ವೈಮಾನಿಕ ಕ್ಷೇತ್ರಕ್ಕೆ ಹೋಗುವ ಒಂದು ರೂ ಹಣದಿಂದ ಆರ್ಥಿಕತೆಗೆ 3 ಪಟ್ಟು ಲಾಭವಾ? ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ವಿಶ್ಲೇಷಣೆ

Indigo CEO Pieter Elbers Speaks: ಎಐಎಂಎನ 50ನೇ ನ್ಯಾಷನಲ್ ಮ್ಯಾನೇಜ್ಮೆಂಟ್ ಕನ್ವೆನ್ಷನ್​ನಲ್ಲಿ ಮಾತನಾಡುತ್ತಿದ್ದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್, ಚೀನಾ ಮತ್ತು ಭಾರತದ ವೈಮಾನಿಕ ಪ್ರಮಾಣವನ್ನು ಹೋಲಿಕೆ ಮಾಡಿದ್ದಾರೆ. 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ 750 ವಿಮಾನಗಳು ಮಾತ್ರವೇ ಇದೆ. ಇಷ್ಟೇ ಜನಸಂಖ್ಯೆ ಇರುವ ಚೀನಾ ಬಳಿ 3,500 ವಿಮಾನಗಳಿವೆ ಎಂದು ಅವರು ಹೇಳಿದ್ದಾರೆ. ಇಂಡಿಗೋ ಸಿಇಒ ಅವರು ದೇಶದ ಪ್ರಗತಿ ಮತ್ತು ವೈಮಾನಿಕ ಕ್ಷೇತ್ರದ ಪ್ರಗತಿ ನಡುವೆ ನೇರ ಸಂಬಂಧ ಇರುವುದನ್ನು ತಿಳಿಸಿದ್ದಾರೆ. ಹಾಗೆಯೇ, ಏವಿಯೇಶನ್ ಉದ್ಯಮದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ.

ವೈಮಾನಿಕ ಕ್ಷೇತ್ರಕ್ಕೆ ಹೋಗುವ ಒಂದು ರೂ ಹಣದಿಂದ ಆರ್ಥಿಕತೆಗೆ 3 ಪಟ್ಟು ಲಾಭವಾ? ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ವಿಶ್ಲೇಷಣೆ
ವಿಮಾನ
Follow us
|

Updated on: Sep 26, 2023 | 6:03 PM

ನವದೆಹಲಿ, ಸೆಪ್ಟೆಂಬರ್ 26: ಭಾರತದ ವೈಮಾನಿಕ ಕಂಪನಿಗಳು ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದರೂ ಆ ಕ್ಷೇತ್ರ ಮಾತ್ರ ಉಜ್ವಲವಾಗಿ ಬೆಳೆಯುತ್ತಿದೆ. ಇತ್ತೀಚೆಗೆ ಭಾರತದ ಎರಡು ಏರ್​ಲೈನ್ ಸಂಸ್ಥೆಗಳು ಭರಪೂರವಾಗಿ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿವೆ. ಭಾರತದ ಅತಿದೊಡ್ಡ ಏರ್​ಲೈನ್ ಕಂಪನಿಗಳಲ್ಲಿ ಒಂದಾದ ಇಂಡಿಗೋ ಏರ್​ಲೈನ್ಸ್​ನ ಸಿಇಒ ಪೀಟರ್ ಎಲ್ಬರ್ಸ್ (Indigo CEO Pieter Elbers) ಈ ವೇಳೆ ಕೆಲ ಕುತೂಹಲ ವಿಚಾರಗಳನ್ನು ತಿಳಿಸಿದ್ದಾರೆ. ಅವರ ಪ್ರಕಾರ ಭಾರತದ ವೈಮಾನಿಕ ಕ್ಷೇತ್ರಕ್ಕೆ (aviation sector) ಉಜ್ವಲ ಭವಿಷ್ಯ ಇದೆ. ಹಾಗೆಯೇ, ವೈಮಾನಿಕ ಉದ್ಯಮದ ಏಳಿಗೆಗೂ ದೇಶದ ಆರ್ಥಿಕ ಬೆಳವಣಿಗೆಗೂ ನೇರ ಲಿಂಕ್ ಇದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಐಎಂಎನ 50ನೇ ನ್ಯಾಷನಲ್ ಮ್ಯಾನೇಜ್ಮೆಂಟ್ ಕನ್ವೆನ್ಷನ್​ನಲ್ಲಿ ಮಾತನಾಡುತ್ತಿದ್ದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್, ಚೀನಾ ಮತ್ತು ಭಾರತದ ವೈಮಾನಿಕ ಪ್ರಮಾಣವನ್ನು ಹೋಲಿಕೆ ಮಾಡಿದ್ದಾರೆ. 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ 750 ವಿಮಾನಗಳು ಮಾತ್ರವೇ ಇದೆ. ಇಷ್ಟೇ ಜನಸಂಖ್ಯೆ ಇರುವ ಚೀನಾ ಬಳಿ 3,500 ವಿಮಾನಗಳಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 30ರವರೆಗೂ ಡೆಡ್​ಲೈನ್ ಇರುವ ಹಣಕಾಸು ಕಾರ್ಯಗಳಿವು; ತಪ್ಪದೇ ಮಾಡಿ

ಕುತೂಹಲ ಎಂದರೆ ಸುಮಾರು 30 ಕೋಟಿಗಿಂತ ತುಸು ಹೆಚ್ಚು ಜನಸಂಖ್ಯೆ ಇರುವ ಅಮೆರಿಕದಲ್ಲಿ ಕಮರ್ಷಿಯಲ್ ವಿಮಾನಗಳ ಸಂಖ್ಯೆ 5,000 ಕ್ಕಿಂತಲೂ ಹೆಚ್ಚು. ಇನ್ನು, ಪಾಕಿಸ್ತಾನದಲ್ಲಿ ಸಂಖ್ಯೆ 100 ದಾಟಿಲ್ಲ.

ವೈಮಾನಿಕ ಶಕ್ತಿ ಬಲವಾದರೆ ಆರ್ಥಿಕತೆಗೆ ಬಲ

ಇಂಡಿಗೋ ಸಿಇಒ ಅವರು ದೇಶದ ಪ್ರಗತಿ ಮತ್ತು ವೈಮಾನಿಕ ಕ್ಷೇತ್ರದ ಪ್ರಗತಿ ನಡುವೆ ನೇರ ಸಂಬಂಧ ಇರುವುದನ್ನು ತಿಳಿಸಿದ್ದಾರೆ. ಹಾಗೆಯೇ, ಏವಿಯೇಶನ್ ಉದ್ಯಮದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್ 14ರ ಭಾರತ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್; ದುಬಾರಿ ಆಯ್ತು ಅಹ್ಮದಾಬಾದ್ ಫ್ಲೈಟ್ ಟಿಕೆಟ್

ವೈಮಾನಿಕ ಕ್ಷೇತ್ರಕ್ಕೆ ಮಾಡುವ ಒಂದೊಂದು ರುಪಾಯಿ ಹೂಡಿಕೆಯಿಂದಲೂ ಒಟ್ಟಾರೆ ಆರ್ಥಿಕತೆಗೆ 3.1 ರೂನಷ್ಟು ರಿಟರ್ನ್ ನೀಡುತ್ತದೆ ಎಂದು ಹೇಳುವ ಪೀಟರ್ ಎಲ್ಬರ್ಸ್, ಇದೆ ಕಾರಣಕ್ಕೆ ಭಾರತ ಸರ್ಕಾರ ವೈಮಾನಿಕ ಉದ್ಯಮವನ್ನು ಬೆಳೆಸಲು ಆಸಕ್ತಿ ತೋರುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವೈಮಾನಿಕ ಕ್ಷೇತ್ರದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂದು ವಿವರಿಸಿದ ಅವರು, ಒಂದು ವಿಮಾನದಿಂದ 100 ನೇರ ಉದ್ಯೋಗ ಹಾಗೂ ಇತರ 600 ಸಂಬಂಧಿತ ಉದ್ಯೋಗಗಳು ಸೃಷ್ಟಿ ಆಗುತ್ತವೆ. ಭಾರತದಲ್ಲಿ ಶೇ. 8-9ರಷ್ಟು ಮಂದಿ ಪಾಸ್​ಪೋರ್ಟ್ ಹೊಂದಿದ್ದು, ಇವರೆಲ್ಲರೂ ಕೂಡ ವಿದೇಶಗಳಿಗೆ ಪ್ರಯಾಣ ಮಾಡುವ ಆಸೆಯಲ್ಲಿದ್ದಾರೆ. ಭಾರತವು ಜಾಗತಿಕ ಏವಿಯೇಶನ್ ಹಬ್ ಆಗುವ ಅವಕಾಶ ಇದೆ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ