AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Pension Yojana ಆದಾಯ ತೆರಿಗೆ ಪಾವತಿದಾರರು ಅಕ್ಟೋಬರ್‌ನಿಂದ ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ

2022 ಅಕ್ಟೋಬರ್ 1 ರಂದು ಅಥವಾ ನಂತರ ಸೇರ್ಪಡೆಗೊಂಡ ಚಂದಾದಾರರು, ಅರ್ಜಿ ಸಲ್ಲಿಸಿದ ದಿನಾಂಕದಂದು ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ.

Atal Pension Yojana ಆದಾಯ ತೆರಿಗೆ ಪಾವತಿದಾರರು ಅಕ್ಟೋಬರ್‌ನಿಂದ ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 11, 2022 | 9:41 PM

Share

ದೆಹಲಿ: ಆದಾಯ ತೆರಿಗೆ ಪಾವತಿದಾರರು (Income tax payers) ಅಕ್ಟೋಬರ್ 1 ರಿಂದ ಅಟಲ್ ಪಿಂಚಣಿ ಯೋಜನೆಯಡಿ (Atal Pension Scheme) ನೋಂದಣಿಗೆ ಅರ್ಹರಾಗಿರುವುದಿಲ್ಲ. ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ತಿದ್ದುಪಡಿಯನ್ನು ಮಾಡಲಾಗಿದೆ. ಇದನ್ನು ಅಕ್ಟೋಬರ್ 16, 2015 ರಂದು ತಿಳಿಸಲಾಗಿದೆ. 2022 ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಪಾವತಿದಾರರಾಗಿರುವ  ಯಾವುದೇ ನಾಗರಿಕರು ಅಟಲ್ ಪಿಂಚಣಿ ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಆದಾಯ-ತೆರಿಗೆ ಪಾವತಿದಾರ ಎಂಬ ಅಭಿವ್ಯಕ್ತಿಯು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದ ಆದಾಯ ತೆರಿಗೆ ಕಾಯಿದೆ, 1961 ರ ಪ್ರಕಾರ ಆದಾಯ ತೆರಿಗೆಯನ್ನು ಪಾವತಿಸುವ ವ್ಯಕ್ತಿಯನ್ನು ಅರ್ಥೈಸುತ್ತದೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ಹೇಳಲಾಗಿದೆ. 2022 ಅಕ್ಟೋಬರ್ 1 ರಂದು ಅಥವಾ ನಂತರ ಸೇರ್ಪಡೆಗೊಂಡ ಚಂದಾದಾರರು, ಅರ್ಜಿ ಸಲ್ಲಿಸಿದ ದಿನಾಂಕದಂದು ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿದಾರರಾಗಿದ್ದರೆ, ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ. ಇಲ್ಲಿಯವರೆಗೆ ಸಂಗ್ರಹಿಸಲಾದ ಪಿಂಚಣಿಯನ್ನು ಅವರಿಗೆ ನೀಡಲಾಗುತ್ತದೆ.

ಏನಿದು ಅಟಲ್ ಪಿಂಚಣಿ ಯೋಜನೆ?

ಇದು ಸ್ವಯಂಪ್ರೇರಿತ, ಆವರ್ತಕ ಕೊಡುಗೆ ಆಧಾರಿತ ಪಿಂಚಣಿ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಚಂದಾದಾರರು 60 ವರ್ಷ ವಯಸ್ಸನ್ನು ತಲುಪಿದ ನಂತರ ಪಿಂಚಣಿ ಪಡೆಯುತ್ತಾರೆ. ಯೋಜನೆಯಡಿಯಲ್ಲಿ ಪ್ರತಿ ಚಂದಾದಾರರು ಕೇಂದ್ರ ಸರ್ಕಾರದ ಖಾತರಿಯ ಕನಿಷ್ಠ ಪಿಂಚಣಿ ತಿಂಗಳಿಗೆ ರೂ 1,000 ಅಥವಾ ತಿಂಗಳಿಗೆ ರೂ 2,000 ಅಥವಾ ತಿಂಗಳಿಗೆ ರೂ 3,000 ಅಥವಾ ತಿಂಗಳಿಗೆ ರೂ 4000 ಅಥವಾ ತಿಂಗಳಿಗೆ ರೂ 5,000ವನ್ನು 60 ವರ್ಷಗಳ ನಂತರ ಮರಣದವರೆಗೆ ಪಡೆಯುತ್ತಾರೆ. ಈ ಮೊತ್ತವು ಅವರ ವೈಯಕ್ತಿಕ ಕೊಡುಗೆಯನ್ನು ಆಧರಿಸಿರುತ್ತದೆ.

ಚಂದಾದಾರರ ಮರಣದ ನಂತರ ಸಂಗಾತಿಯ ಮರಣದ ತನಕ ಚಂದಾದಾರರಿಗೆ ಅದೇ ಪಿಂಚಣಿಯನ್ನು ಭಾರತ ಸರ್ಕಾರವು ಖಾತರಿಪಡಿಸುತ್ತದೆ.  ಚಂದಾದಾರರ ಮತ್ತು ಸಂಗಾತಿಯ ಮರಣದ ನಂತರ, ಚಂದಾದಾರರ ನಾಮಿನಿಯು ಚಂದಾದಾರರ 60 ನೇ ವಯಸ್ಸಿನವರೆಗೆ ಪಿಂಚಣಿ ಹಣ ಪಡೆಯಲು ಅರ್ಹರಾಗಿರುತ್ತಾರೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಯೋಜನೆಯಡಿಯಲ್ಲಿ 4,31,86,423 ಚಂದಾದಾರರನ್ನು ನೋಂದಾಯಿಸಲಾಗಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Thu, 11 August 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ