Foreign Exchange Reserve: ಭಾರತದ ವಿದೇಶೀ ವಿನಿಮಯ ಸಂಗ್ರಹ 2.04 ಬಿಲಿಯನ್ ಏರಿಕೆಯಾಗಿ 639 ಬಿಲಿಯನ್ ಡಾಲರ್​ಗೆ

ಭಾರತದ ವಿದೇಶೀ ವಿನಿಮಯ ಸಂಗ್ರಹದಲ್ಲಿ 2.04 ಬಿಲಿಯನ್ ಡಾಲರ್ ಹೆಚ್ಚಳವಾಗಿ 639.51 ಬಿಲಿಯನ್ ಅಮೆರಿಕನ್ ಡಾಲರ್ ಅನ್ನು ತಲುಪಿದೆ. ಆ ಬಗ್ಗೆ ವಿವರ ಇಲ್ಲಿದೆ.

Foreign Exchange Reserve: ಭಾರತದ ವಿದೇಶೀ ವಿನಿಮಯ ಸಂಗ್ರಹ 2.04 ಬಿಲಿಯನ್ ಏರಿಕೆಯಾಗಿ 639 ಬಿಲಿಯನ್ ಡಾಲರ್​ಗೆ
ಅಮೆರಿಕನ್ ಡಾಲರ್ (ಸಾಂದರ್ಭಿಕ ಚಿತ್ರ)
Follow us
| Updated By: Srinivas Mata

Updated on: Oct 16, 2021 | 12:51 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಂಕಿ-ಅಂಶಗಳ ಪ್ರಕಾರ, ದೇಶದ ವಿದೇಶಿ ವಿನಿಮಯ ಸಂಗ್ರಹವು ಅಕ್ಟೋಬರ್ 8ಕ್ಕೆ ಕೊನೆಗೊಂಡ ವಾರದಲ್ಲಿ 2.039 ಬಿಲಿಯನ್ ಡಾಲರ್ ಹೆಚ್ಚಾಗಿ, 639.516 ಬಿಲಿಯನ್ ಡಾಲರ್​ಗೆ ತಲುಪಿದೆ. ಅಕ್ಟೋಬರ್ 1ಕ್ಕೆ ಕೊನೆಗೊಂಡ ಹಿಂದಿನ ವಾರದಲ್ಲಿ ಮೀಸಲು 1.169 ಬಿಲಿಯನ್ ಯುಎಸ್​ಡಿ ಕುಸಿದು, 637.477 ಬಿಲಿಯನ್ ಯುಎಸ್​ಡಿಗೆ ಇಳಿದಿತ್ತು. ಸೆಪ್ಟೆಂಬರ್ 3ಕ್ಕೆ ಕೊನೆಗೊಂಡ ವಾರದಲ್ಲಿ ಮೀಸಲು 8.895 ಬಿಲಿಯನ್ ಡಾಲರ್ ಹೆಚ್ಚಳವಾಗಿ, ಸಾರ್ವಕಾಲಿಕ ಗರಿಷ್ಠ ಮಟ್ಟವಾದ 642.453 ಬಿಲಿಯನ್ ಡಾಲರ್​ಗೆ ಏರಿಕೆಯಾಗಿತ್ತು. ಅಕ್ಟೋಬರ್ 8ಕ್ಕೆ ಕೊನೆಗೊಂಡ ವರದಿ ವಾರದಲ್ಲಿ ವಿದೇಶಿ ಕರೆನ್ಸಿ ಸ್ವತ್ತುಗಳ (ಎಫ್‌ಸಿಎ) ಹೆಚ್ಚಳದಿಂದಾಗಿ ಮೀಸಲು ಹೆಚ್ಚಳವಾಗಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಪ್ತಾಹಿಕ ದತ್ತಾಂಶವು ತೋರಿಸಿದೆ.

ಡೇಟಾದ ಪ್ರಕಾರ, ವರದಿ ವಾರದಲ್ಲಿ ಎಫ್‌ಸಿಎ 1.55 ಬಿಲಿಯನ್ ಯುಎಸ್​ಡಿ ಏರಿಕೆಯಾಗಿ 577.001 ಬಿಲಿಯನ್ ಯುಎಸ್​ಡಿ ತಲುಪಿದೆ. ಡಾಲರ್ ಪರಿಭಾಷೆಯಲ್ಲಿ ಹೇಳುವುದಾದರೆ, ಎಫ್​ಸಿಎ ವಿದೇಶಿ ವಿನಿಮಯ ಮೀಸಲುಗಳಲ್ಲಿ ಹೊಂದಿರುವ ಯುರೋ, ಪೌಂಡ್ ಮತ್ತು ಯೆನ್​ನಂತಹ ಡಾಲರ್​ಯೇತರ ಏರಿಕೆ ಅಥವಾ ಸವಕಳಿಯ ಪರಿಣಾಮವನ್ನು ಒಳಗೊಂಡಿದೆ.

ವರದಿ ವಾರದಲ್ಲಿ ಚಿನ್ನದ ನಿಕ್ಷೇಪಗಳು 464 ಮಿಲಿಯನ್ ಡಾಲರ್​ ಏರಿಕೆ ಆಗಿ, 38.022 ಬಿಲಿಯನ್ ಡಾಲರ್​ಗೆ ತಲುಪಿದೆ. ಅಂತರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವಿಶೇಷ ಡ್ರಾಯಿಂಗ್ ರೈಟ್ಸ್ (ಎಸ್​ಡಿಆರ್) 28 ಮಿಲಿಯನ್ ಡಾಲರ್ ಏರಿಕೆಯಾಗಿ, 19.268 ಬಿಲಿಯನ್​ಗೆ ತಲುಪಿದೆ. ಐಎಂಎಫ್‌ನೊಂದಿಗಿನ ದೇಶದ ಮೀಸಲು ಸ್ಥಾನವು ವರದಿ ಮಾಡುವ ವಾರದಲ್ಲಿ 3 ಮಿಲಿಯನ್ ಯುಎಸ್​ಡಿ ಇಳಿಕೆಯಾಗಿ, 5.225 ಶತಕೋಟಿ ಡಾಲರ್​ಗೆ ತಲುಪಿದೆ ಎಂದು ಡೇಟಾ ತೋರಿಸಿದೆ.

ಇದನ್ನೂ ಓದಿ: ಏಷ್ಯಾದಲ್ಲೇ ದೊಡ್ಡ ಆರ್ಥಿಕ ಶಕ್ತಿ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿಯನ್ನೂ ಹೊಗಳಿದ ಅಮೆರಿಕದ ಕಾರ್ಪೊರೇಟ್ ನಾಯಕ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್