AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Refund: ಐಟಿ ರಿಟರ್ನ್ ಫೈಲ್ ಮಾಡಿದರೂ ರೀಫಂಡ್ ಬಂದಿಲ್ಲವಾ? ಸಮಸ್ಯೆ ಪತ್ತೆಹಚ್ಚಿ ಬಗೆಹರಿಸುವುದು ಹೇಗೆ?

Troubleshooting Income Tax Refund Failure: ಆದಾಯ ತೆರಿಗೆ ರಿಟರ್ನ್ ಸಲ್ಲಿಸಿ ಕೆಲ ವಾರಗಳಿಂದ ಕೆಲ ತಿಂಗಳುಗಳ ಒಳಗೆ ರೀಫಂಡ್ ಸಿಗುತ್ತದೆ. ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೆ ರೀಫಂಡ್ ಆಗದೇ ಹೋಗಬಹುದು. ಅದರ ಕಾರಣ ತಿಳಿಯುವುದು ಅದಕ್ಕೆ ಪರಿಹಾರ ಹುಡುಕುವುದು ಈ ವಿವರ ಇಲ್ಲಿದೆ...

IT Refund: ಐಟಿ ರಿಟರ್ನ್ ಫೈಲ್ ಮಾಡಿದರೂ ರೀಫಂಡ್ ಬಂದಿಲ್ಲವಾ? ಸಮಸ್ಯೆ ಪತ್ತೆಹಚ್ಚಿ ಬಗೆಹರಿಸುವುದು ಹೇಗೆ?
ಆದಾಯ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 27, 2023 | 11:54 AM

Share

2022-23ರ ಹಣಕಾಸು ವರ್ಷಕ್ಕೆ ಐಟಿ ರಿಟರ್ನ್ ಸಲ್ಲಿಸಲು ಗಡುವಿಗೆ ಕೆಲವೇ ದಿನ ಬಾಕಿದೆ. ಜುಲೈ 31ರವರೆಗು ಮಾತ್ರ ಐಟಿಆರ್ ಫೈಲಿಂಗ್​ಗೆ (ITR Filing) ಕಾಲಾವಕಾಶ ಇದೆ. ಜೂನ್ ತಿಂಗಳಿಂದಲೇ ಐಟಿಆರ್ ಸಲ್ಲಿಕೆ ಕಾರ್ಯಕ್ಕೆ ಅವಕಾಶ ಕೊಡಲಾಗಿತ್ತು. 10 ದಿನಗಳ ಹಿಂದಿನ ಮಾಹಿತಿಯಂತೆ 3 ಕೋಟಿಗೂ ಹೆಚ್ಚು ಐಟಿಆರ್​ಗಳು ಸಲ್ಲಿಕೆಯಾಗಿವೆ ಎನ್ನಲಾಗಿದೆ. ಐಟಿಆರ್ ಸಲ್ಲಿಕೆಯಾಗಿ ಕೆಲ ತಿಂಗಳುಗಳಲ್ಲಿ ರೀಫಂಡ್ ಆಗುತ್ತದೆ. ಎಲ್ಲಾ ದಾಖಲೆಗಳು ಸರಿ ಇದ್ದಲ್ಲಿ ಕೆಲವೇ ವಾರಗಳಲ್ಲಿ ರೀಫಂಡ್ ಬಂದುಬಿಡಬಹುದು. ಸಾಕಷ್ಟು ತೆರಿಗೆ ಪಾವತಿದಾರರು ರೀಫಂಡ್ (Income tax refund) ಆಗುತ್ತಿಲ್ಲ ಎಂದು ಹತಾಶೆ ತೋಡಿಕೊಂಡಿದ್ದಾರೆ. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿ ಪರಿಶೀಲಿಸಿದಾಗ ‘ರಿಸ್ಟ್ರಿಕ್ಟೆಡ್ ರೀಫಂಡ್’ ಅಥವಾ ‘ನಾಟ್ ಎಲಿಜಿಬಲ್ ಫಾರ್ ರೀಫಂಡ್’ ಎನ್ನುವ ಸಂದೇಶ ಕಾಣುತ್ತಿದೆ ಎಂದು ಹಲವರು ಹೇಳುತ್ತಿದ್ದಾರೆ. ಅಷ್ಟಕ್ಕೂ ಐಟಿಆರ್​ಗಳಲ್ಲಿ ಏನು ದೋಷ ಇದ್ದರೆ ರೀಫಂಡ್ ಕಷ್ಟಸಾಧ್ಯವಾಗುತ್ತದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಐಟಿ ರೀಫಂಡ್ ಸರಿಯಾಗಿ ಆಗದಿರುವುದಕ್ಕೆ ಕಾರಣಗಳು

ತಪ್ಪು ಮಾಹಿತಿ: ಬ್ಯಾಂಕ್ ಖಾತೆ ಸಂಖ್ಯೆ, ಹೆಸರು, ವಿಳಾಸ ಇತ್ಯಾದಿ ಮಾಹಿತಿ ಸರಿಯಾಗಿ ಕೊಡದೇ ಇದ್ದರೆ ರೀಫಂಡ್ ಸಮಸ್ಯೆಯಾಗುತ್ತದೆ. ಹಾಗೆಯೇ, ಬ್ಯಾಂಕ್ ಖಾತೆ ಮತ್ತು ಪ್ಯಾನ್ ಕಾರ್ಡ್​ನಲ್ಲಿರುವ ಮಾಹಿತಿಯೂ ಹೊಂದಿಕೆಯಾಗಿರಬೇಕು.

ಸಲ್ಲಿಸುವಾಗ ಆಗುವ ತಪ್ಪುಗಳು: ಐಟಿ ರಿಟರ್ನ್ ಫೈಲಿಂಗ್ ವೇಳೆ ಆದಾಯ, ವೆಚ್ಚ, ಹೂಡಿಕೆ ಇತ್ಯಾದಿ ಬಗ್ಗೆ ಅರೆಬರೆ ಮಾಹಿತಿ ನೀಡುವುದು, ತಪ್ಪು ಲೆಕ್ಕ ಕೊಡುವುದು ಇತ್ಯಾದಿ.

ಬಾಕಿ ತೆರಿಗೆ ಮುರಿದುಕೊಂಡಿರಬಹುದು: ನೀವು ಸರ್ಕಾರಕ್ಕೆ ಕೊಡಬೇಕಾದ ಯಾವುದಾದರೂ ತೆರಿಗೆ ಬಾಕಿ ಉಳಿದಿದ್ದರೆ ಆಗ ನಿಮ್ಮ ರೀಫಂಡ್ ಹಣವನ್ನು ಮುರಿದುಕೊಳ್ಳಲಾಗುತ್ತದೆ.

ಇದನ್ನೂ ಓದಿ: ITR: ಐಟಿಆರ್ ಫೈಲ್ ಮಾಡುತ್ತಿದ್ದೀರಾ? ಈ ಕೊನೆಯ ಹಂತ ಮರೆಯದಿರಿ; ಇವೆರಿಫಿಕೇಶನ್ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ರೀಫಂಡ್ ಸಿಗಲ್ಲ

ಐಟಿ ರೀಫಂಡ್ ಆಗಲಿಲ್ಲವೆಂದರೆ ಏನು ಮಾಡಬೇಕು?

  • ಐಟಿಆರ್ ರೀಫಂಡ್ ಸ್ಟೇಟಸ್ ಅನ್ನು ಪರಿಶೀಲಿಸಿ, ರೀಫಂಡ್ ಹಣ ಬಿಡುಗಡೆಗೆ ಮತ್ತೊಮ್ಮೆ ಮನವಿ ಸಲ್ಲಿಸಿ
  • ಹಿಂದೆ ಸಲ್ಲಿಸಿದ್ದ ಐಟಿಆರ್ ಅನ್ನು ಅಗತ್ಯ ಇದ್ದರೆ ತಿದ್ದಿ ಮರಳಿ ಸಲ್ಲಿಸಿ
  • ಯಾವುದಾದರೂ ತೆರಿಗೆ ಹಣ ಬಾಕಿ ಉಳಿಸಿಕೊಂಡಿದ್ದರೆ ಅದನ್ನು ಪಾವತಿಸಿ
  • ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿ ಬ್ಯಾಂಕ್ ಖಾತೆಯನ್ನು ವ್ಯಾಲಿಡೇಟ್ ಮಾಡಲಾಗಿದೆಯಾ ಎಂಬುದನ್ನು ಪರಿಶೀಲಿಸಿ. ಇಲ್ಲದಿದ್ದರೆ ಅದನ್ನು ಮಾಡಿ

ಇದನ್ನೂ ಓದಿ: ITR Deadline: ಐಟಿ ರಿಟರ್ನ್ ಫೈಲ್ ಮಾಡುವ ಗಡುವು ವಿಸ್ತರಣೆಯಾಗುತ್ತಾ? ಇಲ್ಲಿಯವರೆಗೆ ಐಟಿಆರ್ ಸಲ್ಲಿಸಿದವರೆಷ್ಟು? ಇಲ್ಲಿದೆ ಡೀಟೇಲ್ಸ್

ಇನ್ಕಮ್ ಟ್ಯಾಕ್ಸ್ ರೀಫಂಡ್ ಪಡೆಯಲು ಪ್ರೀ ವ್ಯಾಲಿಡೇಟ್ ಮಾಡಿದ ಬ್ಯಾಂಕ್ ಖಾತೆ ಇರಬೇಕು ಎಂದು ಆದಾಯ ತೆರಿಗೆ ಇಲಾಖೆ ಹೇಳುತ್ತದೆ. ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪ್ರೀ ವ್ಯಾಲಿಡೇಟ್ ಮಾಡಿ ರೀಫಂಡ್​ಗೆ ನಾಮಿನೇಟ್ ಮಾಡಬಹುದು. ಎಸ್​ಬಿ ಖಾತೆ, ಕರೆಂಟ್ ಅಕೌಂಟ್, ಓವರ್​ಡ್ರಾಫ್ಟ್ ಅಕೌಂಟ್, ಎನ್​ಆರ್​ಒ ಅಕೌಂಟ್, ಕ್ಯಾಷ್ ಕ್ರೆಡಿಟ್ ಅಕೌಂಟ್​ಗಳನ್ನು ಮಾತ್ರ ಪ್ರೀವ್ಯಾಲಿಡೇಟ್ ಮಾಡಲು ಸಾಧ್ಯ.

ಬ್ಯಾಂಕ್ ಖಾತೆಗಳನ್ನು ಪ್ರೀ ವ್ಯಾಲಿಡೇಟ್ ಮಾಡುವ ಕೆಲಸ ಬಹಳ ಸುಲಭ. ಐಟಿಆರ್ ಫೈಲಿಂಗ್ ವೇಳೆ ನೀವು ಬ್ಯಾಂಕ್ ಖಾತೆಯೊಂದನ್ನು ಆಯ್ದುಕೊಂಡು ಪ್ರೀವ್ಯಾಲಿಡೇಶನ್​ಗೆ ಮನವಿ ಸಲ್ಲಿಸಬಹುದು. ಆಗ ಬ್ಯಾಂಕ್ ಅದನ್ನು ಅನುಮೋದಿಸಿದರೆ ಆ ಖಾತೆಯು ಪ್ರೀ ವ್ಯಾಲಿಡೇಟ್ ಆಗುತ್ತದೆ. ಸಾಮಾನ್ಯವಾಗಿ 10-12 ಕಾರ್ಯದಿನಗಳಲ್ಲಿ ಇದು ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Thu, 27 July 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?