AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR filing: ಐಟಿ ರಿಟರ್ನ್ಸ್​ ಸಲ್ಲಿಸಲು ಇಂದು ಕೊನೆಯ ದಿನ; ಕಾರ್ಯನಿರ್ವಹಿಸಲಿವೆ ಆಯಕಾರ್ ಸೇವಾ ಕೇಂದ್ರಗಳು

ಐಟಿ ರಿಟರ್ನ್ಸ್​ ಸಲ್ಲಿಕೆಗೆ ಕೊನೆಯ ದಿನವಾಗಿರುವ ಜುಲೈ 31ರ ಭಾನುವಾರ ಆದಾಯ ತೆರಿಗೆ ಸಹಾಯ ಕೇಂದ್ರಗಳಿಗೆ ರಜೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆಯು ಸ್ಪಷ್ಟಪಡಿಸಿದೆ.

ITR filing: ಐಟಿ ರಿಟರ್ನ್ಸ್​ ಸಲ್ಲಿಸಲು ಇಂದು ಕೊನೆಯ ದಿನ; ಕಾರ್ಯನಿರ್ವಹಿಸಲಿವೆ ಆಯಕಾರ್ ಸೇವಾ ಕೇಂದ್ರಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 31, 2022 | 9:54 AM

Share

ಬೆಂಗಳೂರು: 2021-22ರ ಆರ್ಥಿಕ ಸಾಲಿನ ಆದಾಯ ತೆರಿಗೆ ರಿಟರ್ನ್ಸ್​ (Income Tax Returns) ಸಲ್ಲಿಸಲು ಇಂದು (ಜುಲೈ 31ರ ಭಾನುವಾರ) ಕೊನೆಯ ದಿನವಾಗಿದೆ. ಭಾನುವಾರವಾಗಿದ್ದರೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆದಾಯ ತೆರಿಗೆ ಇಲಾಖೆಯ ಆಯಕಾರ್ ಸೇವಾ ಕೇಂದ್ರಗಳು (Aaykar Seva Kendras – ASKs) ಅಥವಾ ಆದಾಯ ತೆರಿಗೆ ಸಹಾಯ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದಾಯ ತೆರಿಗೆ ಸಹಾಯ ಕೇಂದ್ರಗಳಿಗೆ ರಜೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆಯು ಸ್ಪಷ್ಟಪಡಿಸಿದೆ.

‘ದೇಶಾದ್ಯಂತ ಇರುವ ಆದಾಯ ತೆರಿಗೆ ಸೇವಾ ಕೇಂದ್ರಗಳು ಭಾನುವಾರವೂ ಎಂದಿನಂತೆ ಕೆಲಸ ಮಾಡಲಿವೆ. ಆದಾಯ ತೆರಿಗೆ ಪಾವತಿಗೆ ಮುಂದಾಗುವ ನಾಗರಿಕರ ನೆರವಿಗಾಗಿ ಹೆಚ್ಚುವರಿ ಸ್ವೀಕೃತಿ ಕೇಂದ್ರಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ನೇರ ತೆರಿಗೆಗಳ ಮಂಡಳಿ (Central Board of Direct Taxes – CBDT) ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಜುಲೈ 31ರಂದು ಭಾನುವಾರವಾಗಿರುವ ಕಾರಣ ಬ್ಯಾಂಕ್​ಗಳು ಸಹ ಕಾರ್ಯನಿರ್ವಹಿಸುವುದಿಲ್ಲ. ಐಟಿ ರಿಟರ್ನ್ಸ್​ನ ಕೊನೆಯ ದಿನವಾಗಿರುವ ಕಾರಣ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಪೋರ್ಟಲ್​ನ ಟ್ರಾಫಿಕ್ (ಬಳಕೆದಾರರು) ಸಹ ಹೆಚ್ಚಾಗಿರುತ್ತದೆ.

ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಿಟರ್ನ್ಸ್​ ಸಲ್ಲಿಸಿದ್ದಾರೆ. ಈ ಪೈಕಿ ಶನಿವಾರ ಒಂದೇ ದಿನ 44 ಲಕ್ಷ ಮಂದಿ ರಿಟರ್ನ್ಸ್​ ಸಲ್ಲಿಸಿದ್ದಾರೆ ಎಂದು ತೆರಿಗೆ ಇಲಾಖೆಯು ಟ್ವೀಟ್​ನಲ್ಲಿ ತಿಳಿಸಿದೆ.

Published On - 9:54 am, Sun, 31 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?