AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Foreign Exchange Reserve: ಭಾರತದ ವಿದೇಶೀ ವಿನಿಮಯ ಸಂಗ್ರಹ 2.04 ಬಿಲಿಯನ್ ಏರಿಕೆಯಾಗಿ 639 ಬಿಲಿಯನ್ ಡಾಲರ್​ಗೆ

ಭಾರತದ ವಿದೇಶೀ ವಿನಿಮಯ ಸಂಗ್ರಹದಲ್ಲಿ 2.04 ಬಿಲಿಯನ್ ಡಾಲರ್ ಹೆಚ್ಚಳವಾಗಿ 639.51 ಬಿಲಿಯನ್ ಅಮೆರಿಕನ್ ಡಾಲರ್ ಅನ್ನು ತಲುಪಿದೆ. ಆ ಬಗ್ಗೆ ವಿವರ ಇಲ್ಲಿದೆ.

Foreign Exchange Reserve: ಭಾರತದ ವಿದೇಶೀ ವಿನಿಮಯ ಸಂಗ್ರಹ 2.04 ಬಿಲಿಯನ್ ಏರಿಕೆಯಾಗಿ 639 ಬಿಲಿಯನ್ ಡಾಲರ್​ಗೆ
ಅಮೆರಿಕನ್ ಡಾಲರ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Srinivas Mata

Updated on: Oct 16, 2021 | 12:51 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಂಕಿ-ಅಂಶಗಳ ಪ್ರಕಾರ, ದೇಶದ ವಿದೇಶಿ ವಿನಿಮಯ ಸಂಗ್ರಹವು ಅಕ್ಟೋಬರ್ 8ಕ್ಕೆ ಕೊನೆಗೊಂಡ ವಾರದಲ್ಲಿ 2.039 ಬಿಲಿಯನ್ ಡಾಲರ್ ಹೆಚ್ಚಾಗಿ, 639.516 ಬಿಲಿಯನ್ ಡಾಲರ್​ಗೆ ತಲುಪಿದೆ. ಅಕ್ಟೋಬರ್ 1ಕ್ಕೆ ಕೊನೆಗೊಂಡ ಹಿಂದಿನ ವಾರದಲ್ಲಿ ಮೀಸಲು 1.169 ಬಿಲಿಯನ್ ಯುಎಸ್​ಡಿ ಕುಸಿದು, 637.477 ಬಿಲಿಯನ್ ಯುಎಸ್​ಡಿಗೆ ಇಳಿದಿತ್ತು. ಸೆಪ್ಟೆಂಬರ್ 3ಕ್ಕೆ ಕೊನೆಗೊಂಡ ವಾರದಲ್ಲಿ ಮೀಸಲು 8.895 ಬಿಲಿಯನ್ ಡಾಲರ್ ಹೆಚ್ಚಳವಾಗಿ, ಸಾರ್ವಕಾಲಿಕ ಗರಿಷ್ಠ ಮಟ್ಟವಾದ 642.453 ಬಿಲಿಯನ್ ಡಾಲರ್​ಗೆ ಏರಿಕೆಯಾಗಿತ್ತು. ಅಕ್ಟೋಬರ್ 8ಕ್ಕೆ ಕೊನೆಗೊಂಡ ವರದಿ ವಾರದಲ್ಲಿ ವಿದೇಶಿ ಕರೆನ್ಸಿ ಸ್ವತ್ತುಗಳ (ಎಫ್‌ಸಿಎ) ಹೆಚ್ಚಳದಿಂದಾಗಿ ಮೀಸಲು ಹೆಚ್ಚಳವಾಗಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಪ್ತಾಹಿಕ ದತ್ತಾಂಶವು ತೋರಿಸಿದೆ.

ಡೇಟಾದ ಪ್ರಕಾರ, ವರದಿ ವಾರದಲ್ಲಿ ಎಫ್‌ಸಿಎ 1.55 ಬಿಲಿಯನ್ ಯುಎಸ್​ಡಿ ಏರಿಕೆಯಾಗಿ 577.001 ಬಿಲಿಯನ್ ಯುಎಸ್​ಡಿ ತಲುಪಿದೆ. ಡಾಲರ್ ಪರಿಭಾಷೆಯಲ್ಲಿ ಹೇಳುವುದಾದರೆ, ಎಫ್​ಸಿಎ ವಿದೇಶಿ ವಿನಿಮಯ ಮೀಸಲುಗಳಲ್ಲಿ ಹೊಂದಿರುವ ಯುರೋ, ಪೌಂಡ್ ಮತ್ತು ಯೆನ್​ನಂತಹ ಡಾಲರ್​ಯೇತರ ಏರಿಕೆ ಅಥವಾ ಸವಕಳಿಯ ಪರಿಣಾಮವನ್ನು ಒಳಗೊಂಡಿದೆ.

ವರದಿ ವಾರದಲ್ಲಿ ಚಿನ್ನದ ನಿಕ್ಷೇಪಗಳು 464 ಮಿಲಿಯನ್ ಡಾಲರ್​ ಏರಿಕೆ ಆಗಿ, 38.022 ಬಿಲಿಯನ್ ಡಾಲರ್​ಗೆ ತಲುಪಿದೆ. ಅಂತರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವಿಶೇಷ ಡ್ರಾಯಿಂಗ್ ರೈಟ್ಸ್ (ಎಸ್​ಡಿಆರ್) 28 ಮಿಲಿಯನ್ ಡಾಲರ್ ಏರಿಕೆಯಾಗಿ, 19.268 ಬಿಲಿಯನ್​ಗೆ ತಲುಪಿದೆ. ಐಎಂಎಫ್‌ನೊಂದಿಗಿನ ದೇಶದ ಮೀಸಲು ಸ್ಥಾನವು ವರದಿ ಮಾಡುವ ವಾರದಲ್ಲಿ 3 ಮಿಲಿಯನ್ ಯುಎಸ್​ಡಿ ಇಳಿಕೆಯಾಗಿ, 5.225 ಶತಕೋಟಿ ಡಾಲರ್​ಗೆ ತಲುಪಿದೆ ಎಂದು ಡೇಟಾ ತೋರಿಸಿದೆ.

ಇದನ್ನೂ ಓದಿ: ಏಷ್ಯಾದಲ್ಲೇ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿಯನ್ನೂ ಹೊಗಳಿದ ಅಮೆರಿಕದ ಕಾರ್ಪೊರೇಟ್ ನಾಯಕ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ