AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR filing: ಐಟಿ ರಿಟರ್ನ್ಸ್​ ಸಲ್ಲಿಸಲು ಇಂದು ಕೊನೆಯ ದಿನ; ಕಾರ್ಯನಿರ್ವಹಿಸಲಿವೆ ಆಯಕಾರ್ ಸೇವಾ ಕೇಂದ್ರಗಳು

ಐಟಿ ರಿಟರ್ನ್ಸ್​ ಸಲ್ಲಿಕೆಗೆ ಕೊನೆಯ ದಿನವಾಗಿರುವ ಜುಲೈ 31ರ ಭಾನುವಾರ ಆದಾಯ ತೆರಿಗೆ ಸಹಾಯ ಕೇಂದ್ರಗಳಿಗೆ ರಜೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆಯು ಸ್ಪಷ್ಟಪಡಿಸಿದೆ.

ITR filing: ಐಟಿ ರಿಟರ್ನ್ಸ್​ ಸಲ್ಲಿಸಲು ಇಂದು ಕೊನೆಯ ದಿನ; ಕಾರ್ಯನಿರ್ವಹಿಸಲಿವೆ ಆಯಕಾರ್ ಸೇವಾ ಕೇಂದ್ರಗಳು
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 31, 2022 | 9:54 AM

Share

ಬೆಂಗಳೂರು: 2021-22ರ ಆರ್ಥಿಕ ಸಾಲಿನ ಆದಾಯ ತೆರಿಗೆ ರಿಟರ್ನ್ಸ್​ (Income Tax Returns) ಸಲ್ಲಿಸಲು ಇಂದು (ಜುಲೈ 31ರ ಭಾನುವಾರ) ಕೊನೆಯ ದಿನವಾಗಿದೆ. ಭಾನುವಾರವಾಗಿದ್ದರೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆದಾಯ ತೆರಿಗೆ ಇಲಾಖೆಯ ಆಯಕಾರ್ ಸೇವಾ ಕೇಂದ್ರಗಳು (Aaykar Seva Kendras – ASKs) ಅಥವಾ ಆದಾಯ ತೆರಿಗೆ ಸಹಾಯ ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದಾಯ ತೆರಿಗೆ ಸಹಾಯ ಕೇಂದ್ರಗಳಿಗೆ ರಜೆ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆಯು ಸ್ಪಷ್ಟಪಡಿಸಿದೆ.

‘ದೇಶಾದ್ಯಂತ ಇರುವ ಆದಾಯ ತೆರಿಗೆ ಸೇವಾ ಕೇಂದ್ರಗಳು ಭಾನುವಾರವೂ ಎಂದಿನಂತೆ ಕೆಲಸ ಮಾಡಲಿವೆ. ಆದಾಯ ತೆರಿಗೆ ಪಾವತಿಗೆ ಮುಂದಾಗುವ ನಾಗರಿಕರ ನೆರವಿಗಾಗಿ ಹೆಚ್ಚುವರಿ ಸ್ವೀಕೃತಿ ಕೇಂದ್ರಗಳು ಸಹ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ನೇರ ತೆರಿಗೆಗಳ ಮಂಡಳಿ (Central Board of Direct Taxes – CBDT) ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಜುಲೈ 31ರಂದು ಭಾನುವಾರವಾಗಿರುವ ಕಾರಣ ಬ್ಯಾಂಕ್​ಗಳು ಸಹ ಕಾರ್ಯನಿರ್ವಹಿಸುವುದಿಲ್ಲ. ಐಟಿ ರಿಟರ್ನ್ಸ್​ನ ಕೊನೆಯ ದಿನವಾಗಿರುವ ಕಾರಣ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ ಪೋರ್ಟಲ್​ನ ಟ್ರಾಫಿಕ್ (ಬಳಕೆದಾರರು) ಸಹ ಹೆಚ್ಚಾಗಿರುತ್ತದೆ.

ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಿಟರ್ನ್ಸ್​ ಸಲ್ಲಿಸಿದ್ದಾರೆ. ಈ ಪೈಕಿ ಶನಿವಾರ ಒಂದೇ ದಿನ 44 ಲಕ್ಷ ಮಂದಿ ರಿಟರ್ನ್ಸ್​ ಸಲ್ಲಿಸಿದ್ದಾರೆ ಎಂದು ತೆರಿಗೆ ಇಲಾಖೆಯು ಟ್ವೀಟ್​ನಲ್ಲಿ ತಿಳಿಸಿದೆ.

Published On - 9:54 am, Sun, 31 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!