AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Piyush vs Trump: ಅಂದು ದುರ್ಬಲ ಐದು, ಇಂದು ಪ್ರಬಲ ಐದು: ಟ್ರಂಪ್​ರ ‘ಸತ್ತ’ ಆರ್ಥಿಕತೆಯ ಟಾಂಟ್​ಗೆ ಭಾರತ ತಿರುಗೇಟು

Piyush Goyal indirect taunt on Trump's dead economy jibe against India: ‘ಸತ್ತ ಆರ್ಥಿಕತೆ’ ಎಂದು ಡೊನಾಲ್ಡ್ ಟ್ರಂಪ್ ಕೊಟ್ಟ ಟಾಂಟ್​ಗೆ ಭಾರತ ಪರೋಕ್ಷವಾಗಿ ತಿರುಗೇಟು ನೀಡಿದೆ. ಜುಲೈ 31ರಂದು ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ. ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತಿದೆ ಎಂದು ಗೋಯಲ್ ಹೇಳಿದ್ದಾರೆ.

Piyush vs Trump: ಅಂದು ದುರ್ಬಲ ಐದು, ಇಂದು ಪ್ರಬಲ ಐದು: ಟ್ರಂಪ್​ರ ‘ಸತ್ತ’ ಆರ್ಥಿಕತೆಯ ಟಾಂಟ್​ಗೆ ಭಾರತ ತಿರುಗೇಟು
ಪಿಯೂಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 31, 2025 | 5:23 PM

Share

ನವದೆಹಲಿ, ಜುಲೈ 31: ಯಾವುದೇ ಟ್ರೇಡ್ ಡೀಲ್ ಮಾಡಿಕೊಳ್ಳುವಾಗ ದೇಶದ ಹಿತಾಸಕ್ತಿ ಕಾಯ್ದುಕೊಳ್ಳುವುದಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕೇಂದ್ರ ಸಚಿವರು, ಭಾರತ ಕಳೆದ ದಶಕದಲ್ಲಿ ವಿಶ್ವದ ದುರ್ಬಲ ಆರ್ಥಿಕತೆಯಿಂದ ಅತಿವೇಗವಾಗಿ ಅಭಿವೃದ್ಧಿಯಾಗುತ್ತಿರುವ ಆರ್ಥಿಕತೆಯ ದೇಶವಾಗಿ ಬೆಳೆದಿದೆ ಎಂದಿದ್ದಾರೆ. ಭಾರತ ‘ಸತ್ತ’ ಆರ್ಥಿಕತೆ ಎಂದು ಡೊನಾಲ್ಡ್ ಟ್ರಂಪ್ (Donald Trump) ಕೊಟ್ಟಿದ್ದ ಟಾಂಟ್​​ಗೆ ಭಾರತ ಪರೋಕ್ಷವಾಗಿ ನೀಡಿದ ತೀಕ್ಷ್ಣ ಪ್ರತಿಕ್ರಿಯೆ ಎಂದೆನಿಸಿದೆ.

‘ಜಾಗತಿಕ ಆರ್ಥಿಕತೆಯಲ್ಲಿ ಭಾರತ ಬೆಳಗುತ್ತಿದೆ ಎಂದು ಇವತ್ತು ಜಾಗತಿಕ ಸಂಸ್ಥೆಗಳು ಮತ್ತು ಆರ್ಥಿಕ ತಜ್ಞರು ಹೇಳುತ್ತಿದ್ದಾರೆ’ ಎಂದು ಭಾರತದ ಶಕ್ತಿ ಬಗ್ಗೆ ಪಿಯೂಶ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Dead Economy: ಭಾರತದ ಸತ್ತ ಆರ್ಥಿಕತೆ ನೆಲಕಚ್ಚಬೇಕು: ಡೊನಾಲ್ಡ್ ಟ್ರಂಪ್ ಹಿಡಿಶಾಪ

ಅಮೆರಿಕದಿಂದ ಭಾರತದ ಮೇಲೆ ಟ್ಯಾರಿಫ್ ಹೇರಿಕೆ ಹಿನ್ನೆಲೆಯಲ್ಲಿ ಆಗಸ್ಟ್ 1ರಿಂದ ಭಾರತದ ಸರಕುಗಳ ಮೇಲೆ ಶೇ. 25ರಷ್ಟು ಆಮದು ಸುಂಕ ಮತ್ತು ಹೆಚ್ಚುವರಿಯಾಗಿ ಪೆನಾಲ್ಟಿ ಹೇರುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಳ್ಳದಿರುವುದಕ್ಕೆ ಮತ್ತು ರಷ್ಯಾ ಜೊತೆ ವ್ಯಾಪಾರ ಸಂಬಂಧ ಹೊಂದಿರುವುದಕ್ಕೆ ಭಾರತಕ್ಕೆ ಟ್ರಂಪ್ ನೀಡುತ್ತಿರುವ ‘ಶಿಕ್ಷೆ’ ಇದು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಿಯೂಶ್ ಗೋಯಲ್ ಲೋಕಸಭೆಯಲ್ಲಿ ಮಾತನಾಡಿದ್ದಾರೆ.

ಅಮೆರಿಕ ಪ್ರಕಟಿಸಿದ ಟ್ಯಾರಿಫ್​ಗಳಿಂದ ಏನು ಪರಿಣಾಮಗಳಾಗಬಹುದು ಎಂದು ಭಾರತ ಅವಲೋಕಿಸುತ್ತಿದೆ ಎಂದು ಹೇಳಿದ ಅವರು, ಯಾವುದೇ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವಾಗ ದೇಶದ ಹಿತಾಸಕ್ತಿ ರಕ್ಷಣೆಯೇ ಆದ್ಯತೆಯಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

‘ರೈತರು ಮತ್ತು ಎಂಎಸ್​ಎಂಇಗಳು ನೀಡಿದ ಕೊಡುಗೆಗಳಿಂದಾಗಿ ಭಾರತವು ಕಳೆದ ದಶಕದಲ್ಲಿ 11ನೇ ಅತಿದೊಡ್ಡ ಆರ್ಥಿಕತೆಯಿಂದ ಐದನೇ ಸ್ಥಾನಕ್ಕೆ ಏರಿದೆ’ ಎಂದು ಹೇಳುವ ಮೂಲಕ ಗೋಯಲ್ ಅವರು ಕೃಷಿ ಹಾಗೂ ಸಣ್ಣ ಉದ್ದಿಮೆಗಳ ರಕ್ಷಣೆಗೆ ಕಟಿಬದ್ಧವಾಗಿರುವುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ತೈಲ ಮಾರುವ ದಿನ ಬರುತ್ತೆ: ಟ್ರಂಪ್ ಹೊಸ ವರಸೆ

ಶೇ. 25ರ ಸುಂಕದಿಂದ ಭಾರತಕ್ಕೆ ಏನು ಹಾನಿ?

ತಜ್ಞರ ಪ್ರಕಾರ ಆಭರಣ ಮತ್ತು ಹರಳು ಉದ್ಯಮ, ಎಲೆಕ್ಟ್ರಾನಿಕ್ಸ್, ಔಷಧ, ಜವಳಿ ಉದ್ಯಮಗಳು ಪ್ರಮುಖವಾಗಿ ಹಿನ್ನಡೆಗೆ ಒಳಗಾಗಬಹುದು. ಸರ್ವಿಸ್ ಸೆಕ್ಟರ್​ಗೆ ಸುಂಕ ವಿಧಿಸಿದ್ದೇ ಆದಲ್ಲಿ ಐಟಿ ಉದ್ಯಮಕ್ಕೂ ಹೊಡೆತ ಬೀಳಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ