AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಚೀನಾ ಮೂಲದ ಮೊಬೈಲ್ ಫೋನ್ ತಯಾರಕ ಕಂಪೆನಿಗಳಾದ ಒಪ್ಪೋ, ಒನ್​ಪ್ಲಸ್, ಶಿಯೋಮಿ ಕಚೇರಿ ಆವರಣದ ಮೇಲೆ ಆದಾಯ ತೆರಿಗೆ ಇಲಾಖೆಯು ತೆರಿಗೆ ಕಳವಿನ ಆರೋಪದಲ್ಲಿ ದಾಳಿ ನಡೆಸಿದೆ.

Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Dec 23, 2021 | 12:18 PM

ತೆರಿಗೆ ವಂಚನೆ ಆರೋಪದ ಮೇಲೆ ಮೊಬೈಲ್ ಫೋನ್ ತಯಾರಕ ಕಂಪೆನಿ ಕಚೇರಿ ಆವರಣಗಳ ಮೇಲೆ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮೂಲಗಳು ಸಿಎನ್​ಬಿಸಿ- 18ಗೆ ತಿಳಿಸಿರುವುದಾಗಿ ವರದಿ ಮಾಡಲಾಗಿದೆ. ಒಪ್ಪೋ (Oppo), ಶಿಯೋಮಿ (Xiaomi) ಮತ್ತು ಒನ್​ಪ್ಲಸ್ (OnePlus) ಸೇರಿದಂತೆ ಪ್ರಮುಖ ಫೋನ್ ತಯಾರಕರ ಕಚೇರಿಗಳ ಮೇಲೆ ಅಖಿಲ ಭಾರತ ಮಟ್ಟದಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ. “ಒಪ್ಪೋ, ಶಿಯೋಮಿ ಮತ್ತು ಒನ್​ಪ್ಲಸ್​ನ ಪ್ರಮುಖ ವಿತರಕರ ಮೇಲೆ ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಒಪ್ಪೋ, ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ ಎಂದು ಹೇಳಿದೆ. “ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ನಾವು ಇಲ್ಲಿನ ಕಾನೂನನ್ನು ಹೆಚ್ಚು ಗೌರವಿಸುತ್ತೇವೆ ಮತ್ತು ಪಾಲಿಸುತ್ತೇವೆ. ಕಾರ್ಯವಿಧಾನದ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುವುದನ್ನು ಮುಂದುವರಿಸುತ್ತೇವೆ,” ಎಂದು ಕಂಪೆನಿಯ ವಕ್ತಾರರು ಹೇಳಿರುವುದಾಗಿ ಪಿಟಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತೊಂದು ಮೊಬೈಲ್ ಫೋನ್ ತಯಾರಕ ಶಿಯೋಮಿ ಸಹ “ಇದು ಭಾರತೀಯ ಕಾನೂನುಗಳಿಗೆ ಅನುಸಾರವಾಗಿದೆ,” ಎಂದು ಹೇಳಿದೆ. “ಜವಾಬ್ದಾರಿಯುತ ಕಂಪೆನಿಯಾಗಿ ನಾವು ಭಾರತೀಯ ಕಾನೂನುಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಾಮುಖ್ಯ ನೀಡುತ್ತೇವೆ. ಭಾರತದಲ್ಲಿ ಹೂಡಿಕೆ ಮಾಡಿದ ಪಾಲುದಾರರಾಗಿ, ಅಗತ್ಯವಿರುವ ಎಲ್ಲ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ,” ಎಂದು ಶಿಯೋಮಿ ವಕ್ತಾರರು ಹೇಳಿದ್ದಾರೆ.

ಯಾವ ನಿರ್ದಿಷ್ಟ ಕಾರಣಕ್ಕೆ ಈ ಶೋಧ ನಡೆದಿದೆ ಮತ್ತು ಯಾವ ಕಾರಣಕ್ಕೆ ವಶ ಪಡಿಸಿಕೊಳ್ಳಲಾಗಿದೆ ಮತ್ತು ಇತರ ವಿವರಗಳು ಇನ್ನೂ ಲಭ್ಯವಿಲ್ಲ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

Published On - 12:16 pm, Thu, 23 December 21

ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್