AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್

ಪ್ರಸಕ್ತ ಹಣಕಾಸು ವರ್ಷದಲ್ಲಿ ನವೆಂಬರ್ 8ನೇ ತಾರೀಕಿನವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆ ಪಾವತಿದಾರರಿಗೆ 1.15 ಲಕ್ಷ ಕೋಟಿ ರೂಪಾಯಿ ಹೆಚ್ಚು ಐಟಿ ರೀಫಂಡ್ ಆಗಿದೆ.

IT Refund: 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಐಟಿ ರೀಫಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 11, 2021 | 12:13 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ 98 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1.15 ಲಕ್ಷ ಕೋಟಿ ರೂಪಾಯಿಗೂ ಅಧಿಕ ಆದಾಯ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ. ಇವುಗಳು 2020-21 ಹಣಕಾಸು ವರ್ಷಕ್ಕೆ (ಅಸೆಸ್​ಮೆಂಟ್ ವರ್ಷ 2021-22) 65.31 ಲಕ್ಷ ತೆರಿಗೆದಾರರಿಗೆ 12,616.79 ಕೋಟಿ ರೂಪಾಯಿ ಮರುಪಾವತಿಗಳನ್ನು ಒಳಗೊಂಡಿವೆ.

“CBDT 1ನೇ ಏಪ್ರಿಲ್, 2021ರಿಂದ ನವೆಂಬರ್ 8, 2021ರ ವರೆಗೆ 98.90 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 1,15,917 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ.

ಇದರಲ್ಲಿ 97.12 ಲಕ್ಷಕ್ಕೂ ಹೆಚ್ಚು ತೆರಿಗೆದಾರರಿಗೆ 36,000 ಕೋಟಿ ರೂಪಾಯಿಗಳ ವಯಕ್ತಿಕ ಆದಾಯ ತೆರಿಗೆ ಮರುಪಾವತಿಗಳು ಮತ್ತು 1.77 ಲಕ್ಷ ಪ್ರಕರಣಗಳಲ್ಲಿ 79,917 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳು ಸೇರಿವೆ.

ನವೆಂಬರ್ 8, 2016ರಂದು ನೋಟು ನಿಷೇಧ ಘೋಷಣೆ ಮಾಡಿದ ನಂತರ ತೆರಿಗೆ ಸಂಗ್ರಹದಲ್ಲಿ ಗಣನೀಯವಾದ ಪ್ರಗತಿ ಆಗಿದೆ ಎಂದು ಕೇಂದ್ರ ಸರ್ಕಾರದ ಅಂಕಿ- ಅಂಶಗಳು ತಿಳಿಸುತ್ತಿವೆ.

ಇದನ್ನೂ ಓದಿ: IT Refund Status: ಆದಾಯ ತೆರಿಗೆ ರೀಫಂಡ್ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ

Published On - 12:12 am, Thu, 11 November 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ