AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone Exports: ಭಾರತ ಹೊಸ ಮೈಲಿಗಲ್ಲು; ಒಂದು ವರ್ಷದಲ್ಲಿ 2 ಲಕ್ಷ ಕೋಟಿ ರೂ ಮೌಲ್ಯದ ಸ್ಮಾರ್ಟ್​​ಫೋನ್ ರಫ್ತು

India reach new milestone in smartphone exports: 2024-25ರಲ್ಲಿ ಭಾರತದಿಂದ ವಿದೇಶಗಳಿಗೆ ರಫ್ತಾದ ಸ್ಮಾರ್ಟ್​​ಫೋನ್ ಮೌಲ್ಯ 2 ಲಕ್ಷ ಕೋಟಿ ರೂ. ಇದೇ ಮೊದಲ ಬಾರಿಗೆ ಒಂದು ವರ್ಷದಲ್ಲಿ ಸ್ಮಾರ್ಟ್​​ಫೋನ್ ರಫ್ತಿನಲ್ಲಿ ಈ ಮೈಲಿಗಲ್ಲು ಮುಟ್ಟಲಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಪೋಸ್ಟ್​​​ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

Smartphone Exports: ಭಾರತ ಹೊಸ ಮೈಲಿಗಲ್ಲು; ಒಂದು ವರ್ಷದಲ್ಲಿ 2 ಲಕ್ಷ ಕೋಟಿ ರೂ ಮೌಲ್ಯದ ಸ್ಮಾರ್ಟ್​​ಫೋನ್ ರಫ್ತು
ಸ್ಮಾರ್ಟ್​​ಫೋನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 09, 2025 | 4:26 PM

ನವದೆಹಲಿ, ಏಪ್ರಿಲ್ 9: ಭಾರತ ಒಂದು ವರ್ಷದಲ್ಲಿ 2 ಲಕ್ಷ ಕೋಟಿ ರೂ ಮೌಲ್ಯದ ಸ್ಮಾರ್ಟ್​​ಫೋನ್​​ಗಳನ್ನು ರಫ್ತು ಮಾಡಿದೆ. 2024-25ರ ವರ್ಷದಲ್ಲಿ ಈ ಮೈಲಿಗಲ್ಲು ಮುಟ್ಟಲಾಗಿದೆ. ಯಾವುದೇ ವರ್ಷದಲ್ಲಿ ಎರಡು ಲಕ್ಷ ಕೋಟಿ ರೂ ಸ್ಮಾರ್ಟ್​​ಫೋನ್ ರಫ್ತು ಮಾಡಲಾಗಿರುವುದು ಇದೇ ಮೊದಲು ಎನ್ನಲಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವನಿ ವೈಷ್ಣವ್ ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​​​ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರಿ ಜಾರಿಗೆ ತಂದಿರುವ ಪಿಎಲ್​​ಐ ಸ್ಕೀಮ್​ನ ಫಲವಾಗಿ ಈ ಐತಿಹಾಸಿಕ ಕ್ಷಣ ದೊರಕಿದೆ ಎಂದು ಅವರು ಹೇಳಿದ್ದಾರೆ.

ವರ್ಷದಿಂದ ವರ್ಷಕ್ಕೆ ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆ ಗಣನೀಯವಾಗಿ ಹೆಚ್ಚುತ್ತಿದೆ. ಅದರಲ್ಲೂ ಸ್ಮಾರ್ಟ್​​ಫೋನ್​​ಗಳ ತಯಾರಿಕೆ ಸಖತ್ ಏರಿಕೆ ಆಗುತ್ತಿದೆ. 2023-24ರಲ್ಲಿ ಭಾರತದಿಂದ ರಫ್ತಾದ ಸ್ಮಾರ್ಟ್​​ಫೋನ್​​ಗೆ ಹೋಲಿಸಿದರೆ 2024-25ರಲ್ಲಿ ರಫ್ತಿನಲ್ಲಿ ಶೇ. 54ರಷ್ಟು ಹೆಚ್ಚಳ ಆಗಿದೆ.

ಇದನ್ನೂ ಓದಿ: ವೆಚ್ಚ ಹೆಚ್ಚಳದಲ್ಲೂ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಭಾರತದ ಎಂಎಸ್​ಎಂಇಗಳು: ಸಿಡ್ಬಿ ವರದಿ

ಇದನ್ನೂ ಓದಿ
Image
ಜಿಡಿಪಿ ಶೇ. 6.5, ಹಣದುಬ್ಬರ ಶೇ. 4: ಆರ್​​ಬಿಐ ಅಂದಾಜು
Image
ಇನ್ಮುಂದೆ ಆಧಾರ್ ಕಾರ್ಡ್ ಸ್ಕ್ಯಾನ್ ಮಾಡಬೇಕಿಲ್ಲ; ಹೊಸ ಆ್ಯಪ್​ ಬಿಡುಗಡೆ
Image
ಶೇ. 37 ಸಣ್ಣ ಉದ್ದಿಮೆಗಳು ಸಾಮರ್ಥ್ಯ ಹೆಚ್ಚಳಕ್ಕೆ ಮುಂದು: ಸಿಡ್ಬಿ ವರದಿ
Image
ರಿನಿವಬಲ್ ಎನರ್ಜಿಯಲ್ಲಿ ಜರ್ಮನಿ ಮೀರಿಸಿದ ಭಾರತ

ಜಾಗತಿಕ ಮೌಲ್ಯ ಸರಪಳಿಯಲ್ಲಿ ಭಾರತ ಗಾಢವಾಗಿ ಬೆಸೆದುಕೊಳ್ಳುತ್ತಿರುವುದಕ್ಕೆ ಈ ಸ್ಮಾರ್ಟ್​​ಫೋನ್ ರಫ್ತು ಹೆಚ್ಚಳವೇ ಕನ್ನಡಿ ಹಿಡಿದಿದೆ. ಜಾಗತಿಕ ಸರಬರಾಜು ಸರಪಳಿ ವ್ಯವಸ್ಥೆಯಲ್ಲಿ ಭಾರತದ ಎಂಎಸ್​​ಎಂಇಗಳು ಪ್ರಮುಖ ಕೊಂಡಿಗಳಾಗುತ್ತಿವೆ. ಉದ್ಯೋಗಸೃಷ್ಟಿಯೂ ಹೆಚ್ಚಾಗುತ್ತಿದೆ. ದೇಶದೊಳಗೆ ಆಂತರಿಕ ಎಲೆಕ್ಟ್ರಾನಿಕ್ಸ್ ತಯಾರಿಕೆಯ ವ್ಯವಸ್ಥೆ ಬಹಳ ವೇಗದಲ್ಲಿ ವಿಸ್ತಾರಗೊಳ್ಳುತ್ತಿದೆ ಎಂದು ಕೇಂದ್ರ ಸಚಿವರು ತಮ್ಮ ಎಕ್ಸ್ ಪೋಸ್ಟ್​​​ನಲ್ಲಿ ಬರೆದಿದ್ದಾರೆ.

ಆ್ಯಪಲ್ ಉತ್ಪನ್ನಗಳ ರಫ್ತು ಅತಿಹೆಚ್ಚು

ಭಾರತದಿಂದ 2024-25ರಲ್ಲಿ ರಫ್ತಾದ ಸ್ಮಾರ್ಟ್​​ಫೋನ್​​ನಲ್ಲಿ ಐಫೋನ್ ಪಾಲು ಶೇ. 70ರಷ್ಟಿದೆ. ಭಾರತದಿಂದ ರಫ್ತಾದ ಐಫೋನ್​​ನಲ್ಲಿ ತಮಿಳುನಾಡಿನ ಫಾಕ್ಸ್​​ಕಾನ್ ಘಟಕದಲ್ಲಿ ತಯಾರಾದ ಐಫೋನ್​​ಗಳೇ ಅರ್ಧದಷ್ಟಿವೆ.

ಆ್ಯಪಲ್​​ನ ಐಫೋನ್ ಮತ್ತಿತರ ಉತ್ಪನ್ನಗಳನ್ನು ತಯಾರಿಸುವ ಕಂಪನಿಗಳಲ್ಲಿ ಫಾಕ್ಸ್​​​ಕಾನ್ ಪ್ರಮುಖವಾದುದು. ಭಾರತದಲ್ಲಿ ಫಾಕ್ಸ್​​ಕಾನ್ ಅಲ್ಲದೇ ಪೆಗಾಟ್ರಾನ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಗಳು ಆ್ಯಪಲ್ ಉತ್ಪನ್ನಗಳನ್ನು ತಯಾರಿಸುತ್ತವೆ.

ಇದನ್ನೂ ಓದಿ: ಸೌರಶಕ್ತಿ ಮತ್ತು ವಾಯುಶಕ್ತಿ ಉತ್ಪಾದನೆಯಲ್ಲಿ ಜರ್ಮನಿಯನ್ನು ಹಿಂದಿಕ್ಕಿದ ಭಾರತ; ಈಗ ನಾವೇ ವಿಶ್ವದ ನಂ. 3

ಕರ್ನಾಟಕದ ಕೋಲಾರದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಸಾಕಷ್ಟು ಐಫೋನ್ ಅಸೆಂಬ್ಲಿಂಗ್ ನಡೆಯುತ್ತಿದೆ. ಮುಂಚೆ ಇದು ವಿಸ್ಟ್ರಾನ್ ಕಂಪನಿಯ ಫ್ಯಾಕ್ಟರಿಯಾಗಿತ್ತು. ಅದನ್ನು ಟಾಟಾ ಎಲೆಕ್ಟ್ರಾನಿಕ್ಸ್ ಖರೀದಿ ಮಾಡಿತು. ತಮಿಳುನಾಡಿನಲ್ಲಿರುವ ಪೆಗಾಟ್ರಾನ್ ಘಟಕದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಶೇ. 60ರಷ್ಟು ಪಾಲು ಹೊಂದಿದೆ. ಹೀಗಾಗಿ, ಫಾಕ್ಸ್​​ಕಾನ್ ಬಳಿಕ ಟಾಟಾ ಎಲೆಟ್ರಾನಿಕ್ಸ್ ಪ್ರಮುಖ ಸ್ಮಾರ್ಟ್​​ಫೋನ್ ಅಸೆಂಬ್ಲಿಂಗ್ ಕಂಪನಿ ಎನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು