AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಚೀನಾ ಮೂಲದ ಮೊಬೈಲ್ ಫೋನ್ ತಯಾರಕ ಕಂಪೆನಿಗಳಾದ ಒಪ್ಪೋ, ಒನ್​ಪ್ಲಸ್, ಶಿಯೋಮಿ ಕಚೇರಿ ಆವರಣದ ಮೇಲೆ ಆದಾಯ ತೆರಿಗೆ ಇಲಾಖೆಯು ತೆರಿಗೆ ಕಳವಿನ ಆರೋಪದಲ್ಲಿ ದಾಳಿ ನಡೆಸಿದೆ.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 23, 2021 | 12:18 PM

Share

ತೆರಿಗೆ ವಂಚನೆ ಆರೋಪದ ಮೇಲೆ ಮೊಬೈಲ್ ಫೋನ್ ತಯಾರಕ ಕಂಪೆನಿ ಕಚೇರಿ ಆವರಣಗಳ ಮೇಲೆ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ಸಿಎನ್​ಬಿಸಿ- 18ಗೆ ತಿಳಿಸಿರುವುದಾಗಿ ವರದಿ ಮಾಡಲಾಗಿದೆ. ಒಪ್ಪೋ (Oppo), ಶಿಯೋಮಿ (Xiaomi) ಮತ್ತು ಒನ್​ಪ್ಲಸ್ (OnePlus) ಸೇರಿದಂತೆ ಪ್ರಮುಖ ಫೋನ್ ತಯಾರಕರ ಕಚೇರಿಗಳ ಮೇಲೆ ಅಖಿಲ ಭಾರತ ಮಟ್ಟದಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ. “ಒಪ್ಪೋ, ಶಿಯೋಮಿ ಮತ್ತು ಒನ್​ಪ್ಲಸ್​ನ ಪ್ರಮುಖ ವಿತರಕರ ಮೇಲೆ ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಒಪ್ಪೋ, ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದೆ. “ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ನಾವು ಇಲ್ಲಿನ ಕಾನೂನನ್ನು ಹೆಚ್ಚು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ. ಕಾರ್ಯವಿಧಾನದ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ,” ಎಂದು ಕಂಪೆನಿಯ ವಕ್ತಾರರು ಹೇಳಿರುವುದಾಗಿ ಪಿಟಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಂದು ಮೊಬೈಲ್ ಫೋನ್ ತಯಾರಕ ಶಿಯೋಮಿ ಸಹ “ಇದು ಭಾರತೀಯ ಕಾನೂನುಗಳಿಗೆ ಅನುಸಾರವಾಗಿದೆ,” ಎಂದು ಹೇಳಿದೆ. “ಜವಾಬ್ದಾರಿಯುತ ಕಂಪೆನಿಯಾಗಿ ನಾವು ಭಾರತೀಯ ಕಾನೂನುಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಾಮುಖ್ಯ ನೀಡುತ್ತೇವೆ. ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ಅಗತ್ಯವಿರುವ ಎಲ್ಲ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ,” ಎಂದು ಶಿಯೋಮಿ ವಕ್ತಾರರು ಹೇಳಿದ್ದಾರೆ.

ಯಾವ ನಿರ್ದಿಷ್ಟ ಕಾರಣಕ್ಕೆ ಈ ಶೋಧ ನಡೆದಿದೆ ಮತ್ತು ಯಾವ ಕಾರಣಕ್ಕೆ ವಶ ಪಡಿಸಿಕೊಳ್ಳಲಾಗಿದೆ ಮತ್ತು ಇತರ ವಿವರಗಳು ಇನ್ನೂ ಲಭ್ಯವಿಲ್ಲ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

Published On - 12:16 pm, Thu, 23 December 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ