AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿಡಿಪಿ ಎಲ್ಲರ ಲೆಕ್ಕಾಚಾರ ಮೀರಿಸಿದ್ದು ಹೇಗೆ? ಇಲ್ಲಿದೆ ಕೆಲ ಪ್ರಮುಖ ಕಾರಣಗಳು

India GDP Growth Factors: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್ ಆದ ಜುಲೈನಿಂದ ಸೆಪ್ಟೆಂಬರ್​ವರೆಗಿನ ಅವಧಿಯಲ್ಲಿ ಭಾರತದ ಆರ್ಥಿಕತೆ ಶೇ. 7.6ರಷ್ಟು ಬೆಳೆದಿದೆ. ಭಾರತದ ಜಿಡಿಪಿ ನಿರೀಕ್ಷೆಮೀರಿ ಬೆಳೆಯಲು ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಕೆಲವಾರು ಕ್ಷೇತ್ರಗಳು ಮತ್ತು ಸಂಗತಿಗಳು ಕಾರಣವಾಗಿವೆ. ಉತ್ಪಾದನೆ, ನಿರ್ಮಾಣ, ರಫ್ತು ಮೊದಲಾದ ಕ್ಷೇತ್ರಗಳು ಅದ್ಭುತವಾಗಿ ಬೆಳೆದಿವೆ. ಹಾಗೆಯೇ ಇತರ ಕೆಲ ಅಂಶಗಳು ಜಿಡಿಪಿಗೆ ಪುಷ್ಟಿ ಕೊಟ್ಟಿವೆ.

ಭಾರತದ ಜಿಡಿಪಿ ಎಲ್ಲರ ಲೆಕ್ಕಾಚಾರ ಮೀರಿಸಿದ್ದು ಹೇಗೆ? ಇಲ್ಲಿದೆ ಕೆಲ ಪ್ರಮುಖ ಕಾರಣಗಳು
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 01, 2023 | 1:06 PM

Share

ನವದೆಹಲಿ, ಡಿಸೆಂಬರ್ 1: ಈ ಹಣಕಾಸು ವರ್ಷದ ಎರಡನೇ ಕ್ವಾರ್ಟರ್ ಆದ ಜುಲೈನಿಂದ ಸೆಪ್ಟೆಂಬರ್​ವರೆಗಿನ ಅವಧಿಯಲ್ಲಿ ಭಾರತದ ಆರ್ಥಿಕತೆ (Indian economy) ಶೇ. 7.6ರಷ್ಟು ಬೆಳೆದಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. ಆರ್​ಬಿಐ ಸೇರಿದಂತೆ ಬಹುತೇಕ ಎಲ್ಲಾ ಸಂಸ್ಥೆಗಳ ಎಣಿಕೆ ಮತ್ತು ಲೆಕ್ಕಾಚಾರವನ್ನೂ ಮೀರಿಸುವಂತೆ ಜಿಡಿಪಿ ಬೆಳೆದಿದೆ. ಆರ್ಥಿಕ ತಜ್ಞರು ಜಿಡಿಪಿ ಶೇ. 5.8ರಿಂದ ಶೇ. 6.7ರವರೆಗೆ ಬೆಳೆಯಬಹುದು ಎಂದು ಅಂದಾಜು ಮಾಡಿದ್ದರು. ಆದರೆ, ನಿರೀಕ್ಷೆ ಮೀರುವಂತೆ ಜಿಡಿಪಿ ಹೆಚ್ಚಿದೆ. ಕಳೆದ ವರ್ಷದ ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 6.2ರಷ್ಟು ಮಾತ್ರ ಬೆಳೆದಿತ್ತು. ಈ ವರ್ಷ ಅದಕ್ಕಿಂತಲೂ ಬಹಳ ಹೆಚ್ಚು ಬೆಳೆದಿದೆ.

ಭಾರತದ ಆರ್ಥಿಕತೆ ಮೊದಲ ಕ್ವಾರ್ಟರ್​ನಲ್ಲಿ ಶೇ. 7.8ರಷ್ಟು ಬೆಳೆದಿತ್ತು. ಎರಡನೇ ಕ್ವಾರ್ಟರ್​ನಲ್ಲಿ ಶೇ. 7.6ರಷ್ಟು ಆಗಿದೆ. ಸತತ ಎರಡು ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳೆವಣಿಗೆ ಶೇ. 7ಕ್ಕಿಂತಲೂ ಹೆಚ್ಚಿರುವುದು ಗಮನಾರ್ಹ. ಭಾರತದ ಈ ಪರಿ ಬೆಳವಣಿಗೆಗೆ ಏನು ಕಾರಣ? ತಜ್ಞರು ಕೆಲ ಪ್ರಮುಖ ಕಾರಣಗಳನ್ನು ಗುರುತಿಸಿದ್ದಾರೆ.

ಉತ್ಪಾದನಾ ಕ್ಷೇತ್ರದ ಅತೀವ ಬೆಳವಣಿಗೆ

ಭಾರತದ ಜಿಡಿಪಿ ಎರಡನೇ ಕ್ವಾರ್ಟರ್​ನಲ್ಲಿ ನಿರೀಕ್ಷೆಮೀರಿ ಹೆಚ್ಚಲು ಪ್ರಮುಖ ಕಾರಣವಾಗಿದ್ದು ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರ. ಕಳೆದ ವರ್ಷದಲ್ಲಿ ಮೈನಸ್​ನಲ್ಲಿದ್ದ ಬೆಳವಣಿಗೆ ಈ ಬಾರಿ ಶೇ. 13.9ರಷ್ಟು ವೃದ್ಧಿ ಕಂಡಿದೆ. ಮೊದಲ ಕ್ವಾರ್ಟರ್​ನಲ್ಲಿ ಈ ಸೆಕ್ಟರ್ ಬೆಳೆದದ್ದು ಶೇ. 4.7ರಷ್ಟು. ಅದನ್ನೂ ಮೀರಿಸುವಂತೆ ಎರಡನೇ ಕ್ವಾರ್ಟರ್​ನಲ್ಲಿ ಉತ್ಪಾದನಾ ಕ್ಷೇತ್ರ ಮಿಂಚಿದೆ.

ಇದನ್ನೂ ಓದಿ: ಈ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆಹೆಚ್ಚಿಸಿದ ಎಸ್​ಬಿಐ ರಿಸರ್ಚ್

ನಿರ್ಮಾಣ ಕ್ಷೇತ್ರದ ಬೆಳವಣಿಗೆ

ದೇಶದ ಇನ್​ಫ್ರಾಸ್ಟ್ರಕ್ಚರ್ ವಲಯ ಗಣನೀಯ ವೃದ್ಧಿ ಕಂಡಿದೆ. ಮೈನಿಂಗ್, ಎಲೆಕ್ಟ್ರಿಸಿಟಿ, ಗ್ಯಾಸ್, ನೀರು ಸರಬರಾಜು ಹಾಗು ಇತರ ನಾಗರಿಕ ಸೇವೆಗಳು ಎರಡನೇ ತ್ರೈಮಾಸಿಕದಲ್ಲಿ ಉತ್ತಮ ಬೆಳವಣಿಗೆ ಕಂಡಿದೆ.

ಸರ್ಕಾರದ ಅನುಭೋಗ ವೆಚ್ಚ ಹೆಚ್ಚಳ (ಜಿಎಫ್​ಸಿಇ)

ಜನ ಬಳಕೆಯ ಸರಕು ಮತ್ತು ಸೇವೆಗಳನ್ನು ಸರ್ಕಾರ ನೇರವಾಗಿ ಪೂರೈಸಲು ಮಾಡುವ ವೆಚ್ಚ (ಜಿಎಫ್​ಸಿ- ಗವರ್ನ್ಮೆಂಟ್ ಫೈನಲ್ ಕನ್ಸಂಪ್ಷನ್ ಎಕ್ಸ್​ಪೆಂಡಿಚರ್) ಈ ಎರಡನೇ ಕ್ವಾರ್ಟರ್​ನಲ್ಲಿ ಎರಡಂಕಿ ವೃದ್ಧಿ ಕಂಡಿದೆ.

ಎರಡನೇ ಕ್ವಾರ್ಟರ್​ನಲ್ಲಿ ರಫ್ತು ಹೆಚ್ಚಳ

ಭಾರತದಿಂದ ರಫ್ತು ಪ್ರಮಾಣ ಗಮನಾರ್ಹವಾಗಿ ಹೆಚ್ಚಿದೆ. ಹಿಂದಿನ ತ್ರೈಮಾಸಿಕದಲ್ಲಿ ಸರಕು ಮತ್ತು ಸೇವೆಗಳ ರಫ್ತು ಶೇ. 7.7ರಷ್ಟು ಕುಸಿತ ಕಂಡಿತ್ತು. ಈ ಬಾರಿ ಶೇ. 4.3ರಷ್ಟು ಬೆಳೆದಿದೆ. ಇದೂ ಕೂಡ ನಿರೀಕ್ಷೆಮೀರಿದ ಜಿಡಿಪಿ ಸಂಖ್ಯೆ ಬರಲು ಕಾರಣವೆನ್ನಲಾಗಿದೆ.

ಇದನ್ನೂ ಓದಿ: ನಿರೀಕ್ಷೆಮೀರಿಸಿದ ಆರ್ಥಿಕ ವೃದ್ಧಿ; ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.6ರಷ್ಟು ಹೆಚ್ಚಳ; ಸರ್ಕಾರದ ನಿರೀಕ್ಷೆಗಿಂತಲೂ ಮಿಗಿಲು

ಹೂಡಿಕೆಗಳ ಹೆಚ್ಚಳ

ಭಾರತದಲ್ಲಿ ಈ ಕ್ವಾರ್ಟರ್​ನಲ್ಲಿ ಗ್ರಾಸ್ ಫಿಕ್ಸೆಡ್ ಕ್ಯಾಪಿಟಲ್ ಫಾರ್ಮೇಶನ್ (ಜಿಎಫ್​ಸಿಎಫ್) ಶೇ. 11.04ರಷ್ಟು ಬೆಳವಣಿಗೆ ಕಂಡಿದೆ. ಜಿಎಫ್​ಸಿಎಫ್ ಎಂಬುದು ದೇಶದಲ್ಲಿ ಹೂಡಿಕೆ ಚಟುವಟಿಕೆಯ ಸೂಚಕವಾಗಿದೆ. ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ಇದು 14.72 ಲಕ್ಷ ಕೋಟಿ ರೂನಷ್ಟಿತ್ತು. ಜಿಡಿಪಿಯಲ್ಲಿ ಜಿಎಫ್​ಸಿಎಫ್ ಪ್ರಮಾಣ ಶೇ. 35.3ರಷ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 1 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​