AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Boosting Rupee: ವಹಿವಾಟಿನಲ್ಲಿ ಸ್ಥಳೀಯ ಕರೆನ್ಸಿ ಬಳಕೆಗೆ ಉತ್ತೇಜಿಸಲು ಭಾರತ, ಇಂಡೋನೇಷ್ಯಾ ಸೆಂಟ್ರಲ್ ಬ್ಯಾಂಕುಗಳ ಒಪ್ಪಂದ

Cross-border transactions in Rupee and Rupiah: ಕ್ರಾಸ್ ಬಾರ್ಡರ್ ಟ್ರಾನ್ಸಾಕ್ಷನ್ ಅಥವಾ ಅಂತರದೇಶೀಯ ವ್ಯಾಪಾರ ವಹಿವಾಟಿನಲ್ಲಿ ಸ್ಥಳೀಯ ಕರೆನ್ಸಿ ಬಳಕೆಯನ್ನು ಉತ್ತೇಜಿಸಲು ಆರ್​ಬಿಐ ಮತ್ತು ಇಂಡೋನೇಷ್ಯಾ ಬ್ಯಾಂಕ್ ಮಧ್ಯೆ ಎಂಒಯು ಆಗಿದೆ. ಇಂಡೋನೇಷ್ಯಾದಿಂದ ವ್ಯಾಪಾರಿ ತನ್ನ ವಸ್ತುವನ್ನು ಭಾರತಕ್ಕೆ ರಫ್ತು ಮಾಡಲು ತನ್ನ ಕರೆನ್ಸಿಯಲ್ಲಿ ಇನ್ವಾಯ್ಸ್ ನೀಡಬಹುದು. ಭಾರತದಲ್ಲಿರುವ ಆಮದುದಾರರು ರುಪಾಯಿಯಲ್ಲಿ ಹಣ ಪಾವತಿ ಮಾಡಬಹುದು. ಇದರಿಂದ ವಹಿವಾಟು ವೆಚ್ಚ ಕಡಿಮೆ ಆಗುತ್ತದೆ, ಜೊತೆಗೆ ಎರಡೂ ಕರೆನ್ಸಿಗಳು ಪ್ರಬಲಗೊಳ್ಳುತ್ತವೆ.

Boosting Rupee: ವಹಿವಾಟಿನಲ್ಲಿ ಸ್ಥಳೀಯ ಕರೆನ್ಸಿ ಬಳಕೆಗೆ ಉತ್ತೇಜಿಸಲು ಭಾರತ, ಇಂಡೋನೇಷ್ಯಾ ಸೆಂಟ್ರಲ್ ಬ್ಯಾಂಕುಗಳ ಒಪ್ಪಂದ
ಭಾರತೀಯ ರುಪಾಯಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 07, 2024 | 4:34 PM

Share

ನವದೆಹಲಿ, ಮಾರ್ಚ್ 7: ಅಂತರದೇಶೀಯ ವ್ಯಾಪಾರ ವಹಿವಾಟಿನಲ್ಲಿ ಸ್ಥಳೀಯ ಕರೆನ್ಸಿಗಳ ಬಳಕೆಗೆ ಉತ್ತೇಜಿಸಲು ಭಾರತ ಮತ್ತು ಇಂಡೋನೇಷ್ಯಾದ ಸೆಂಟ್ರಲ್ ಬ್ಯಾಂಕುಗಳ ಮಧ್ಯೆ ಒಪ್ಪಂದವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಬ್ಯಾಂಕ್ ಇಂಡೋನೇಷ್ಯಾದ ಗವರ್ನರ್ ಪೆರಿ ವಾರ್ಜಿಯೋ (Perry Warjio) ಅವರು ಎಂಒಯುಗೆ ಸಹಿ ಹಾಕಿದ್ದಾರೆ. ಅಂದರೆ ಭಾರತದಲ್ಲಿರುವ ಸಂಸ್ಥೆಗಳು ಮತ್ತು ಇಂಡೋನೇಷ್ಯಾದಲ್ಲಿರುವ ಸಂಸ್ಥೆಗಳ ಮಧ್ಯೆ ವ್ಯಾಪಾರ ವಹಿವಾಟು ನಡೆದಾಗ ಭಾರತೀಯ ರುಪಾಯಿ (ಐಎನ್​ಆರ್) ಮತ್ತು ಇಂಡೋನೇಷ್ಯಾದ ರುಪಯ್ಯಾ (ಐಡಿಆರ್- Rupiah) ಕರೆನ್ಸಿಯನ್ನು ಬಳಕೆ ಮಾಡಲು ಉತ್ತೇಜಿಸಲು ಈ ಒಪ್ಪಂದ ಆಗಿದೆ.

ಎರಡೂ ದೇಶಗಳ ರಫ್ತುದಾರರು ತಮ್ಮ ಸ್ಥಳೀಯ ಕರೆನ್ಸಿಯಲ್ಲೇ ಇನ್ವಾಯ್ಸ್ ಕೊಡಬಹುದು. ಮತ್ತು ಆಮದುದಾರರು ಕೂಡ ತಮ್ಮ ಸ್ಥಳೀಯ ಕರೆನ್ಸಿಯಲ್ಲೇ ಹಣ ಪಾವತಿ ಮಾಡಬಹುದು. ಉದಾಹರಣೆಗೆ, ಇಂಡೋನೇಷ್ಯಾದ ಸಂಸ್ಥೆ ಭಾರತಕ್ಕೆ ಸರಕು ರಫ್ತು ಮಾಡಲು ತಮ್ಮ ಕರೆನ್ಸಿಯಲ್ಲಿ ಇನ್ವಾಯ್ಸ್ ಕಳುಹಿಸುತ್ತದೆ. ಭಾರತದಲ್ಲಿರುವ ಸಂಸ್ಥೆ ರುಪಾಯಿ ಕರೆನ್ಸಿಯಲ್ಲಿ ಹಣ ಪಾವತಿ ಮಾಡಬಹುದು. ಈ ರೀತಿ ಆದಾಗ ಎರಡೂ ದೇಶಗಳ ಕರೆನ್ಸಿ ಬಲಗೊಳ್ಳುತ್ತವೆ. ಡಾಲರ್ ಮೂಲಕ ಹೋಗುವುದರ ಬದಲು ನೇರವಾಗಿ ವಹಿವಾಟು ನಡೆಸುವುದರಿಂದ ಬೆಲೆ ಕೂಡ ಕಡಿಮೆ ಆಗುತ್ತದೆ.

ಇದನ್ನೂ ಓದಿ: ಇ200 ಪ್ಲೇನ್; ಈ ವರ್ಷದೊಳಗೆ ಭಾರತದಲ್ಲಿ ನೋಡುತ್ತೀರಿ ಫ್ಲೈಯಿಂಗ್ ಟ್ಯಾಕ್ಸಿ; ರೈಡಿಂಗ್ ಕೂಡ ದುಬಾರಿ ಇಲ್ಲ

ಭಾರತ ಬೇರೆ ಬೇರೆ ದೇಶಗಳ ಜೊತೆ ಈ ರೀತಿಯ ದ್ವಿಪಕ್ಷೀಯ ಸಹಕಾರ ಒಪ್ಪಂದಗಳನ್ನು ಮಾಡಿಕೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತಿದೆ. 2023 ಜುಲೈ ತಿಂಗಳಲ್ಲಿ ಯುಎಐ ಮತ್ತು ಭಾರತದ ಸೆಂಟ್ರಲ್ ಬ್ಯಾಂಕುಗಳ ಮಧ್ಯೆ ಎರಡು ಎಂಒಯುಗಳಾಗಿದ್ದವು.

ವಿದೇಶಗಳಲ್ಲಿರುವ ಭಾರತೀಯರು ತಮ್ಮ ತವರಿನ ಜನರಿಗೆ ಹಣ ಕಳುಹಿಸಲು, ಅಥವಾ ಇಲ್ಲಿಂದ ವಿದೇಶಗಳಿಗೆ ಜನರು ಹಣ ಕಳುಹಿಸಲು ಅನುವಾಗುವ ನಿಟ್ಟಿನಲ್ಲಿ ಯುಪಿಐ ಅನ್ನು ವಿವಿಧ ದೇಶಗಳಿಗೆ ವಿಸ್ತರಿಸುವ ಪ್ರಯತ್ನವಾಗುತ್ತಿದೆ. ಸಿಂಗಾಪುರ, ಶ್ರೀಲಂಕಾ, ಯುಎಇ ಮೊದಲಾದ ದೇಶಗಳ ಹಣ ಪಾವತಿ ವ್ಯವಸ್ಥೆ ಜೊತೆ ಯುಪಿಐ ಅನ್ನು ಜೋಡಿಸಲಾಗಿದೆ. ಇದರಿಂದ ಕಡಿಮೆ ವೆಚ್ಚದಲ್ಲಿ ಹಣ ವರ್ಗಾವಣೆ ಸಾಧ್ಯವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ