AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಹಣಕಾಸು ಸಚಿವ ಸ್ಮಾಟ್ರಿಚ್ ಭಾರತಕ್ಕೆ ಭೇಟಿ; ಭಾರತ-ಇಸ್ರೇಲ್ ನಡುವೆ ಹೂಡಿಕೆ ಒಪ್ಪಂದ

India and Israel ink bilateral investment treaty: ಭಾರತ ಹಾಗೂ ಇಸ್ರೇಲ್ ಮಧ್ಯೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದ ಏರ್ಪಟ್ಟಿದೆ. ಎರಡೂ ದೇಶಗಳ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಬೆಜಾಲೆಲ್ ಸ್ಮಾಟ್​ರಿಚ್ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎರಡೂ ದೇಶಗಳ ನಡುವೆ ಹೂಡಿಕೆದಾರರ ಹೂಡಿಕೆಗಳನ್ನು ರಕ್ಷಿಸುವುದು ಮತ್ತು ಉತ್ತೇಜಿಸುವುದು ಈ ಒಪ್ಪಂದದ ಆಶಯ.

ಇಸ್ರೇಲ್ ಹಣಕಾಸು ಸಚಿವ ಸ್ಮಾಟ್ರಿಚ್ ಭಾರತಕ್ಕೆ ಭೇಟಿ; ಭಾರತ-ಇಸ್ರೇಲ್ ನಡುವೆ ಹೂಡಿಕೆ ಒಪ್ಪಂದ
ಭಾರತ ಇಸ್ರೇಲ್ ನಡುವೆ ಒಪ್ಪಂದ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2025 | 3:59 PM

Share

ನವದೆಹಲಿ, ಸೆಪ್ಟೆಂಬರ್ 8: ಭಾರತ ಸರ್ಕಾರ ಮತ್ತು ಇಸ್ರೇಲ್ ಸರ್ಕಾರದ ಮಧ್ಯೆ ಇಂದು ಸೋಮವಾರ ದ್ವಿಪಕ್ಷೀಯ ಹೂಡಿಕೆ ಒಪ್ಪಂದ (Bilateral Investment Treaty) ಏರ್ಪಟ್ಟಿದೆ. ಇದರೊಂದಿಗೆ ಎರಡೂ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಭಾರತ ಮತ್ತು ಇಸ್ರೇಲ್​ನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಬೆಜಾಲೆಲ್ ಸ್ಮಾಟ್ರಿಚ್ (Bezalel Smotrich) ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ದ್ವಿಪಕ್ಷೀಯ ಹೂಡಿಕೆ ಒಪ್ಪಂದವು ಎರಡು ದೇಶಗಳ ಮಧ್ಯೆ ಪರಸ್ಪರರ ಹೂಡಿಕೆ ರಕ್ಷಣೆಗೆ ಬದ್ಧತೆ ತೋರುವ ಒಂದು ಸಹಕಾರ ವ್ಯವಸ್ಥೆಯಾಗಿದೆ. ಅಂದರೆ, ಭಾರತದಲ್ಲಿ ಇಸ್ರೇಲಿನ ಖಾಸಗಿ ಹೂಡಿಕೆದಾರರು ಮಾಡುವ ಹೂಡಿಕೆಗಳನ್ನು ಭಾರತ ರಕ್ಷಿಸಲು ಬದ್ಧವಾಗಿರುತ್ತದೆ. ಹಾಗೆಯೇ, ಇಸ್ರೇಲ್​ನಲ್ಲಿ ಭಾರತೀಯರು ಮಾಡುವ ಹೂಡಿಕೆಗಳನ್ನು ಆ ದೇಶವು ರಕ್ಷಣೆ ಮಾಡುತ್ತದೆ. ಇದು ಭಾರತ ಹಾಗೂ ಇಸ್ರೇಲ್ ನಡುವಿನ ದ್ವಿಪಕ್ಷೀಯ ಒಪ್ಪಂದದಲ್ಲಿ ಮಾಡಲಾಗಿರುವ ವ್ಯವಸ್ಥೆ.

ಇದನ್ನೂ ಓದಿ: ದೇಶಭ್ರಷ್ಟ ವಜ್ರೋದ್ಯಮಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಿ, ಈ ಎಲ್ಲಾ ಸೌಲಭ್ಯ ಕೊಡ್ತೀವಿ ಎಂದು ಬೆಲ್ಜಿಯಂಗೆ ಭರವಸೆ ನೀಡಿದ ಭಾರತ

ಎರಡೂ ದೇಶಗಳ ನಡುವೆ ಹೂಡಿಕೆಗಳಿಗೆ ಉತ್ತೇಜಿಸಲು ಮತ್ತು ರಕ್ಷಣೆ ನೀಡಲು ಅಗತ್ಯವಾದ ನಿಯಮ ಚೌಕಟ್ಟುಗಳನ್ನು ಈ ಒಪ್ಪಂದದಲ್ಲಿ ಮಾಡಲಾಗಿದೆ.

ಭಾರತದ ಹೊಸ ಮಾದರಿಯ ಒಪ್ಪಂದ ನಿಯಮಾವಳಿ ಅಡಿಯಲ್ಲಿ ಇಸ್ರೇಲ್ ಸಹಿ ಹಾಕಿದೆ. ಕುತೂಹಲ ಎಂದರೆ ಒಇಸಿಡಿ (ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಘಟನೆ) ಸದಸ್ಯ ರಾಷ್ಟ್ರವೊಂದು ಭಾರತದೊಂದಿಗೆ ಈ ಚೌಕಟ್ಟಿನಲ್ಲಿ ಸಹಿ ಹಾಕಿದ್ದು ಇದೇ ಮೊದಲು.

ಇಸ್ರೇಲ್ ಹಣಕಾಸು ಸಚಿವ ಬೆಜಾಲೆಲ್ ಸ್ಮಾಟ್​ರಿಚ್ ಅವರು ಇಸ್ರೇಲ್​ನ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿ ಭಾರತಕ್ಕೆ ಭೇಟಿ ಕೊಟ್ಟಿದ್ದಾರೆ. ಸೆ. 8ರಿಂದ 10ರವರೆಗೂ ಅವರು ಭಾರತದಲ್ಲಿ ಇರಲಿದ್ದಾರೆ. ಇವತ್ತು ನಿರ್ಮಲಾ ಸೀತಾರಾಮನ್ ಜೊತೆ ಸೇರಿ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಅಂಕಿತ ಹಾಕಿದ್ದಾರೆ.

ಇದನ್ನೂ ಓದಿ: ಭಾರತದ 15 ವರ್ಷದ ಭರ್ಜರಿ ಡಿಫೆನ್ಸ್ ಪ್ಲಾನ್; ಯುದ್ಧವೆಂದರೆ ಬಾಹ್ಯಾಕಾಶಕ್ಕೂ ಸೈ, ಎಐಗೂ ಸೈ

ವಾಣಿಜ್ಯ ಸಚಿವ ಪೀಯೂಶ್ ಗೋಯಲ್, ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನೂ ಸ್ಮಾಟ್​ರಿಚ್ ಭೇಟಿ ಮಾಡಲಿದ್ದಾರೆ. ಗುಜರಾತ್​ನ ಗಾಂಧಿನಗರದಲ್ಲಿರುವ ಗಿಫ್ಟ್ ಸಿಟಿ ಹಾಗೂ ಮುಂಬೈ ನಗರಕ್ಕೂ ಬಾಟ್​ರಿಚ್ ಭೇಟಿ ಮಾಡುವ ಯೋಜನೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ