AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಚೀನಾ ಮೂಲದ ಮೊಬೈಲ್ ಫೋನ್ ತಯಾರಕ ಕಂಪೆನಿಗಳಾದ ಒಪ್ಪೋ, ಒನ್​ಪ್ಲಸ್, ಶಿಯೋಮಿ ಕಚೇರಿ ಆವರಣದ ಮೇಲೆ ಆದಾಯ ತೆರಿಗೆ ಇಲಾಖೆಯು ತೆರಿಗೆ ಕಳವಿನ ಆರೋಪದಲ್ಲಿ ದಾಳಿ ನಡೆಸಿದೆ.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 23, 2021 | 12:18 PM

Share

ತೆರಿಗೆ ವಂಚನೆ ಆರೋಪದ ಮೇಲೆ ಮೊಬೈಲ್ ಫೋನ್ ತಯಾರಕ ಕಂಪೆನಿ ಕಚೇರಿ ಆವರಣಗಳ ಮೇಲೆ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ಸಿಎನ್​ಬಿಸಿ- 18ಗೆ ತಿಳಿಸಿರುವುದಾಗಿ ವರದಿ ಮಾಡಲಾಗಿದೆ. ಒಪ್ಪೋ (Oppo), ಶಿಯೋಮಿ (Xiaomi) ಮತ್ತು ಒನ್​ಪ್ಲಸ್ (OnePlus) ಸೇರಿದಂತೆ ಪ್ರಮುಖ ಫೋನ್ ತಯಾರಕರ ಕಚೇರಿಗಳ ಮೇಲೆ ಅಖಿಲ ಭಾರತ ಮಟ್ಟದಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ. “ಒಪ್ಪೋ, ಶಿಯೋಮಿ ಮತ್ತು ಒನ್​ಪ್ಲಸ್​ನ ಪ್ರಮುಖ ವಿತರಕರ ಮೇಲೆ ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಒಪ್ಪೋ, ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದೆ. “ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ನಾವು ಇಲ್ಲಿನ ಕಾನೂನನ್ನು ಹೆಚ್ಚು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ. ಕಾರ್ಯವಿಧಾನದ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ,” ಎಂದು ಕಂಪೆನಿಯ ವಕ್ತಾರರು ಹೇಳಿರುವುದಾಗಿ ಪಿಟಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಂದು ಮೊಬೈಲ್ ಫೋನ್ ತಯಾರಕ ಶಿಯೋಮಿ ಸಹ “ಇದು ಭಾರತೀಯ ಕಾನೂನುಗಳಿಗೆ ಅನುಸಾರವಾಗಿದೆ,” ಎಂದು ಹೇಳಿದೆ. “ಜವಾಬ್ದಾರಿಯುತ ಕಂಪೆನಿಯಾಗಿ ನಾವು ಭಾರತೀಯ ಕಾನೂನುಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಾಮುಖ್ಯ ನೀಡುತ್ತೇವೆ. ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ಅಗತ್ಯವಿರುವ ಎಲ್ಲ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ,” ಎಂದು ಶಿಯೋಮಿ ವಕ್ತಾರರು ಹೇಳಿದ್ದಾರೆ.

ಯಾವ ನಿರ್ದಿಷ್ಟ ಕಾರಣಕ್ಕೆ ಈ ಶೋಧ ನಡೆದಿದೆ ಮತ್ತು ಯಾವ ಕಾರಣಕ್ಕೆ ವಶ ಪಡಿಸಿಕೊಳ್ಳಲಾಗಿದೆ ಮತ್ತು ಇತರ ವಿವರಗಳು ಇನ್ನೂ ಲಭ್ಯವಿಲ್ಲ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

Published On - 12:16 pm, Thu, 23 December 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್