AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Refund: ಪ್ರಸಕ್ತ ಹಣಕಾಸು ವರ್ಷದಲ್ಲಿ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿ

ಪ್ರಸಕ್ತ ಹಣಕಾಸು ವರ್ಷ 2021-22ರಲ್ಲಿ ಮಾರ್ಚ್ 7ನೇ ತಾರೀಕಿನ ತನಕ 1.83 ಲಕ್ಷ ಕೋಟಿ ರೂಪಾಯಿ ಆದಾಯ ತೆರಿಗೆ ರೀಫಂಡ್​ ಮಾಡಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.

Income Tax Refund: ಪ್ರಸಕ್ತ ಹಣಕಾಸು ವರ್ಷದಲ್ಲಿ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 11, 2022 | 8:48 AM

Share

ಪ್ರಸಕ್ತ ಹಣಕಾಸು ವರ್ಷದಲ್ಲಿ, ಅಂದರೆ 2021-22ನೇ ಸಾಲಿನಲ್ಲಿ 2.14 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 1.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ತೆರಿಗೆ ಮರುಪಾವತಿಯನ್ನು ನೀಡಲಾಗಿದೆ ಎಂದು ಆದಾಯ ತೆರಿಗೆ (Income Tax) ಇಲಾಖೆ ಗುರುವಾರ ತಿಳಿಸಿದೆ. ಇದು ವೈಯಕ್ತಿಕ ಆದಾಯ ತೆರಿಗೆ ವರ್ಗದ ಅಡಿಯಲ್ಲಿ 2,11,76,025 ಪ್ರಕರಣಗಳಲ್ಲಿ 67,442 ಕೋಟಿ ರೂಪಾಯಿಗಳ ಮರುಪಾವತಿ ಮತ್ತು 2,31,654 ಪ್ರಕರಣಗಳಲ್ಲಿ 1,19,235 ಕೋಟಿ ರೂಪಾಯಿಗಳ ಕಾರ್ಪೊರೇಟ್ ತೆರಿಗೆ ಮರುಪಾವತಿಗಳನ್ನು ಒಳಗೊಂಡಿದೆ ಎಂದು ಆದಾಯ ತೆರಿಗೆ ಇಲಾಖೆಯು ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದೆ.

“ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) 1ನೇ ಏಪ್ರಿಲ್, 2021ರಿಂದ 7ನೇ ಮಾರ್ಚ್, 2022ರ ವರೆಗೆ 2.14 ಕೋಟಿಗೂ ಹೆಚ್ಚು ತೆರಿಗೆದಾರರಿಗೆ 1,86,677 ಕೋಟಿ ರೂಪಾಯಿಗಳ ಮರುಪಾವತಿಯನ್ನು ನೀಡಿದೆ,” ಎಂದು ಟ್ವೀಟ್​ನಲ್ಲಿ ಮಾಹಿತಿಯನ್ನು ನೀಡಲಾಗಿದೆ.

“ಇದು AY (ಅಸೆಸ್​ಮೆಂಟ್​ ವರ್ಷ) 2021-22ರ 35,296.86 ಕೋಟಿ ರೂಪಾಯಿ ಮೊತ್ತದ 1.74 ಕೋಟಿ ಮರುಪಾವತಿಗಳನ್ನು ಒಳಗೊಂಡಿದೆ,” ಎಂದು ಹೇಳಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು (CBDT) ಆದಾಯ ತೆರಿಗೆ ಇಲಾಖೆಯ ನೀತಿ ರೂಪಿಸುವ ಸಂಸ್ಥೆಯಾಗಿದೆ.

ಇದನ್ನೂ ಓದಿ: Income Tax: ಕೇಂದ್ರ ಬಜೆಟ್​ 2022ರ ನಂತರ ಹಿರಿಯ ನಾಗರಿಕರ ಆದಾಯ ತೆರಿಗೆ ಲೆಕ್ಕಾಚಾರ ಹೇಗೆ?

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!