AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FY22 Q3 GDP: ಮೂರನೇ ತ್ರೈಮಾಸಿಕ ಜಿಡಿಪಿ ಶೇ 5.4ರಷ್ಟು ಬೆಳವಣಿಗೆ

2022ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕವಾದ ಅಕ್ಟೋಬರ್​ನಿಂದ ಡಿಸೆಂಬರ್​ಗೆ ಜಿಡಿಪಿ ಬೆಳವಣಿಗೆ ಶೇ 5.4ರಷ್ಟು ಆಗಿದೆ ಎಂದು ಸರ್ಕಾರದಿಂದ ತಿಳಿಸಲಾಗಿದೆ.

FY22 Q3 GDP: ಮೂರನೇ ತ್ರೈಮಾಸಿಕ ಜಿಡಿಪಿ ಶೇ 5.4ರಷ್ಟು ಬೆಳವಣಿಗೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 28, 2022 | 8:34 PM

Share

ಇಂದು (ಫೆಬ್ರವರಿ 28, 2022ರ ಸೋಮವಾರ) ಬಿಡುಗಡೆಯಾದ ಸರ್ಕಾರಿ ಅಂಕಿ-ಅಂಶಗಳ ಪ್ರಕಾರ 2022ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ದೇಶದ ಒಟ್ಟು ಜಿಡಿಪಿ (GDP) ಶೇ 5.4ರಷ್ಟು ಬೆಳವಣಿಗೆಯಾಗಿದೆ. ಇದು ವಿಶ್ಲೇಷಕರು ಸೂಚಿಸಿದ್ದಕ್ಕಿಂತ ಕಡಿಮೆಯಿದ್ದು, ಇದು ಶೇ 6ಕ್ಕೆ ಹತ್ತಿರವಾಗಿತ್ತು. “2021-22ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ಬೆಲೆಯಲ್ಲಿ ಜಿಡಿಪಿ 38.22 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, 2020-21ರ ಮೂರನೇ ತ್ರೈಮಾಸಿಕದಲ್ಲಿ 36.26 ಲಕ್ಷ ಕೋಟಿಗಳಷ್ಟು ಇತ್ತು, ಶೇ 5.4ರ ಬೆಳವಣಿಗೆಯನ್ನು ತೋರಿಸಿದೆ,” ಎಂದು ಸರ್ಕಾರವು ಬಿಡುಗಡೆ ಮಾಡಿದ ಅಂಕಿ- ಅಂಶದಲ್ಲಿ ತಿಳಿದುಬಂದಿದೆ.

2021-22ರ ಎರಡನೇ ತ್ರೈಮಾಸಿಕದಲ್ಲಿ ದೇಶದ ಆರ್ಥಿಕತೆಯು ಕೊರೊನಾ-ಪೂರ್ವ ಮಟ್ಟವನ್ನು ದಾಟಲು ಶೇಕಡಾ 8.4ರಷ್ಟು ವಿಸ್ತರಿಸಿದೆ. ಆದಾರೂ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯು ಹಿಂದಿನ ತ್ರೈಮಾಸಿಕದಲ್ಲಿ ಶೇ 20.1 ಶೇಕಡಾ ವಿಸ್ತರಣೆಗಿಂತ ನಿಧಾನವಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು ಇಂದು ಹಣಕಾಸು ವರ್ಷ 2021- 22ರ ಮೂರನೇ ತ್ರೈಮಾಸಿಕದ ಜಿಡಿಪಿ ಅಂದಾಜುಗಳನ್ನು ಘೋಷಿಸಿದೆ. ಎಸ್‌ಬಿಐ ಸಂಶೋಧನಾ ವರದಿಯು ಜಿಡಿಪಿಯನ್ನು ಸುಮಾರು ಶೇ 5.8 ಎಂದು ಅಂದಾಜಿಸಿದ್ದು, ಆದರೆ ಹೆಚ್ಚಿನ ವಿಶ್ಲೇಷಕರು ಜಿಡಿಪಿಯನ್ನು ಶೇ 6ರ ಸುತ್ತ ಇರಬಹುದು ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಆರ್‌ಬಿಐ ತನ್ನ ಹಣಕಾಸು ನೀತಿ ಸಭೆಯಲ್ಲಿ ಹೇಳಿರುವಂತೆ, ಮುಂದಿನ ದಿನಗಳಲ್ಲಿ, ದೇಶೀಯ ಬೆಳವಣಿಗೆ ಸಂಗತಿಗಳು ಕ್ರಮೇಣ ಸುಧಾರಿಸುತ್ತಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ನೈಜ ಜಿಡಿಪಿ ಬೆಳವಣಿಗೆಯನ್ನು 2022-23ಕ್ಕೆ ಶೇ 7.8ಕ್ಕೆ ಎಂದು ಯೋಜಿಸಲಾಗಿದೆ. ಮೊದಲನೇ ತ್ರೈಮಾಸಿಕ: 2022-23ರಲ್ಲಿ ಶೇ 17.2; ಎರಡನೇ ತ್ರೈಮಾಸಿಕದಲ್ಲಿ ಶೇ 7.0; ಮೂರನೇ ತ್ರೈಮಾಸಿಕದಲ್ಲಿ ಶೇ 4.3; ನಾಲ್ಕನೇ ತ್ರೈಮಾಸಿಕದಲ್ಲಿ ಶೇ 4.5 ಅಂದಾಜಿಸಲಾಗಿದೆ. 2022ರ ಜನವರಿಯಿಂದ ಮಾರ್ಚ್​ (2021-22 ನಾಲ್ಕನೇ ತ್ರೈಮಾಸಿಕ) ಜಿಡಿಪಿ ಅಂದಾಜುಗಳ ಮುಂದಿನ ಬಿಡುಗಡೆ (2021-22ರ ನಾಲ್ಕನೇ ತ್ರೈಮಾಸಿಕ) ಮತ್ತು 2021-22ರ ತಾತ್ಕಾಲಿಕ ವಾರ್ಷಿಕ ಅಂದಾಜು 31.05.2022ರಂದು ಬಿಡುಗಡೆ ಆಗುತ್ತದೆ.

ಇದನ್ನೂ ಓದಿ: Indian Economy: ಭಾರತದ ಆರ್ಥಿಕತೆ ಚೇತರಿಕೆಗೆ ಕಚ್ಚಾ ತೈಲ ಬೆಲೆ ಏರಿಕೆಯ ಆತಂಕ ಇದೆಯೆಂದ ಅನಂತ ನಾಗೇಶ್ವರನ್

Published On - 8:33 pm, Mon, 28 February 22

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ