India Forex Reserves: ಭಾರತದ ವಿದೇಶಿ ವಿನಿಮಯ ಸಂಗ್ರಹ 3.271 ಬಿಲಿಯನ್ ಡಾಲರ್ ಇಳಿದು 600.423 ಶತಕೋಟಿ ಡಾಲರ್​ಗೆ ಕುಸಿತ

ಭಾರತದ ವಿದೇಶಿ ವಿನಿಮಯ ಮೀಸಲು 3.271 ಬಿಲಿಯನ್ ಯುಎಸ್​ಡಿ ಇಳಿಕೆ ಆಗಿ, 600.423 ಬಿಲಿಯನ್ ಯುಎಸ್​ಡಿ ಮುಟ್ಟಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

India Forex Reserves: ಭಾರತದ ವಿದೇಶಿ ವಿನಿಮಯ ಸಂಗ್ರಹ 3.271 ಬಿಲಿಯನ್ ಡಾಲರ್ ಇಳಿದು 600.423 ಶತಕೋಟಿ ಡಾಲರ್​ಗೆ ಕುಸಿತ
ಸಾಂದರ್ಭಿಕ ಚಿತ್ರ
Follow us
| Edited By: Srinivas Mata

Updated on: Apr 29, 2022 | 10:03 PM

ಏಪ್ರಿಲ್ 22ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು ಯುಎಸ್​ಡಿ 3.271 ಶತಕೋಟಿ ಇಳಿದು, ಯುಎಸ್​ಡಿ 600.423 ಶತಕೋಟಿಗೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಂಕಿ-ಅಂಶಗಳು ತೋರಿಸಿವೆ. ಹಿಂದಿನ ವಾರದಲ್ಲಿ ಮೀಸಲು ಯುಎಸ್​ಡಿ 311 ಮಿಲಿಯನ್‌ ಇಳಿದು, ಯುಎಸ್​ಡಿ 603.694 ಶತಕೋಟಿಗೆ ಕುಸಿದಿದೆ. ವರದಿಯ ವಾರದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ಬಿಡುಗಡೆ ಮಾಡಿದ ಸಾಪ್ತಾಹಿಕ ಅಂಕಿ-ಅಂಶಗಳು, ಒಟ್ಟಾರೆ ಮೀಸಲು ಮತ್ತು ಚಿನ್ನದ ಮೀಸಲು ಪ್ರಮುಖ ಅಂಶವಾದ ವಿದೇಶಿ ಕರೆನ್ಸಿ ಆಸ್ತಿಗಳ (ಎಫ್‌ಸಿಎ) ಮೀಸಲು ಕುಸಿತವಾಗಿದೆ ಎಂದು ತೋರಿಸಿವೆ.

ಏಪ್ರಿಲ್ 22ಕ್ಕೆ ಕೊನೆಗೊಂಡ ವಾರದಲ್ಲಿ ಎಫ್​ಸಿಎ ಯುಎಸ್​ಡಿ 2.835 ಶತಕೋಟಿ ಕುಸಿದು, ಯುಎಸ್​ಡಿ 533.933 ಶತಕೋಟಿಗೆ ಇಳಿದಿದೆ. ಡಾಲರ್ ಪರಿಭಾಷೆಯಲ್ಲಿ ಹೇಳುವುದಾದರೆ, ವಿದೇಶಿ ಕರೆನ್ಸಿ ಸ್ವತ್ತುಗಳು ವಿದೇಶಿ ವಿನಿಮಯ ಮೀಸಲುಗಳಲ್ಲಿ ಹೊಂದಿರುವ ಯುರೋ, ಪೌಂಡ್ ಮತ್ತು ಯೆನ್‌ನಂತಹ ಯುಎಸ್​ ಅಲ್ಲದ ಕರೆನ್ಸಿಗಳ ಏರಿಕೆ ಅಥವಾ ಸವಕಳಿಯ ಪರಿಣಾಮವನ್ನು ಒಳಗೊಂಡಿರುತ್ತದೆ. ಡೇಟಾ ಪ್ರಕಾರ, ವರದಿಯ ವಾರದಲ್ಲಿ ಚಿನ್ನದ ಸಂಗ್ರಹವು ಯುಎಸ್​ಡಿ 377 ಮಿಲಿಯನ್‌ನಿಂದ ಕುಸಿದು, ಯುಎಸ್​ಡಿ 42.768 ಶತಕೋಟಿಗೆ ಇಳಿದಿದೆ.

ಅಂತರಾಷ್ಟ್ರೀಯ ಹಣಕಾಸು ನಿಧಿ (IMF) ಜತೆಗೆ ವಿಶೇಷ ಡ್ರಾಯಿಂಗ್ ಹಕ್ಕುಗಳು (SDRs) ಯುಎಸ್​ಡಿ 33 ದಶಲಕ್ಷದಿಂದ ಯುಎಸ್​ಡಿ 18.662 ಶತಕೋಟಿಗೆ ಇಳಿದಿದೆ ಎಂದು ಆರ್​ಬಿಐ ಹೇಳಿದೆ. ಮಾಹಿತಿಯ ಪ್ರಕಾರ, ವರದಿಯ ವಾರದಲ್ಲಿ ಐಎಂಎಫ್​ನೊಂದಿಗೆ ದೇಶದ ಮೀಸಲು ಸ್ಥಾನವು ಯುಎಸ್​ಡಿ 26 ಮಿಲಿಯನ್‌ನಿಂದ ಕುಸಿದು, ಯುಎಸ್​ಡಿ 5.060 ಶತಕೋಟಿಗೆ ಇಳಿದಿದೆ.

ಇದನ್ನೂ ಓದಿ: Currency Exchange Rate: ಭಾರತದ ರೂಪಾಯಿ ಮೌಲ್ಯ ಏಪ್ರಿಲ್ 29ಕ್ಕೆ ಯಾವ ದೇಶದ ವಿರುದ್ಧ ಎಷ್ಟಿದೆ ಗೊತ್ತಾ?

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ