AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ವಲಯಗಳಲ್ಲಿ ಸಹಕಾರ ಹೆಚ್ಚಿಸಲು ಭಾರತ ಮತ್ತು ರಷ್ಯಾ ಮಧ್ಯೆ ಒಡಂಬಡಿಕೆ

India and Russia sign MoU: ಭಾರತ ಮತ್ತು ರಷ್ಯಾ ದೇಶಗಳ ನಡುವೆ ವಿವಿಧ ಸೆಕ್ಟರ್​ಗಳಲ್ಲಿ ಸಹಕಾರ ಗಟ್ಟಿಗೊಳಿಸಲು ಪ್ರೋಟೋಕಾಲ್​ಗೆ ಸಹಿ ಹಾಕಲಾಗಿದೆ. ತಯಾರಿಕೆ, ಮಿಲಿಟರಿ ಇತ್ಯಾದಿ ಕ್ಷೇತ್ರಗಳಲ್ಲಿ ತಂತ್ರಜ್ಞಾನ ರವಾನೆ, ಇನ್​ಫ್ರಾಸ್ಟ್ರಕ್ಚರ್ ಸ್ಥಾಪನೆ ಮೊದಲಾದವನ್ನು ಚರ್ಚಿಸಲಾಗುತ್ತಿದೆ. ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಟ್ಯಾರಿಫ್ ಹೆಚ್ಚಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

ವಿವಿಧ ವಲಯಗಳಲ್ಲಿ ಸಹಕಾರ ಹೆಚ್ಚಿಸಲು ಭಾರತ ಮತ್ತು ರಷ್ಯಾ ಮಧ್ಯೆ ಒಡಂಬಡಿಕೆ
ವ್ಯಾಪಾರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 07, 2025 | 3:57 PM

Share

ನವದೆಹಲಿ, ಆಗಸ್ಟ್ 7: ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ (US tariffs) ಬೆದರಿಕೆಗಳ ಮಧ್ಯೆ ಭಾರತ ಮತ್ತು ರಷ್ಯಾ ದೇಶಗಳು ಪ್ರಮುಖ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ಅಲೂಮಿನಿಯಂ, ರಸಗೊಬ್ಬರ, ರೈಲ್ವೇಸ್ ಮತ್ತು ಮೈನಿಂಗ್ ಟೆಕ್ನಾಲಜಿ ಕ್ಷೇತ್ರದಲ್ಲಿ ಎರಡೂ ದೇಶಗಳ ನಡುವಿನ ಸಹಕಾರವನ್ನು ಹೆಚ್ಚಿಸಲು ಪ್ರೋಟೋಕಾಲ್​ಗೆ ಸಹಿ ಹಾಕಲಾಗಿದೆ. ಭಾರತ ರಷ್ಯಾ ಆಧುನೀಕರಣ ಮತ್ತು ಔದ್ಯಮಿಕ ಸಹಕಾರದ ಮೇಲಿನ ಕಾರ್ಯಕಾರಿ ಗುಂಪಿನ 11ನೇ ಅಧಿವೇಶನದ ವೇಳೆ ಈ ಬೆಳವಣಿಗೆ ನಡೆದಿದೆ.

ವ್ಯಾಪಾರ, ಆರ್ಥಿಕ, ವೈಜ್ಞಾನಿಕ, ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಸಹಕಾರದ ಭಾರತ-ರಷ್ಯಾ ಅಂತರಸರ್ಕಾರ ಆಯೋಗದ ಚೌಕಟ್ಟಿನ ಅಡಿಯಲ್ಲಿ ದೆಹಲಿಯ ವಾಣಿಜ್ಯ ಭವನದಲ್ಲಿ ಬುಧವಾರ (ಆ. 6) ಸಭೆ ನಡೆಯಿತು. 10ನೇ ಅಧಿವೇಶನದ ಬಳಿಕ ಎರಡೂ ದೇಶಗಳ ನಡವಿನ ಸಂಬಂಧದಲ್ಲಿ ಎಷ್ಟು ವೃದ್ಧಿಯಾಗಿದೆ ಎಂಬುದನ್ನು ಈ ಸಭೆಯಲ್ಲಿ ಅವಲೋಕಿಸಲಾಯಿತು.

ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಹಸಿಸುಳ್ಳುಗಳು; ಅಮೆರಿಕಕ್ಕೆ ಭಾರತ ದೊಡ್ಡ ಸುಂಕ ವಿಧಿಸುತ್ತಿದೆಯಾ? ಇಲ್ಲಿದೆ ಸತ್ಯಾಂಶ

ಡಿಪಿಐಐಟಿ ಇಲಾಖೆಯ ಕಾರ್ಯದರ್ಶಿಯಾದ ಅಮರ್​ದೀಪ್ ಸಿಂಗ್ ಭಾಟಿಯಾ, ರಷ್ಯನ್ ಉಪ ಸಚಿವ ಅಲೆಕ್ಸೇ ಗ್ರುಜ್​ಡೆವ್ ಅವರು ಈ 11ನೇ ಸೆಷನ್​ನ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನ ಇತ್ಯಾದಿ ಕ್ಷೇತ್ರಗಳಿಗೆ ಹೆಚ್ಚು ಗಮನ ಕೊಡಲಾಗಿದೆ.

ಸಣ್ಣ ವಿಮಾನ ಪಿಸ್ಟನ್ ಎಂಜಿನ್​ಗಳ ತಯಾರಿಕೆ, ಕಾರ್ಬನ್ ಫೈಬರ್ ಟೆಕ್ನಾಲಜಿಯ ಜಂಟಿ ಅಭಿವೃದ್ಧಿ, ಅಡಿಟಿವ್ ಮ್ಯಾನುಫ್ಯಾಕ್ಚರಿಂಗ್, 3ಡಿ ಪ್ರಿಂಟಿಂಗ್ ಇತ್ಯಾದಿ ಅವಕಾಶಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ರೇರ್ ಅರ್ತ್ ಮತ್ತು ಪ್ರಮುಖ ಖನಿಜಗಳನ್ನು ಹೊರತೆಗೆಯುವುದು, ಅಂಡರ್​ಗ್ರೌಂಡ್ ಕೋಲ್ ಕ್ಯಾಸಿಫಿಕೇಶನ್, ಆಧುನಿಕ ಕೈಗಾರಿಕಾ ಇನ್​ಫ್ರಾಸ್ಟ್ರಕ್ಚರ್ ಸ್ಥಾಪಿಸುವುದು ಇತ್ಯಾದಿ ಸಾಧ್ಯತೆಯನ್ನು ಅವಲೋಕಿಸಲಾಗಿದೆ.

ಅಲೂಮಿನಿಯಂ, ರಸಗೊಬ್ಬರ, ರೈಲ್ವೆ ಸಾರಿಗೆಯಲ್ಲಿ ಸಹಕಾರ ಹೆಚ್ಚಿಸುವುದು; ಮೈನಿಂಗ್ ಸೆಕ್ಟರ್ ಉಪಕರಣದಲ್ಲಿ ಕೆಪಾಸಿಟಿ ನಿರ್ಮಾಣ, ಟೆಕ್ನಾಲಜಿ ರವಾನೆ, ಅನ್ವೇಷಣೆ ಹಾಗೂ ಕೈಗಾರಿಕೆ ಮತ್ತು ಗೃಹ ತ್ಯಾಜ್ಯ ನಿರ್ವಹಣೆ ಸಂಬಂಧ ಎರಡೂ ದೇಶಗಳ ನಡುವಿನ ಸಹಕಾರ ಹೆಚ್ಚಿಸುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಮಿಲಿಟರಿ ಸಂಬಂಧ ಮತ್ತಷ್ಟು ಗಟ್ಟಿ

ಹಾಗೆಯೇ, ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಪ್ರಬಲ ಅಂಶವಾಗಿರುವ ಡಿಫೆನ್ಸ್ ಸೆಕ್ಟರ್​ನಲ್ಲೂ ಸಹಕಾರ ಗಟ್ಟಿಗೊಳಿಸಲು ಮಾತುಕತೆಯಾಗಿದೆ. ಭಾರತದಲ್ಲಿರುವ ಹೆಚ್ಚಿನ ಶಸ್ತ್ರಾಸ್ತ್ರಗಳು ರಷ್ಯನ್ ನಿರ್ಮಿತವಾದವಾಗಿವೆ. ಭಾರತದಲ್ಲೇ ತಯಾರಿಸಲಾಗವ ಬ್ರಹ್ಮೋಸ್ ಕ್ಷಿಪಣಿಯು ರಷ್ಯಾ ಮೂಲದ್ದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು