ 2,000 ಅಥವಾ ತಿಂಗಳಿಗೆ ರೂ 3,000 ಅಥವಾ ತಿಂಗಳಿಗೆ ರೂ 4000 ಅಥವಾ ತಿಂಗಳಿಗೆ ರೂ 5,000ವನ್ನು 60 ವರ್ಷಗಳ ನಂತರ ಮರಣದವರೆಗೆ ಪಡೆಯುತ್ತಾರೆ. ಈ ಮೊತ್ತವು ಅವರ ವೈಯಕ್ತಿಕ ಕೊಡುಗೆಯನ್ನು ಆಧರಿಸಿರುತ್ತದೆ.

ಚಂದಾದಾರರ ಮರಣದ ನಂತರ ಸಂಗಾತಿಯ ಮರಣದ ತನಕ ಚಂದಾದಾರರಿಗೆ ಅದೇ ಪಿಂಚಣಿಯನ್ನು ಭಾರತ ಸರ್ಕಾರವು ಖಾತರಿಪಡಿಸುತ್ತದೆ.  ಚಂದಾದಾರರ ಮತ್ತು ಸಂಗಾತಿಯ ಮರಣದ ನಂತರ, ಚಂದಾದಾರರ ನಾಮಿನಿಯು ಚಂದಾದಾರರ 60 ನೇ ವಯಸ್ಸಿನವರೆಗೆ ಪಿಂಚಣಿ ಹಣ ಪಡೆಯಲು ಅರ್ಹರಾಗಿರುತ್ತಾರೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಯೋಜನೆಯಡಿಯಲ್ಲಿ 4,31,86,423 ಚಂದಾದಾರರನ್ನು ನೋಂದಾಯಿಸಲಾಗಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Thu, 11 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ