AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಸಾಲ ಕೊಡಬೇಡಿ: ಐಎಂಎಫ್​​​ಗೆ ಭಾರತ ಮನವಿ; ಈ ಸಾಲ ತಪ್ಪಿದರೆ ಪಾಕಿಸ್ತಾನಕ್ಕೆ ಏನು ಸಮಸ್ಯೆ?

Pakistan's debt support from IMF: ಪಾಕಿಸ್ತಾನಕ್ಕೆ ಸಾಲ ನೀಡುವ ನಿರ್ಧಾರ ಪರಾಮರ್ಶಿಸಿ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆಗೆ ಭಾರತ ಮನವಿ ಮಾಡಿದೆ. ಕಳೆದ ವರ್ಷ ಐಎಂಎಫ್ ಪಾಕಿಸ್ತಾನಕ್ಕೆ 7 ಬಿಲಿಯನ್ ಡಾಲರ್, ಈ ವರ್ಷ 1.3 ಬಿಲಿಯನ್ ಡಾಲರ್ ಸಾಲದ ನೆರವು ಬಿಡುಗಡೆ ಮಾಡಿತ್ತು. ಪಾಕಿಸ್ತಾನ ಈ ಹಣವನ್ನು ದುರುಪಯೋಗಿಸಿಕೊಳ್ಳಬಹುದು ಎನ್ನುವುದು ಭಾರತದ ಆಕ್ಷೇಪ. ಈ ಹಿನ್ನೆಲೆಯಲ್ಲಿ ಸಾಲ ನೀಡಬಾರದೆಂದು ಪಾಕಿಸ್ತಾನ ಮನವಿ ಮಾಡಿರುವುದು.

ಪಾಕಿಸ್ತಾನಕ್ಕೆ ಸಾಲ ಕೊಡಬೇಡಿ: ಐಎಂಎಫ್​​​ಗೆ ಭಾರತ ಮನವಿ; ಈ ಸಾಲ ತಪ್ಪಿದರೆ ಪಾಕಿಸ್ತಾನಕ್ಕೆ ಏನು ಸಮಸ್ಯೆ?
ಐಎಂಎಫ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 02, 2025 | 6:38 PM

Share

ನವದೆಹಲಿ, ಮೇ 2: ಪಹಲ್ಗಾಂನಲ್ಲಿ ಉಗ್ರ ದಾಳಿಗೆ ಕುಮ್ಮಕ್ಕು ನೀಡಿದೆ ಎನ್ನಲಾಗುತ್ತಿರುವ ಪಾಕಿಸ್ತಾನದ (Pakistan) ಮೇಲೆ ಭಾರತ ಕೈಲಾದಷ್ಟು ಒತ್ತಡ ಹಾಕಲು ಪ್ರಯತ್ನಿಸುತ್ತಿದೆ. ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದ ಹಿಂಪಡೆದಿರುವುದು, ಏರ್​ ಸ್ಪೇಸ್ ಮುಚ್ಚಿರುವುದು, ವ್ಯಾಪಾರ ವಹಿವಾಟು ಸಂಪೂರ್ಣ ನಿಲ್ಲಿಸಿರುವುದು ಹೀಗೆ ವಿವಿಧ ಕ್ರಮಗಳನ್ನು ಭಾರತ ಕೈಗೊಂಡಿದೆ. ಅಂತರರಾಷ್ಟ್ರೀಯ ವೇದಿಕೆಗಳಲ್ಲೂ ಪಾಕಿಸ್ತಾನದ ವಿರುದ್ಧ ಭಾರತ ಧ್ವನಿ ಎತ್ತುತ್ತಿದೆ. ಇದೀಗ ಒಂದು ಹೆಜ್ಜೆ ಮುಂದೆ ಹೋಗಿ, ಪಾಕಿಸ್ತಾನಕ್ಕೆ ಅಂತರರಾಷ್ಟ್ರೀಯ ಸಾಲ (international loans) ಸಿಗದಂತೆ ನೋಡಿಕೊಳ್ಳಲು ಭಾರತ ಯತ್ನಿಸುತ್ತಿದೆ. ಪಾಕಿಸ್ತಾನಕ್ಕೆ ಸಾಲ ನೀಡಬೇಡಿ ಎಂದು ಐಎಂಎಫ್​​​ಗೆ ಭಾರತ ಮನವಿ ಮಾಡಿದೆ.

ಪಾಕಿಸ್ತಾನಕ್ಕೆ ಹಣಕಾಸು ನೆರವು ದೊರೆತರೆ ಅದರ ಕುಕೃತ್ಯಗಳಿಗೆ ಇನ್ನಷ್ಟು ಪ್ರಚೋದನೆ ಸಿಕ್ಕಂತಾಗುತ್ತದೆ. ಹೀಗಾಗಿ, ಆ ದೇಶಕ್ಕೆ ಸಾಲ ನೀಡುವ ನಿರ್ಧಾರವನ್ನು ಹಿಂಪಡೆಯಲು ಯೋಚಿಸಿ ಎಂದು ಐಎಂಎಫ್​​​ಗೆ ಕರೆ ನೀಡಿದೆ.

ಐಎಂಎಫ್​​ನ ಅತಿಹೆಚ್ಚು ಸಾಲಗಾರರ ಪಟ್ಟಿಯಲ್ಲಿ ಪಾಕಿಸ್ತಾನ…

ಪಾಕಿಸ್ತಾನ ಆರ್ಥಿಕವಾಗಿ ಸಂಕಷ್ಟದ ಸ್ಥಿತಿಯಲ್ಲಿದೆ. ತನ್ನ ಶಕ್ತಿಗೆ ಮೀರಿದ ಸಾಲ ಮಾಡಿ ದುಃಸ್ಥಿತಿಗೆ ಸಿಲುಕಿದೆ. ತನ್ನ ಹಣಕಾಸು ಕಷ್ಟಕ್ಕೆ ಪರಿಹಾರವಾಗಿ ಐಎಂಎಫ್ ಸಾಲದ ನೆರವಿನ ಮೇಲೆ ಅದು ಅವಲಂಬಿತವಾಗಿದೆ.

ಇದನ್ನೂ ಓದಿ
Image
ಉಗ್ರರೊಂದಿಗಿನ ಪಾಕಿಸ್ತಾನದ ನಂಟು ಒಪ್ಪಿಕೊಂಡ ಬಿಲಾವಲ್ ಭುಟ್ಟೋ
Image
ಪಾಕ್ ಸೇನೆ ಮಾಡದ ಕೆಲಸ ಇಲ್ಲ, ಯುದ್ಧವಂತೂ ಗೆಲ್ಲಲ್ಲ
Image
ಭಾರತದ ಈ ಅಗ್ಗದ ಕಾರು, ಪಾಕಿಸ್ತಾನದಲ್ಲಿ ತುಸು ದುಬಾರಿ
Image
ದಕ್ಷಿಣ ಏಷ್ಯಾದ ನಂ. 1 ಆಗಿದ್ದ ಪಾಕಿಸ್ತಾನ ಭಿಕಾರಿ ಆದ ಕಥೆ

ಇದನ್ನೂ ಓದಿ: ಕೇರಳದಲ್ಲಿ ವಿಳಿಂಜಂ ಬಂದರು ಅನಾವರಣ; ಇದು ಭಾರತದ ಮೊದಲ ಟ್ರಾನ್ಸ್​​ಶಿಪ್​ಮೆಂಟ್ ಹಬ್

ಕಳೆದ ವರ್ಷ ಪಾಕಿಸ್ತಾನ ಐಎಂಎಫ್​​ನಿಂದ 7 ಬಿಲಿಯನ್ ಡಾಲರ್ ಸಾಲ ಪಡೆದಿತ್ತು. ಈ ವರ್ಷ ಮಾರ್ಚ್ ತಿಂಗಳಲ್ಲಿ 1.3 ಬಿಲಿಯನ್ ಡಾಲರ್ ಸಾಲ ಪಡೆಯಿತು. ಹವಾಮಾನ ಸಮಸ್ಯೆಗಳ ವಿರುದ್ಧ ಹೋರಾಡಲು ಪಾಕಿಸ್ತಾನಕ್ಕೆ ಈ ಸಾಲ ಸಿಕ್ಕಿತ್ತು. ಇದನ್ನು ಪಾಕಿಸ್ತಾನ ಹಣಕಾಸು ಸಂಕಷ್ಟ ಕಡಿಮೆ ಮಾಡಿಕೊಳ್ಳಲು ಬಳಸಿಕೊಂಡಿದ್ದಾಗಿ ಹೇಳಿದೆ.

ಪಾಕಿಸ್ತಾನವು ಈ ಐಎಂಎಫ್ ಸಾಲಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬುದು ಭಾರತದ ಆತಂಕ. ಹೀಗಾಗಿ, ಸಾಲ ನಿರ್ಧಾರವನ್ನು ಪರಾಮರ್ಶಿಸಬೇಕೆಂದು ಐಎಂಎಫ್​​ಗೆ ಭಾರತ ಮನವಿ ಮಾಡಿರುವುದು. ಪಾಕಿಸ್ತಾನಕ್ಕೆ ಐಎಂಎಫ್ ಸಾಲ ತಪ್ಪಿದರೆ ಹಣಕಾಸು ಸಂಕಷ್ಟ ಪರಿಸ್ಥಿತಿ ತೀವ್ರಗೊಳ್ಳುತ್ತದೆ. ಭಯೋತ್ಪಾದನೆ, ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಕೆ ಮಾಡಲು ಹಣದ ಕೊರತೆ ಎದುರಾಗುತ್ತದೆ. ಇದು ಭಾರತದ ಉದ್ದೇಶವಾಗಿದೆ.

ಇದನ್ನೂ ಓದಿ: ಗುಟ್ಟಾಗಿ ಉಳಿದಿಲ್ಲ; ಉಗ್ರರೊಂದಿಗಿನ ಪಾಕಿಸ್ತಾನದ ನಂಟು ಒಪ್ಪಿಕೊಂಡ ಬಿಲಾವಲ್ ಭುಟ್ಟೋ

ಉಗ್ರರಿಗೆ ಪಾಕಿಸ್ತಾನದ ಬೆಂಬಲ…

ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರ ಮೇಲೆ ಉಗ್​ರರು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ 25 ಮಂದಿ ಬಲಿಯಾಗಿದ್ದಾರೆ. ಈ ದಾಳಿ ಹಿಂದೆ ಉಗ್ರರಿಗೆ ಪಾಕಿಸ್ತಾನದ ಕುಮ್ಮಕ್ಕು ಇದೆ ಎಂಬುದು ಭಾರತದ ವಾದ. ಪಾಕಿಸ್ತಾನ ಈ ಆರೋಪವನ್ನು ತಳ್ಳಿಹಾಕಿದೆಯಾದರೂ, ವಿವಿಧ ಪಾಕಿಸ್ತಾನೀ ಮುಖಂಡರು, ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡಿರುವ ಇತಿಹಾಸ ಇರುವುದು ಹೌದು ಎಂದು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ