AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ

ಭಾರತದ ಕೈಗಾರಿಕೆ ಉತ್ಪಾದನೆ ಸೂಚ್ಯಂಕ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ ಆಗಿದೆ. ಇದರಲ್ಲಿ ಯಾವ ಕ್ಷೇತ್ರದ ಪಾಲು ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 10, 2021 | 11:26 PM

Share

ಭಾರತದ ಕೈಗಾರಿಕಾ ಉತ್ಪಾದನೆಯು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, 2021ರ ಅಕ್ಟೋಬರ್‌ ತಿಂಗಳಿನಲ್ಲಿ ಶೇ 3.2ರಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO) ಕೈಗಾರಿಕೆ ಉತ್ಪಾದನೆ (IIP) ದತ್ತಾಂಶದಂತೆ, 2021ರ ಅಕ್ಟೋಬರ್​ನಲ್ಲಿ ಉತ್ಪಾದನಾ ವಲಯದ ಉತ್ಪಾದನೆಯು ಶೇ 2ರಷ್ಟು ಏರಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಗಣಿಗಾರಿಕೆ ಉತ್ಪಾದನೆಯು ಶೇ 11.4ರಷ್ಟು ಏರಿಕೆ ಕಂಡಿತು ಮತ್ತು ವಿದ್ಯುತ್ ಉತ್ಪಾದನೆಯು ಶೇ 3.1ರಷ್ಟು ಹೆಚ್ಚಾಗಿದೆ. 2020ರ ಅಕ್ಟೋಬರ್​ನಲ್ಲಿ IIP ಶೇ 4.5ರಷ್ಟು ಬೆಳೆದಿತ್ತು.

2021ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಐಐಪಿ ಶೇ 20ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 17.3ರಷ್ಟು ಕುಗ್ಗಿತ್ತು. ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೈಗಾರಿಕಾ ಉತ್ಪಾದನೆಯು ಕಳೆದ ವರ್ಷ ಮಾರ್ಚ್‌ನಿಂದ ಶೇ 18.7ರಷ್ಟು ಕುಸಿತ ಕಂಡಿದೆ.

ಕೊವಿಡ್​- 19 ಸೋಂಕು ಹರಡುವುದನ್ನು ತಡೆಯುವ ಉದ್ದೇಶ ಇಟ್ಟುಕೊಂಡು ದೇಶದಾದ್ಯಂತ ಲಾಕ್​ಡೌನ್ ವಿಧಿಸಲಾಯಿತು. ಆ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಆಗುವಂತಾಯಿತು. ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ 2020ರ ಏಪ್ರಿಲ್​ನಲ್ಲಿ ಶೇ 57.3ರಷ್ಟು ಕಡಿಮೆಯಾಗಿದೆ.

ಇದನ್ನೂ ಓದಿ: GDP: ಜುಲೈನಿಂದ ಸೆಪ್ಟೆಂಬರ್ ಎರಡನೇ ತ್ರೈಮಾಸಿಕ ಜಿಡಿಪಿ ಶೇ 8.4ರಷ್ಟು ಬೆಳವಣಿಗೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ