AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಮತ್ತಷ್ಟು ಇಳಿಕೆ; 616.14 ಬಿಲಿಯನ್ ಡಾಲರ್ ತಲುಪಿದ ಫಾರೆಕ್ಸ್ ರಿಸರ್ವ್ಸ್

Foreign Exchange Reserves: ಜನವರಿ 19ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ ನಿಧಿ 616.14 ಬಿಲಿಯನ್ ಡಾಲರ್​ಗೆ ಇಳಿದಿದೆ. ಅದರ ಭಾಗವಾಗಿರುವ ಫಾರೀನ್ ಕರೆನ್ಸಿ ಆಸ್ತಿ, ಗೋಲ್ಡ್ ನಿಧಿ, ಎಸ್​ಡಿಆರ್ ಮತ್ತು ಐಎಂಎಫ್​ನೊಂದಿಗಿನ ರಿಸರ್ವ್ ಪ್ರಮಾಣ ಇವಿಷ್ಟೂ ಕೂಡ ಇಳಿಕೆಯಾಗಿವೆ.

Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಮತ್ತಷ್ಟು ಇಳಿಕೆ; 616.14 ಬಿಲಿಯನ್ ಡಾಲರ್ ತಲುಪಿದ ಫಾರೆಕ್ಸ್ ರಿಸರ್ವ್ಸ್
ಫಾರೆಕ್ಸ್ ರಿಸರ್ವ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 26, 2024 | 7:02 PM

Share

ನವದೆಹಲಿ, ಜನವರಿ 26: ಭಾರತದ ಫಾರೀನ್ ಎಕ್ಸ್​ಚೇಂಜ್ ರಿಸರ್ವ್ಸ್ (forex reserves) ಜನವರಿ 19ರಂದು ಅಂತ್ಯಗೊಂಡ ವಾರದಲ್ಲಿ 2.79 ಬಿಲಿಯನ್ ಡಾಲರ್​ನಷ್ಟು ಇಳಿಕೆಯಾಗಿದೆ. ಇದರೊಂದಿಗೆ ವಿದೇಶೀ ವಿನಿಮಯ ಮೀಸಲು ನಿಧಿ 616.14 ಬಿಲಿಯನ್ ಡಾಲರ್​ಗೆ ಇಳಿದಿರುವುದು ಆರ್​ಬಿಐ ಇಂದು ಶುಕ್ರವಾರ (ಜ. 26) ಬಿಡುಗಡೆ ಮಾಡಿದ ದತ್ತಾಂಶದಿಂದ ಗೊತ್ತಾಗಿದೆ. ಕಳೆದ ವಾರ ಫಾರೆಕ್ಸ್ ಮೀಸಲು ನಿಧಿ 1.6 ಬಿಲಿಯನ್ ಡಾಲರ್​ನಷ್ಟು ಏರಿತ್ತು.

ಜನವರಿ 19ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ ನಿಧಿಯ ಭಾಗವಾಗಿರುವ ಫಾರೀನ್ ಕರೆನ್ಸಿ ಆಸ್ತಿ, ಗೋಲ್ಡ್ ನಿಧಿ, ಎಸ್​ಡಿಆರ್ ಮತ್ತು ಐಎಂಎಫ್​ನೊಂದಿಗಿನ ರಿಸರ್ವ್ ಪ್ರಮಾಣ ಇವಿಷ್ಟೂ ಕೂಡ ಇಳಿಕೆಯಾಗಿವೆ.

ಫಾರೆಕ್ಸ್​ನ ಪ್ರಮುಖ ಭಾಗವಾಗಿರುವ ಫಾರೀನ್ ಕರೆನ್ಸಿ ಆಸ್ತಿ (FCA- Foreign Currency Asset) 2.6 ಬಿಲಿಯನ್ ಡಾಲರ್​ನಷ್ಟು ಇಳಿಕೆಯಾಗಿದೆ. ಚಿನ್ನದ ಮೀಸಲು ನಿಧಿ 34 ಮಿಲಿಯನ್​ನಷ್ಟು ತಗ್ಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್ 476 ಮಿಲಿಯನ್ ಡಾಲರ್ ಕಡಿಮೆ ಆಗಿದೆ. ಐಎಂಎಫ್ ರಿಸರ್ವ್ ಪ್ರಮಾಣ 18 ಮಿಲಿಯನ್ ಡಾಲರ್​ನಷ್ಟು ಕುಗ್ಗಿದೆ.

ಇದನ್ನೂ ಓದಿ: Krutrim Record: ಒಂದು ಬಿಲಿಯನ್ ಡಾಲರ್ ಮೌಲ್ಯದ ಭಾರತದ ಮೊದಲ ಎಐ ಕಂಪನಿ; ಓಲಾ ಸ್ಥಾಪಕರ ಹೊಸ ಸಾಹಸಕ್ಕೆ ಫಲಶೃತಿ

ಜನವರಿ 19ರಂದು ಅಂತ್ಯಗೊಂಡ ವಾರದಲ್ಲಿ ಭಾರತದ ಫಾರೆಕ್ಸ್ ರಿಸರ್ವ್ಸ್ ವಿವರ

ಒಟ್ಟು ನಿಧಿ: 616.14 ಬಿಲಿಯನ್ ಡಾಲರ್

  • ವಿದೇಶೀ ಕರೆನ್ಸಿ ಆಸ್ತಿನ (ಎಫ್​ಸಿಎ): 545.8 ಬಿಲಿಯನ್ ಡಾಲರ್
  • ಗೋಲ್ಡ್ ರಿಸರ್ವ್ಸ್: 47.2 ಬಿಲಿಯನ್ ಡಾಲರ್
  • ಸ್ಪೆಷಲ್ ಡ್ರಾಯಿಂಗ್ ರೈಟ್ಸ್: 18.2 ಬಿಲಿಯನ್ ಡಾಲರ್
  • ಐಎಂಎಫ್​ನೊಂದಿಗಿನ ನಿಧಿ: 4.85 ಬಿಲಿಯನ್ ಡಾಲರ್.

ಫಾರೀನ್ ಕರೆನ್ಸಿ ಅಸೆಟ್ಸ್ ಎಂಬುದು ಅಮೆರಿಕದ ಡಾಲರ್ ಅಲ್ಲದ ಕರೆನ್ಸಿಗಳ ಬೆಲೆಯ ಮೇಲೆ ಆಧಾರಿತವಾಗಿರುತ್ತದೆ. ಉದಾಹರಣೆಗೆ, ಭಾರತ ಹೊಂದಿರುವ ಯೂರೋ, ಪೌಂಡ್, ಯೆನ್ ಮೊದಲಾದ ಕರೆನ್ಸಿಗಳ ಮೌಲ್ಯದ ಮೊತ್ತ ಎಫ್​ಸಿಎ ಆಗಿರುತ್ತದೆ.

2021ರ ಅಕ್ಟೋಬರ್ ತಿಂಗಳಲ್ಲಿ ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ 645 ಬಿಲಿಯನ್ ಡಾಲರ್ ಮಟ್ಟ ತಲುಪಿತ್ತು. ಅದು ಭಾರತದ ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್ ನಿಧಿ ಎನಿಸಿದೆ. ಅದಾದ ಬಳಿಕ ರುಪಾಯಿ ಮೌಲ್ಯ ಕುಸಿತ ನಿಯಂತ್ರಿಸಲು ಆರ್​ಬಿಐ ಫಾರೆಕ್ಸ್ ಪೇಟೆಯಲ್ಲಿ ಒಂದಷ್ಟು ಕ್ರಮಗಳನ್ನು ಕೈಗೊಂಡ ಪರಿಣಾಮವಾಗಿ ನಿಧಿಯ ಪ್ರಮಾಣ ಕಡಿಮೆ ಆಗುತ್ತಾ ಬಂದಿತ್ತು. ಕಳೆದ ಕೆಲ ತಿಂಗಳಿಂದ ಫಾರೆಕ್ಸ್ ನಿಧಿ ತುಸು ಮೇಲೇರಿದೆ.

ಇದನ್ನೂ ಓದಿ: Sunny Leone: ಮಾಜಿ ನೀಲಿಚಿತ್ರತಾರೆ ಸನ್ನಿ ಲಿಯೋನೆ ಹೊಸ ಬಿಸಿನೆಸ್; ಚಿಕಲೋಕ ಆರಂಭ

ಸದ್ಯ ಅತಿಹೆಚ್ಚು ಫಾರೆಕ್ಸ್ ನಿಧಿ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಚೀನಾ ಅತಿಹೆಚ್ಚು ವಿದೇಶೀ ವಿನಿಮಯ ಮೀಸಲು ನಿಧಿ ಹೊಂದಿದೆ. ಜಪಾನ್, ಸ್ವಿಟ್ಜರ್​ಲ್ಯಾಂಡ್ ನಂತರದ ಸ್ಥಾನದಲ್ಲಿ ಭಾರತ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ