AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Economy: ಜಗತ್ತು ಅಲುಗಾಡಿದರೂ ಭಾರತ ನಿಶ್ಚಲ; 2023ರಲ್ಲಿ ಭಾರತದಿಂದ ನಿರೀಕ್ಷೆಮೀರಿದ ಆರ್ಥಿಕವೃದ್ಧಿ: ಐಎಂಎಫ್ ಅಂದಾಜು

IMF On Global Economy: 2023ರಲ್ಲಿ ಜಾಗತಿಕ ಆರ್ಥಿಕ ವೃದ್ಧಿದರ ಶೇ. 3.5ರಿಂದ ಶೇ. 3ಕ್ಕೆ ಇಳಿಯಬಹುದು. ಭಾರತದ ಆರ್ಥಿಕತೆ ಶೇ. 6.1ರಷ್ಟು ಬೆಳೆಯಬಹುದು ಎಂದು ಐಎಂಎಫ್ ತನ್ನ ಇತ್ತೀಚಿನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

Economy: ಜಗತ್ತು ಅಲುಗಾಡಿದರೂ ಭಾರತ ನಿಶ್ಚಲ; 2023ರಲ್ಲಿ ಭಾರತದಿಂದ ನಿರೀಕ್ಷೆಮೀರಿದ ಆರ್ಥಿಕವೃದ್ಧಿ: ಐಎಂಎಫ್ ಅಂದಾಜು
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 26, 2023 | 3:53 PM

Share

ನವದೆಹಲಿ, ಜುಲೈ 26: ಕೆಸರಿನಲ್ಲಿ ಕಮಲ ಅರಳುವಂತೆ ಜಾಗತಿಕ ಆರ್ಥಿಕತೆಯ ಡೋಲಾಯಮಾನ ಪರಿಸ್ಥಿತಿಯ ಮಧ್ಯೆ ಭಾರತದ ಆರ್ಥಿಕತೆ ಗಮನೀಯವೆನಿಸುವ ರೀತಿಯಲ್ಲಿ ಬೆಳೆಯುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಈ ವರ್ಷದ ಜಾಗತಿಕ ಆರ್ಥಿಕ ಬೆಳವಣಿಗೆ ಬಗ್ಗೆ ಅಂದಾಜು ಮಾಡಿದ್ದು, ಭಾರತದ ಪ್ರಗತಿ ಬಗ್ಗೆ ಆಶಾದಾಯಕವಾಗಿದೆ. 2023ರ ಕ್ಯಾಲಂಡರ್ ವರ್ಷದಲ್ಲಿ ಭಾರತ ಶೇ. 6.1ರಷ್ಟು ಆರ್ಥಿಕವೃದ್ಧಿ ಕಾಣಬಹುದು ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. 2023ರಲ್ಲಿ ಶೇ. 5.9ರಷ್ಟು ಮಾತ್ರ ಭಾರತದ ಆರ್ಥಿಕತೆ ಬೆಳೆಯಬಹುದು ಎಂದು ಐಎಂಎಫ್ ಏಪ್ರಿಲ್​ನಲ್ಲಿ ಅಂದಾಜು ಮಾಡಿತ್ತು. ಈಗ ಭಾರತದಲ್ಲಿ ಹೂಡಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐಎಂಎಫ್ ತನ್ನ ಅಭಿಪ್ರಾಯವನ್ನು ಬದಲಾಯಿಸಿಕೊಳ್ಳುವಂತಾಗಿದೆ.

ವರ್ಲ್ಡ್ ಎಕನಾಮಿಕ್ ಔಟ್​ಲುಕ್ ವರದಿಯಲ್ಲಿ ಈ ಸಂಗತಿಗಳನ್ನು ಪ್ರಸ್ತಾಪಿಸಿರುವ ಇಂಟರ್ನ್ಯಾಷನಲ್ ಮಾನಿಟರಿ ಫಂಡ್, 2022ರ ಕೊನೆಯ ಕ್ವಾರ್ಟರ್​ನಲ್ಲಿ ಭಾರತ ನಿರೀಕ್ಷೆಮೀರಿದ ಬೆಳವಣಿಗೆ ಕಂಡಿತ್ತು. ಅದೇ ಹಾದಿ ಮುಂದುವರಿದು 2023ರಲ್ಲಿ ಉತ್ತಮ ಪ್ರಗತಿ ಕಾಣಬಹುದು ಎಂದು ಹೇಳಿದೆ.

ಇದನ್ನೂ ಓದಿ: Indian Economy: ಮೂರ್ನಾಲ್ಕು ದಶಕದಲ್ಲಿ ಭಾರತವೇ ವಿಶ್ವದ ನಂಬರ್ ಒನ್: ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ

ಜಾಗತಿಕ ಆರ್ಥಿಕತೆ ಕುಂಠಿತಗೊಳ್ಳಬಹುದು ಎಂದ ಐಎಂಎಫ್

ಐಎಂಎಫ್ ವರದಿ ಪ್ರಕಾರ, 2022ರಲ್ಲಿ ಶೇ. 3.5ರಷ್ಟು ಇರುವ ಜಾಗತಿಕ ಆರ್ಥಿಕತೆ ಬೆಳವಣಿಗೆ 2023ರಲ್ಲಿ ಶೇ. 3ಕ್ಕೆ ಇಳಿಯಬಹುದು. 2024ರಲ್ಲೂ ಶೇ. 3ರಷ್ಟು ಮಾತ್ರ ಜಾಗತಿಕ ಆರ್ಥಿಕತೆ ವೃದ್ಧಿಸಬಹುದು ಎನ್ನಲಾಗಿದೆ.

ಜಾಗತಿಕ ಆರ್ಥಿಕತೆ ನಿರೀಕ್ಷೆಗಿಂತಲೂ ಮಂದಗತಿಯಲ್ಲಿರುವುದಾದರೂ ಹಣದುಬ್ಬರ ಮುಂಬರುವ ದಿನಗಳಲ್ಲಿ ತಹಬದಿಗೆ ಬರಬಹುದು ಎಂದು ಐಎಂಎಫ್ ಭಾವಿಸಿದೆ. ಜಾಗತಿಕ ಸಮಗ್ರ ಹಣದುಬ್ಬರ (ಹೆಡ್​ಲೈನ್ ಇನ್​ಫ್ಲೇಷನ್) 2022ರಲ್ಲಿ ಶೇ. 8.7ರಷ್ಟು ಇತ್ತು. ಅದು 2023ರಲ್ಲಿ ಶೇ. 6.8ಕ್ಕೆ ಮತ್ತು 2024ರಲ್ಲಿ ಶೇ. 5.2ಕ್ಕೆ ಇಳಿಯಬಹುದು. ಮುಖ್ಯ ಹಣದುಬ್ಬರ ಇನ್ನೂ ಹೆಚ್ಚು ವೇಗದಲ್ಲಿ ಕಡಿಮೆ ಆಗಬಹುದು. ಜಾಗತಿಕವಾಗಿ ವಿವಿಧ ದೇಶಗಳ ಸೆಂಟ್ರಲ್ ಬ್ಯಾಂಕ್​ಗಳು ಬಡ್ಡಿ ದರ ಹೆಚ್ಚಿಸುವ ಮೂಲಕ ಹಣದುಬ್ಬರವನ್ನು ನಿಯಂತ್ರಣಕ್ಕೆ ತರುತ್ತಿವೆ. ಇದು ಜಾಗತಿಕ ಹಣದುಬ್ಬರ ತಗ್ಗಲು ಸಹಾಯವಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?