AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊನ್ನಗಿರಿಯಲ್ಲ, ಸ್ವರ್ಣಗಿರಿ; ಆಂಧ್ರದಲ್ಲಿ ದೇಶದ ಮೊದಲ ಖಾಸಗಿ ಚಿನ್ನದ ಗಣಿ ಕಾರ್ಯಾರಂಭ; ಈ ಕುರಿತು ತಿಳಿಯಬೇಕಾದ ಪ್ರಮುಖ ಸಂಗತಿಗಳು

Few facts about Independent India's first private gold mining: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಜೊನ್ನಗಿರಿಯಲ್ಲಿ ಖಾಸಗಿ ಜಾಗದಲ್ಲಿ ಚಿನ್ನದ ಗಣಿಗಾರಿಕೆ ಆರಂಭವಾಗಿದೆ. ಇದು ಸ್ವತಂತ್ರ ಭಾರತದಲ್ಲಿ ಖಾಸಗಿ ಜಾಗದಲ್ಲಿ ನಡೆಯುತ್ತಿರುವ ಮೊದಲ ಗೋಲ್ಡ್ ಮೈನಿಂಗ್ ಆಗಿದೆ. ಜಿಯೋ ಮೈಸೂರ್ ಮತ್ತೆ ಡೆಕ್ಕನ್ ಗೋಲ್ಡ್ ಮೈನಿಂಗ್ ಕಂಪನಿಗಳು ಚಿನ್ನದ ಗಣಿಗಾರಿಕೆ ಮಾಡುತ್ತಿವೆ.

ಜೊನ್ನಗಿರಿಯಲ್ಲ, ಸ್ವರ್ಣಗಿರಿ; ಆಂಧ್ರದಲ್ಲಿ ದೇಶದ ಮೊದಲ ಖಾಸಗಿ ಚಿನ್ನದ ಗಣಿ ಕಾರ್ಯಾರಂಭ; ಈ ಕುರಿತು ತಿಳಿಯಬೇಕಾದ ಪ್ರಮುಖ ಸಂಗತಿಗಳು
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 25, 2026 | 2:51 PM

Share

ಮುಖ್ಯಾಂಶಗಳು

  • ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಜೊನ್ನಗಿರಿಯಲ್ಲಿ ಖಾಸಗಿ ಜಾಗದಲ್ಲಿ ಚಿನ್ನದ ಗಣಿಗಾರಿಕೆ ಆರಂಭವಾಗಿದೆ.
  • ಇದು ಸ್ವತಂತ್ರ ಭಾರತದಲ್ಲಿ ಖಾಸಗಿ ಜಾಗದಲ್ಲಿ ನಡೆಯುತ್ತಿರುವ ಮೊದಲ ಗೋಲ್ಡ್ ಮೈನಿಂಗ್ ಆಗಿದೆ.
  • ಜಿಯೋ ಮೈಸೂರ್ ಮತ್ತೆ ಡೆಕ್ಕನ್ ಗೋಲ್ಡ್ ಮೈನಿಂಗ್ ಕಂಪನಿಗಳು ಚಿನ್ನದ ಗಣಿಗಾರಿಕೆ ಮಾಡುತ್ತಿವೆ.

ನವದೆಹಲಿ, ಜೂನ್ 25: ಸ್ವತಂತ್ರ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ದೇಶದ ಮೊತ್ತಮೊದಲ ಖಾಸಗಿ ಚಿನ್ನದ ಗಣಿ (Private Gold Mine) ತನ್ನ ಕಮರ್ಷಿಯಲ್ ಆಪರೇಷನ್ಸ್ ಅನ್ನು ಆರಂಭಿಸಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಕರ್ನೂಲು ಜಿಲ್ಲೆಯ ಜೊನ್ನಗಿರಿಯಲ್ಲಿ (Jonnagiri) ಈ ಬಹುನಿರೀಕ್ಷಿತ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಭಾರತ ರಫ್ತಿಗಿಂತ ಬಹಳ ಹೆಚ್ಚು ಆಮದು ಮಾಡಿಕೊಳ್ಳುತ್ತದೆ. ಈ ಆಮದಿನಲ್ಲಿ ಚಿನ್ನ ಮತ್ತು ತೈಲವೇ ಅತಿಹೆಚ್ಚು. ಚಿನ್ನದ ಬಳಕೆ ಕಡಿಮೆ ಮಾಡಿ ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಕರೆಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಜೊನ್ನಗಿರಿಯಲ್ಲಿ ಖಾಸಗಿ ಗೋಲ್ಡ್ ಮೈನಿಂಗ್ ಆರಂಭವಾಗಿದೆ. ಇದರಿಂದ ಚಿನ್ನದ ಆಮದು ಸ್ವಲ್ಪ ಮಟ್ಟಿಗೆ ಕಡಿಮೆಗೊಳ್ಳುವ ನಿರೀಕ್ಷೆ ಇದೆ. ಈ ಖಾಸಗಿ ಗಣಿಯ ಕುರಿತಾದ ಪ್ರಮುಖ ವಿಚಾರಗಳು:

ಸ್ವತಂತ್ರ ಭಾರತದ ಮೊದಲ ಖಾಸಗಿ ಗಣಿ ಮತ್ತು ಐತಿಹಾಸಿಕ ಹಿನ್ನೆಲೆ

ಸ್ವತಂತ್ರ ಭಾರತದಲ್ಲಿ ಇದುವರೆಗೆ ಕರ್ನಾಟಕದ ಕೋಲಾರ (KGF) ಮತ್ತು ರಾಯಚೂರಿನ ಹಟ್ಟಿ (HGML) ಚಿನ್ನದ ಗಣಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಇವೆರಡೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಯಾದ ಸರ್ಕಾರಿ ಸ್ವಾಮ್ಯದ ಗಣಿಗಳಾಗಿವೆ (ಕೋಲಾರ ಗಣಿ ಸದ್ಯ ಮುಚ್ಚಲ್ಪಟ್ಟಿದೆ). ಸ್ವಾತಂತ್ರ್ಯದ ನಂತರ ದೇಶದಲ್ಲಿ ಆರಂಭವಾಗಿರುವ ಮೊದಲ ವಾಣಿಜ್ಯ ಮಟ್ಟದ ಖಾಸಗಿ ಚಿನ್ನದ ಗಣಿ ಯೋಜನೆ ಇದಾಗಿದೆ. ವಿಶೇಷವೆಂದರೆ, ಈ ಜೊನ್ನಗಿರಿ ಪ್ರದೇಶವು ಮೌರ್ಯ ಸಾಮ್ರಾಜ್ಯದ ಸಾಮ್ರಾಟ ಅಶೋಕನ ಕಾಲದಲ್ಲೂ (ಕ್ರಿ.ಪೂ. 3ನೇ ಶತಮಾನ) ಚಿನ್ನದ ಉತ್ಪಾದನಾ ಕೇಂದ್ರವಾಗಿ ಹೆಸರುವಾಸಿಯಾಗಿತ್ತು.

ಜೊನ್ನಗಿರಿ ಇನ್ಮುಂದೆ ‘ಸ್ವರ್ಣಗಿರಿ’!

ಈ ಗಣಿಗಾರಿಕೆ ಯೋಜನೆಯ ಐತಿಹಾಸಿಕ ಮತ್ತು ಭವಿಷ್ಯದ ಮಹತ್ವವನ್ನು ಪರಿಗಣಿಸಿ, ಆಂಧ್ರಪ್ರದೇಶ ಸರ್ಕಾರವು ‘ಜೊನ್ನಗಿರಿ’ ಗ್ರಾಮದ ಹೆಸರನ್ನು ಅಧಿಕೃತವಾಗಿ ‘ಸ್ವರ್ಣಗಿರಿ’ (Swarnagiri) ಎಂದು ಮರುನಾಮಕರಣ ಮಾಡಿದೆ. ಮೌರ್ಯರ ಕಾಲದ ಶಾಸನಗಳಲ್ಲೂ ಈ ಪ್ರದೇಶವನ್ನು ‘ಸುವರ್ಣಗಿರಿ’ ಎಂದೇ ಕರೆಯಲಾಗುತ್ತಿತ್ತು. ಇದರೊಂದಿಗೆ ಇಲ್ಲಿ ಸ್ಥಳೀಯವಾಗಿಯೇ ಆಭರಣ ತಯಾರಿಕೆಯನ್ನು ಉತ್ತೇಜಿಸಲು ಒಂದು ಬೃಹತ್ ‘ಚಿನ್ನದ ಆಭರಣ ತಯಾರಿಕಾ ಪಾರ್ಕ್’ (Jewellery Park) ಸ್ಥಾಪಿಸುವುದಾಗಿಯೂ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಟ್ರಾನ್ಸಾಕ್ಷನ್ಸ್​ನಲ್ಲಿ ಸಣ್ಣ ಮೊತ್ತದ ವಂಚನೆ ಸಿಗಲಿದೆ ಪರಿಹಾರ; ಆರ್​ಬಿಐನಿಂದ ಹೊಸ ನಿಯಮಗಳು ಜಾರಿಗೆ

ಯೋಜನೆಗೆ ಹೂಡಿಕೆ ಎಷ್ಟು? ಯಾರು ನಿರ್ವಹಿಸುತ್ತಿದ್ದಾರೆ?

ಈ ಬೃಹತ್ ಸಮಗ್ರ ಗ್ರೀನ್‌ಫೀಲ್ಡ್ ಯೋಜನೆಯನ್ನು ಸುಮಾರು ₹405 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದನ್ನು ‘ಜಿಯೋಮೈಸೂರು ಸರ್ವಿಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ (Geomysore Services) ಮತ್ತು ‘ಡೆಕ್ಕನ್ ಗೋಲ್ಡ್ ಮೈನ್ಸ್ ಲಿಮಿಟೆಡ್’ ಸಂಸ್ಥೆಗಳು ಜಂಟಿಯಾಗಿ ಮುನ್ನಡೆಸುತ್ತಿದ್ದು, ಲಾಯ್ಡ್ಸ್ ಮೆಟಲ್ಸ್ ಮತ್ತು ತ್ರಿವೇಣಿ ಅರ್ಥ್‌ಮೂವರ್ಸ್ ಸಂಸ್ಥೆಗಳು ಇದಕ್ಕೆ ಬೆಂಬಲ ನೀಡುತ್ತಿವೆ. ಸುಮಾರು 1,500 ಎಕರೆ ಪ್ರದೇಶವನ್ನು ಈ ಯೋಜನೆಗೆ ಹಂಚಿಕೆ ಮಾಡಲಾಗಿದ್ದು, ಸದ್ಯ ಮೊದಲ ಹಂತದಲ್ಲಿ 600 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಆರಂಭವಾಗಿದೆ.

ಚಿನ್ನದ ಉತ್ಪಾದನೆಯ ಗುರಿ ಮತ್ತು ಸಾಮರ್ಥ್ಯ

ಪ್ರಸ್ತುತ ಇಲ್ಲಿ ಸುಮಾರು 13.1 ಟನ್ ಚಿನ್ನದ ಅದಿರು ನಿಕ್ಷೇಪ ಇರುವುದನ್ನು ಪ್ರಮಾಣೀಕರಿಸಲಾಗಿದೆ. ಮೊದಲ ವರ್ಷದಲ್ಲಿ ಸುಮಾರು 400 ಕೆಜಿ ಚಿನ್ನವನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಮುಂದಿನ ಹಂತದಲ್ಲಿ ವಾರ್ಷಿಕ ಉತ್ಪಾದನೆಯನ್ನು 900 ಕೆಜಿಗೆ ಏರಿಸಲಾಗುವುದು.

ಯೋಜನೆಯ ಎರಡನೇ ಸಂಸ್ಕರಣಾ ಘಟಕ ಪೂರ್ಣಗೊಂಡ ನಂತರ, ವಾರ್ಷಿಕವಾಗಿ 2 ಟನ್ (2,000 ಕೆಜಿ) ಚಿನ್ನ ಉತ್ಪಾದಿಸುವ ಗುರಿ ಹೊಂದಲಾಗಿದೆ. ಈ ಗಣಿಯ ಒಟ್ಟು ಅವಧಿಯನ್ನು ಸದ್ಯಕ್ಕೆ 15 ವರ್ಷಗಳೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಅಮೆರಿಕದಿಂದ ತವರಿಗೆ ಬಂದ ಭಾರತ ಮೂಲದ ಎಐ ಸಂಶೋಧಕ; ಭಾರತದಲ್ಲಿ ಮಹತ್ವದ ಎಐ ಪ್ರಾಜೆಕ್ಟ್​ನಲ್ಲಿ ಭಾಗಿ?

ಸರ್ಕಾರಕ್ಕೆ ಆದಾಯ ಮತ್ತು ಉದ್ಯೋಗಾವಕಾಶ

ಈ ಯೋಜನೆಯಿಂದ ಆಂಧ್ರಪ್ರದೇಶ ಸರ್ಕಾರಕ್ಕೆ ಉತ್ಪಾದನೆಯಾಗುವ ಚಿನ್ನದ ಮೌಲ್ಯದ ಮೇಲೆ ಶೇ. 4 ರಷ್ಟು ರಾಯಲ್ಟಿ ಸಿಗಲಿದೆ. 400 ಕೆಜಿ ಉತ್ಪಾದನೆಯಾದರೆ ಸುಮಾರು ₹57 ಕೋಟಿ ಹಾಗೂ 900 ಕೆಜಿ ಉತ್ಪಾದನೆಯಾದಾಗ ₹144 ಕೋಟಿ ವಾರ್ಷಿಕ ಆದಾಯ ಸರ್ಕಾರಕ್ಕೆ ಹರಿದುಬರಲಿದೆ. ಜೊತೆಗೆ ಈ ಯೋಜನೆಯಿಂದ ಸುಮಾರು 700 ಕ್ಕೂ ಹೆಚ್ಚು ಜನರಿಗೆ ನೇರ ಉದ್ಯೋಗ ಸಿಗಲಿದ್ದು, ಅದರಲ್ಲಿ ಶೇ. 80 ರಷ್ಟು ಉದ್ಯೋಗಾವಕಾಶಗಳನ್ನು ಸ್ಥಳೀಯ ಸಮುದಾಯದ ಯುವಕ ಮತ್ತು ಮಹಿಳೆಯರಿಗೇ ನೀಡಲಾಗುತ್ತಿದೆ.

ಭಾರತದಿಂದ ವರ್ಷಕ್ಕೆ 700ರಿಂದ 1,000 ಟನ್ ಚಿನ್ನ ಆಮದು

ಭಾರತವು ಪ್ರತಿವರ್ಷ ಸುಮಾರು 700 ರಿಂದ 1,000 ಟನ್ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಕಚ್ಚಾ ತೈಲದ ನಂತರ ಭಾರತ ಅತಿ ಹೆಚ್ಚು ಆಮದು ಮಾಡಿಕೊಳ್ಳುವುದು ಚಿನ್ನವನ್ನೇ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶಿಯವಾಗಿ ಖಾಸಗಿ ಸಹಭಾಗಿತ್ವದಲ್ಲಿ ಇಂತಹ ಗಣಿಗಳು ಆರಂಭವಾಗುತ್ತಿರುವುದು ಭಾರತದ ಆಮದು ಅವಲಂಬನೆಯನ್ನು ತಗ್ಗಿಸಲು ಮತ್ತು ‘ಆತ್ಮನಿರ್ಭರ ಭಾರತ’ದ ಕನಸಿಗೆ ದೊಡ್ಡ ಬಲ ತುಂಬಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Thu, 25 June 26

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ