AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ಬೆಳೆಯುವ ಸಾಧ್ಯತೆ

India GDP Growth: 2023-24ರ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಶೇ. 8ರಷ್ಟು ಜಿಡಿಪಿ ಬೆಳೆಯಬಹುದು ಎಂದು ಆರ್​ಬಿಐ ಮಾಡಿದ್ದ ಅಂದಾಜಿಗಿಂತಲೂ ಹೆಚ್ಚು ವೃದ್ಧಿ ಕಾಣುವ ಸಾಧ್ಯತೆ ಇದೆ. ಏಪ್ರಿಲ್​ನಿಂದ ಜೂನ್​ವರೆಗಿನ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 8.3 ಮತ್ತು ಶೇ. 8.5ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ಮತ್ತು ಐಸಿಆರ್​ಎ ಸಂಸ್ಥೆಗಳ ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಮೊದಲ ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಆರ್​ಬಿಐ ಅಂದಾಜಿಗಿಂತಲೂ ಹೆಚ್ಚು ಬೆಳೆಯುವ ಸಾಧ್ಯತೆ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 23, 2023 | 4:21 PM

Share

ನವದೆಹಲಿ, ಆಗಸ್ಟ್ 23: ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ (2023ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್) ಭಾರತದ ಜಿಡಿಪಿ (India GDP Growth) ನಿರೀಕ್ಷೆಮೀರಿ ಹೆಚ್ಚು ವೇಗದಲ್ಲಿ ವೃದ್ಧಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಈ ತಿಂಗಳು ಆರ್​ಬಿಐ ನಡೆಸಿದ ಎಂಪಿಸಿ ಸಭೆಯಲ್ಲಿ ಜೂನ್ ಅಂತ್ಯದ ಕ್ವಾರ್ಟರ್​ನಲ್ಲಿ ಆರ್ಥಿಕತೆ ಶೇ. 8ರಷ್ಟು ಬೆಳೆಯಬಹುದು ಎಂಬ ಅಂದಾಜನ್ನು ಪುನರುಚ್ಚರಿಸಿತ್ತು. ಆದರೆ, ಐಸಿಆರ್​ಎ ಎಂಬ ಕ್ರೆಡಿಟ್ ರೇಟಿಂಗ್ ಏಜೆನ್ಸಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಥಿಕತಜ್ಞರು (Economists) ದೇಶದ ಜಿಡಿಪಿ ಶೇ. 8ಕ್ಕಿಂತಲೂ ಹೆಚ್ಚು ವೇಗದಲ್ಲಿ ಬೆಳೆಯುವ ಸಾಧ್ಯತೆಯನ್ನು ಕಂಡಿದ್ದಾರೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.3ರಷ್ಟು ಬೆಳೆಯಬಹುದು ಎಂದು ಎಸ್​ಬಿಐ ಅಂದಾಜು ಮಾಡಿದರೆ, ಐಸಿಆರ್​ಎನ ಆರ್ಥಿಕ ತಜ್ಞರ ಅನಿಸಿಕೆ ಪ್ರಕಾರ ಜಿಡಿಪಿ ಶೇ. 8.5ರಷ್ಟು ಹೆಚ್ಚಬಹುದು.

ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್​ನಲ್ಲಿ ಜಾಗತಿಕ ಆರ್ಥಿಕ ಚಟುವಟಿಕೆ ನಿರೀಕ್ಷೆಗಿಂತ ಉತ್ತಮವಾಗಿದೆ. ಇದರಿಂದ ಸರ್ವಿಸ್ ಸೆಕ್ಟರ್​ಗೆ ಪುಷ್ಟಿ ಸಿಕ್ಕಿದೆ. ಈ ಸೇವಾ ವಲಯವು ಭಾರತದ ಆರ್ಥಿಕತೆಯನ್ನು ಮುನ್ನಡೆಸುತ್ತಿರುವುದು ಈ ಕ್ವಾರ್ಟರ್​ನಲ್ಲಿ ಆರ್ಥಿಕ ತಜ್ಞರಿಗೆ ಕಂಡು ಬಂದಿರುವ ಸಂಗತಿ.

ಇದನ್ನೂ ಓದಿ: ಚೀನಾದ ಆರ್ಥಿಕ ಪತನ ಶುರುವಾಗಿದ್ದ ಕೋವಿಡ್​ನಿಂದಲ್ಲ; 15 ವರ್ಷದ ಹಿಂದೆಯೇ ಆರಂಭವಾಗಿದ್ದವಾ ಚೀನೀ ದುರ್ದಿನಗಳು?

ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆಯು ಜಾಗತಿಕ ಆರ್ಥಿಕತೆಯ ಬೆಳವಣಿಗೆ ಶೇ. 3.5ರಿಂದ ಶೇ. 3ಕ್ಕೆ ಕುಸಿಯಬಹುದು ಎಂದು ಅಂದಾಜು ಮಾಡಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಗ್ಲೋಬಲ್ ಎಕನಾಮಿ ಗಮನಾರ್ಹ ರೀತಿಯಲ್ಲಿ ಸೆಟೆದು ನಿಂತಿದೆ. ಹೀಗಾಗಿ, ಸೇವಾ ವಲಯ ಗರಿಗೆದರಿದೆ. ಈ ಕ್ಷೇತ್ರದಲ್ಲಿ ಭಾರತ ಪ್ರಬಲವಾಗಿರುವುದು ಇಲ್ಲಿನ ಜಿಡಿಪಿ ವೃದ್ಧಿ ನಿಟ್ಟಿನಲ್ಲಿ ವರದಾನವಾಗಿ ಪರಿಣಮಿಸಿದೆ.

ಭಾರತದ ಜಿಡಿಪಿಯನ್ನು ಬೆಳೆಸುತ್ತಿರುವುದು ಜಾಗತಿಕ ಆರ್ಥಿಕ ಚೇತರಿಕೆ ಸ್ಥಿತಿ ಮಾತ್ರವಲ್ಲ, ಸಾಕಷ್ಟು ಬಂಡವಾಳ ಹೂಡಿಕೆಗಳು ಫಲ ಕೊಡುತ್ತಿವೆ. ಅದರಲ್ಲೂ ಸರ್ಕಾರದಿಂದಲೇ ಆಗುತ್ತಿರುವ ಬಂಡವಾಳ ವೆಚ್ಚವು ಆರ್ಥಿಕತೆಯನ್ನು ಎತ್ತಿ ಮುನ್ನುಗ್ಗಿಸುತ್ತಿದೆ.

ಇದನ್ನೂ ಓದಿ: ಅದಾನಿ ಕಂಪನಿಗೆ ದಂಡ ವಿಧಿಸಿದ ಸ್ಟಾಕ್ ವಿನಿಮಯ ಕೇಂದ್ರಗಳು; ಕ್ರಮ ಒಪ್ಪದ ಅದಾನಿ ಎಂಟರ್ಪ್ರೈಸಸ್; ಏನು ಕಾರಣ?

ಐಸಿಆರ್​ಎನ ಮುಖ್ಯ ಆರ್ಥಿಕತಜ್ಞೆ ಅದಿತಿ ನಾಯರ್ ಹಾಗೂ ಎಸ್​ಬಿಐನ ಮುಖ್ಯ ಆರ್ಥಿಕ ಸಲಹೆಗಾರ್ತಿ ಸೌಮ್ಯಾ ಕಾಂತಿ ಘೋಷ್ ಬಹುತೇಕ ಅದೇ ಅಭಿಪ್ರಾಯ ಪುನರುಚ್ಚರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್