AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಚೀನಾ ಮೂಲದ ಮೊಬೈಲ್ ಫೋನ್ ತಯಾರಕ ಕಂಪೆನಿಗಳಾದ ಒಪ್ಪೋ, ಒನ್​ಪ್ಲಸ್, ಶಿಯೋಮಿ ಕಚೇರಿ ಆವರಣದ ಮೇಲೆ ಆದಾಯ ತೆರಿಗೆ ಇಲಾಖೆಯು ತೆರಿಗೆ ಕಳವಿನ ಆರೋಪದಲ್ಲಿ ದಾಳಿ ನಡೆಸಿದೆ.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 23, 2021 | 12:18 PM

Share

ತೆರಿಗೆ ವಂಚನೆ ಆರೋಪದ ಮೇಲೆ ಮೊಬೈಲ್ ಫೋನ್ ತಯಾರಕ ಕಂಪೆನಿ ಕಚೇರಿ ಆವರಣಗಳ ಮೇಲೆ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ಸಿಎನ್​ಬಿಸಿ- 18ಗೆ ತಿಳಿಸಿರುವುದಾಗಿ ವರದಿ ಮಾಡಲಾಗಿದೆ. ಒಪ್ಪೋ (Oppo), ಶಿಯೋಮಿ (Xiaomi) ಮತ್ತು ಒನ್​ಪ್ಲಸ್ (OnePlus) ಸೇರಿದಂತೆ ಪ್ರಮುಖ ಫೋನ್ ತಯಾರಕರ ಕಚೇರಿಗಳ ಮೇಲೆ ಅಖಿಲ ಭಾರತ ಮಟ್ಟದಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ. “ಒಪ್ಪೋ, ಶಿಯೋಮಿ ಮತ್ತು ಒನ್​ಪ್ಲಸ್​ನ ಪ್ರಮುಖ ವಿತರಕರ ಮೇಲೆ ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಒಪ್ಪೋ, ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದೆ. “ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ನಾವು ಇಲ್ಲಿನ ಕಾನೂನನ್ನು ಹೆಚ್ಚು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ. ಕಾರ್ಯವಿಧಾನದ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ,” ಎಂದು ಕಂಪೆನಿಯ ವಕ್ತಾರರು ಹೇಳಿರುವುದಾಗಿ ಪಿಟಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಂದು ಮೊಬೈಲ್ ಫೋನ್ ತಯಾರಕ ಶಿಯೋಮಿ ಸಹ “ಇದು ಭಾರತೀಯ ಕಾನೂನುಗಳಿಗೆ ಅನುಸಾರವಾಗಿದೆ,” ಎಂದು ಹೇಳಿದೆ. “ಜವಾಬ್ದಾರಿಯುತ ಕಂಪೆನಿಯಾಗಿ ನಾವು ಭಾರತೀಯ ಕಾನೂನುಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಾಮುಖ್ಯ ನೀಡುತ್ತೇವೆ. ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ಅಗತ್ಯವಿರುವ ಎಲ್ಲ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ,” ಎಂದು ಶಿಯೋಮಿ ವಕ್ತಾರರು ಹೇಳಿದ್ದಾರೆ.

ಯಾವ ನಿರ್ದಿಷ್ಟ ಕಾರಣಕ್ಕೆ ಈ ಶೋಧ ನಡೆದಿದೆ ಮತ್ತು ಯಾವ ಕಾರಣಕ್ಕೆ ವಶ ಪಡಿಸಿಕೊಳ್ಳಲಾಗಿದೆ ಮತ್ತು ಇತರ ವಿವರಗಳು ಇನ್ನೂ ಲಭ್ಯವಿಲ್ಲ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

Published On - 12:16 pm, Thu, 23 December 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ