AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಲ್ ಮತ್ತಿತರ ಉನ್ನತಾಧಿಕಾರಿಗಳ ಸ್ಥಳ, ಕಚೇರಿಗಳ ಮೇಲೆ ಐಟಿ ದಾಳಿ

ಹೀರೋ ಮೋಟೋಕಾರ್ಪ್​ ಅಧ್ಯಕ್ಷ ಪವನ್ ಮುಂಜಲ್ ಮತ್ತು ಇತರ ಉನ್ನತಾಧಿಕಾರಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆಯಿಂದ ಬುಧವಾರ ದಾಳಿ ನಡೆದಿದೆ.

IT Raid: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಲ್ ಮತ್ತಿತರ ಉನ್ನತಾಧಿಕಾರಿಗಳ ಸ್ಥಳ, ಕಚೇರಿಗಳ ಮೇಲೆ ಐಟಿ ದಾಳಿ
ಪವನ್ ಮುಂಜಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Mar 23, 2022 | 2:21 PM

Share

ಹೀರೋ ಮೋಟೋಕಾರ್ಪ್​ನ (Hero Moto Corp) ಅಧ್ಯಕ್ಷ ಪವನ್ ಮುಂಜಲ್ ಮತ್ತು ಕಂಪೆನಿಯ ಇತರ ಮೇಲ್​ ಸ್ತರದ ಅಧಿಕಾರಿಗಳ ಆಸ್ತಿಗಳು ಮತ್ತು ಕಚೇರಿಗಳ ಮೇಲೆ ಮಾರ್ಚ್ 23ನೇ ತಾರೀಕಿನ ಬುಧವಾರದಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿದೆ. ತೆರಿಗೆ ಕಳವು ಆರೋಪದ ಹಿನ್ನೆಲೆಯಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಪವನ್ ಮುಂಜಲ್​ರ ಮನೆ ಮತ್ತು ಕಚೇರಿಗಳು ಗುರುಗ್ರಾಮ, ಹರ್ಯಾಣ, ದೆಹಲಿ ಮತ್ತಿತರ ನಗರಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ. ಆದಾಯ ತೆರಿಗೆ ಇಲಾಖೆಯಲ್ಲಿನ ಅಧಿಕಾರಿಗಳ ಗುಂಪು ಕಂಪೆನಿಯ ಮತ್ತು ಪ್ರವರ್ತಕರ (Promotors) ಹಣಕಾಸು ದಾಖಲಾತಿಗಳು ಮತ್ತು ಇತರ ವ್ಯವಹಾರ ವಹಿವಾಟುಗಳನ್ನು ಪರಿಶೀಲಿಸಿದೆ ಎಂದು ಮಾಹಿತಿ ನೀಡಲಾಗಿದೆ.

ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್​ ಮುಂಜಲ್​ರ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ಹೀರೋ ಮೋಟೋಕಾರ್ಪ್ ಮತ್ತು ಅದರ ಹಿರಿಯ ಅಧಿಕಾರಿಗಳಿಗೆ ಸೇರಿದ ಹತ್ತಾರು ಸ್ಥಳಗಳ ಶೋಧ ನಡೆಸಲಾಗಿದೆ. ತೆರಿಗೆ ಕಳುವಿನ ಗುಮಾನಿ ಮೇಲೆ ನಡೆದಿರುವ ಶೋಧ ಹಾಗೂ ವಶಪಡಿಸಿಕೊಳ್ಳುವ ಕಾರ್ಯಾಚರಣೆ ಇದು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ಹೀರೋ ಮೋಟೋಕಾರ್ಪ್​ನಿಂದ ಅಧಿಕೃತವಾದ ಹೇಳಿಕೆ ಬರಬೇಕಿದೆ. ಆದಾಯ ತೆರಿಗೆ ದಾಳಿ ಬಗ್ಗೆ ಸುದ್ದಿ ಹೊರ ಬಿದ್ದ ಮೇಲೆ ಕಂಪೆನಿಯ ಷೇರುಗಳು ಶೇ 1.5ರಷ್ಟು ನಷ್ಟ ಕಂಡವು.

ಮುಂಜಲ್ ನೇತೃತ್ವದ ಹೀರೋ ಮೋಟೋಖಾರ್ಪ್ ಏಷ್ಯಾ, ಆಫ್ರಿಕಾ ಹಾಗೂ ದಕ್ಷಿಣ ಮತ್ತು ಮಧ್ಯ ಅಮೆರಿಕ ಸೇರಿದಂತೆ 40 ದೇಶಗಳಲ್ಲಿ ಘಟಕಗಳನ್ನು ಹೊಂದಿದೆ. ಒಂದು ವರ್ಷದಲ್ಲಿ ಅತಿ ಹೆಚ್ಚು ಯೂನಿಟ್​ ಬೈಕ್​ಗಳನ್ನು ಮಾರಾಟ ಮಾಡುವ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಎಂದು 2001ರಲ್ಲಿ ಎನಿಸಿಕೊಂಡಿತು ಹೀರೋ ಮೋಟೋಕಾರ್ಪ್. ದೇಶೀಯ ಮೋಟಾರ್​ಸೈಕಲ್ ಮಾರುಕಟ್ಟೆಯಲ್ಲಿ ಕಂಪೆನಿಯು ಶೇ 50ರಷ್ಟು ಪಾಲನ್ನು ಹೊಂದಿದ್ದು, ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 10 ಕೋಟಿ ಮೋಟಾರ್ ಸೈಕಲ್ ಮಾರಾಟ ಮಾಡಿದೆ.

ಕಂಪೆನಿಯ ಒಟ್ಟಾರೆ ಸಗಟು ಮಾರಾಟದಲ್ಲಿ ಶೇ 29ರಷ್ಟು ಕುಸಿತ ಆಗಿದೆ ಎಂದು ಫೆಬ್ರವರಿಯಲ್ಲಿ ವರದಿ ಮಾಡಲಾಗಿತ್ತು.

ಇದನ್ನೂ ಓದಿ: Tax evasion: ತೆರಿಗೆ ಕಳವಿನ ಆರೋಪದಲ್ಲಿ ಶಿಯೋಮಿ, ಒನ್​ಪ್ಲಸ್, ಒಪ್ಪೋ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?