AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ದರ ಶೇ. 7.8; ಟ್ಯಾರಿಫ್ ಚಿಂತೆಯ ನಡುವೆ ಅಚ್ಚರಿ ಮೂಡಿಸಿದ ಭಾರತದ ಆರ್ಥಿಕ ಬೆಳವಣಿಗೆ

India GDP in Q1 grows by 7.8%: 2025ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ನಲ್ಲಿ ಭಾರತದ ಆರ್ಥಿಕತೆ ಶೇ. 7.8ರಷ್ಟು ಹೆಚ್ಚಿದೆ ಎಂದು ಸರ್ಕಾರದ ಅಂಕಿ ಅಂಶ ತಿಳಿಸಿದೆ. ವಿವಿಧ ಆರ್ಥಿಕ ತಜ್ಞರ ಸಮೀಕ್ಷೆಗಳಲ್ಲಿ ಮಾಡಲಾದ ಅಂದಾಜನ್ನು ಮೀರಿಸಿ ಜಿಡಿಪಿ ಬೆಳೆದಿದೆ. ಕಳೆದ ಐದು ಕ್ವಾರ್ಟರ್​ಗಳಲ್ಲೇ ಇದು ಅತ್ಯಧಿಕ ಬೆಳವಣಿಗೆ ದರ ಎನಿಸಿದೆ.

ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ದರ ಶೇ. 7.8; ಟ್ಯಾರಿಫ್ ಚಿಂತೆಯ ನಡುವೆ ಅಚ್ಚರಿ ಮೂಡಿಸಿದ ಭಾರತದ ಆರ್ಥಿಕ ಬೆಳವಣಿಗೆ
ಜಿಡಿಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 29, 2025 | 4:52 PM

Share

ನವದೆಹಲಿ, ಆಗಸ್ಟ್ 29: ಈ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಭಾರತದ ಜಿಡಿಪಿ (GDP) ಶೇ. 7.8ರಷ್ಟು ಬೆಳವಣಿಗೆ ದಾಖಲಿಸಿದೆ. ಬಹುತೇಕ ಎಲ್ಲಾ ಆರ್ಥಿಕ ತಜ್ಞರ ಅಂದಾಜುಗಳನ್ನು ಮೀರಿಸಿ ಭಾರತದ ಆರ್ಥಿಕತೆ ಬೆಳೆದಿದದೆ. ಎಕನಾಮಿಕ್ ಟೈಮ್ಸ್, ರಾಯ್ಟರ್ಸ್ ಇತ್ಯಾದಿ ಏಜೆನ್ಸಿಗಳ ಮೂಲಕ ನಡೆಸಲಾದ ಪೋಲ್​ನಲ್ಲಿ ಮೊದಲ ಕ್ವಾರ್ಟರ್​ನಲ್ಲಿ ಶೇ. 6.5ರ ಆಸುಪಾಸಿನಲ್ಲಿ ಜಿಡಿಪಿ ಬೆಳೆಯುವ ನಿರೀಕ್ಷೆ ವ್ಯಕ್ತವಾಗಿತ್ತು. ಆದರೆ, ಎಲ್ಲರ ಲೆಕ್ಕಾಚಾರ ತಲೆಕೆಳಗಾಗುವಂತೆ ಶೇ. 7.8ರಷ್ಟು ಏರಿರುವುದು ಗಮನಾರ್ಹ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್​ಎಸ್​ಒ) ಶುಕ್ರವಾರ ಬಿಡುಗಡೆ ಮಾಡಿದ ದತ್ತಾಂಶದಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

ಹಿಂದಿನ ವರ್ಷದ ಇದೇ ಕ್ವಾರ್ಟರ್​ನಲ್ಲಿ (2024ರ ಏಪ್ರಿಲ್​ನಿಂದ ಜೂನ್) ಜಿಡಿಪಿ ಶೇ. 6.5ರಷ್ಟು ಹೆಚ್ಚಿತ್ತು. ಈ ಬಾರಿ ಅದು ಶೇ. 7.8ರಷ್ಟು ಬೆಳೆದಿರುವುದು ಕಂಡುಬಂದಿದೆ. ನಾಮಿನಲ್ ಜಿಡಿಪಿ ಶೇ. 8.8ರಷ್ಟು ಹೆಚ್ಚಿದೆ ಎಂದು ಎನ್​ಎಸ್​ಒ ದತ್ತಾಂಶದಿಂದ ತಿಳಿದುಬಂದಿದೆ. ಭಾರತ ದಾಖಲಿಸಿರುವ ಜಿಡಿಪಿ ದರವು ಕಳೆದ ಐದು ಕ್ವಾರ್ಟರ್​ಗಳಲ್ಲೇ ಅತ್ಯಧಿಕ ಎನಿಸಿದೆ.

ಇದನ್ನೂ ಓದಿ: ಟ್ರಂಪ್ ಟ್ಯಾರಿಫ್​ನಿಂದ ಕಳೆದುಕೊಳ್ಳೋದು 0.5, ಗಳಿಸೋದು 2-3 ಪರ್ಸೆಂಟ್: ಪ್ರೊ| ಮಾಧವ್ ನಲಪತ್

ಭಾರತದ ಮೇಲೆ ಅಮೆರಿಕ ಟ್ಯಾರಿಫ್ ಹೇರುವ ಮುಂಚಿನ ಅವಧಿಯಲ್ಲಿ ದಾಖಲಾದ ಆರ್ಥಿಕ ಬೆಳವಣಿಗೆ ಇದು. ಆಗಸ್ಟ್ ಮೊದಲ ವಾರದಲ್ಲಿ ಶೇ. 25ರಷ್ಟು ಟ್ಯಾರಿಫ್ ಜಾರಿಗೆ ಬಂದಿದೆ. ಆಗಸ್ಟ್ 27ರಿಂದ ಒಟ್ಟು ಶೇ. 50ರಷ್ಟು ಟ್ಯಾರಿಫ್ ಜಾರಿಯಲ್ಲಿದೆ. ಈ ಟ್ಯಾರಿಫ್ ಪರಿಣಾಮ ಏನು ಎಂಬುದರ ಮುನ್ಸೂಚನೆಯು ಎರಡನೇ ಕ್ವಾರ್ಟರ್​ನಲ್ಲಿ ಸಿಗಬಹುದು.

ಮೊದಲ ಕ್ವಾರ್ಟರ್​ನಲ್ಲಿ ಯಾವ್ಯಾವ ಸೆಕ್ಟರ್​ಗಳ ಬೆಳವಣಿಗೆ ಹೇಗೆ?

ಪ್ರೈಮರಿ ಸೆಕ್ಟರ್​ಗಳಲ್ಲಿರುವ ಕೃಷಿ ಹಾಗೂ ಮೈನಿಂಗ್ ಭಿನ್ನ ಬೆಳವಣಿಗೆ ದಾಖಲಿಸಿವೆ. ಕೃಷಿ ಸಂಬಂಧಿತ ಕ್ಷೇತ್ರವು ಶೇ. 3.7ರಷ್ಟು ಬೆಳವಣಿಗೆ ಕಂಡಿದೆ. ಹಿಂದಿನ ವರ್ಷದಲ್ಲಿ ಈ ಸೆಕ್ಟರ್ ಶೇ. 1.5 ಮಾತ್ರವೇ ಹಿಗ್ಗಿತ್ತು.

ಇನ್ನು, ಪ್ರೈಮರಿ ಸೆಕ್ಟರ್​ಗೆ ಸೇರಿದ ಮೈನಿಂಗ್ ವಲಯ ಹಿನ್ನಡೆ ಕಂಡಿದೆ. 2024-25ರ ಮೊದಲ ಕ್ವಾರ್ಟರ್​ನಲ್ಲಿ ಶೇ. 6.6ರಷ್ಟು ಬೆಳೆದಿದ್ದ ಮೈನಿಂಗ್ ಸೆಕ್ಟರ್ ಈ ಬಾರಿ ಮೈನಸ್ 3.1ರಷ್ಟು ಕುಸಿತ ಕಂಡಿದೆ.

ಇದನ್ನೂ ಓದಿ: 2038ಕ್ಕೆ ಆರ್ಥಿಕ ಶಕ್ತಿಯಲ್ಲಿ ಅಮೆರಿಕವನ್ನೇ ಮೀರಲಿಸದೆ ಭಾರತ: ಐಎಂಎಫ್ ಅಂದಾಜು

ವಿದ್ಯುತ್, ಗ್ಯಾಸ್, ನೀರು ಸರಬರಾಜು ಮತ್ತಿತರ ಯುಟಿಲಿಟಿ ಸರ್ವಿಸ್ ಕ್ಷೇತ್ರದ ಬೆಳವಣಿಗೆ ಕೂಡ ಶೇ. 10.2ರಿಂದ ಶೇ. 0.5ಕ್ಕೆ ಕುಸಿದಿದೆ. ಕಟ್ಟಡ ನಿರ್ಮಾಣ ಕ್ಷೇತ್ರ ಕೂಡ ಹಿನ್ನಡೆ ಕಂಡಿದೆ. ಆದರೆ, ಮ್ಯಾನುಫ್ಯಾಕ್ಚರಿಂಗ್, ಹೋಟೆಲ್, ಸಾರಿಗೆ, ಸಂವಹನ ಇತ್ಯಾದಿ ಸಂಬಂಧಿತ ಕ್ಷೇತ್ರ, ಹಣಕಾಸು, ರಿಯಲ್ ಎಸ್ಟೇಟ್, ಡಿಫೆನ್ಸ್ ಮತ್ತಿತರ ಸೆಕ್ಟರ್​ಗಳು ಪಾಸಿಟಿವ್ ಬೆಳವಣಿಗೆ ದಾಖಲಿಸಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ