AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಮಾನಿಕ ಕ್ಷೇತ್ರಕ್ಕೆ ಹೋಗುವ ಒಂದು ರೂ ಹಣದಿಂದ ಆರ್ಥಿಕತೆಗೆ 3 ಪಟ್ಟು ಲಾಭವಾ? ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ವಿಶ್ಲೇಷಣೆ

Indigo CEO Pieter Elbers Speaks: ಎಐಎಂಎನ 50ನೇ ನ್ಯಾಷನಲ್ ಮ್ಯಾನೇಜ್ಮೆಂಟ್ ಕನ್ವೆನ್ಷನ್​ನಲ್ಲಿ ಮಾತನಾಡುತ್ತಿದ್ದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್, ಚೀನಾ ಮತ್ತು ಭಾರತದ ವೈಮಾನಿಕ ಪ್ರಮಾಣವನ್ನು ಹೋಲಿಕೆ ಮಾಡಿದ್ದಾರೆ. 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ 750 ವಿಮಾನಗಳು ಮಾತ್ರವೇ ಇದೆ. ಇಷ್ಟೇ ಜನಸಂಖ್ಯೆ ಇರುವ ಚೀನಾ ಬಳಿ 3,500 ವಿಮಾನಗಳಿವೆ ಎಂದು ಅವರು ಹೇಳಿದ್ದಾರೆ. ಇಂಡಿಗೋ ಸಿಇಒ ಅವರು ದೇಶದ ಪ್ರಗತಿ ಮತ್ತು ವೈಮಾನಿಕ ಕ್ಷೇತ್ರದ ಪ್ರಗತಿ ನಡುವೆ ನೇರ ಸಂಬಂಧ ಇರುವುದನ್ನು ತಿಳಿಸಿದ್ದಾರೆ. ಹಾಗೆಯೇ, ಏವಿಯೇಶನ್ ಉದ್ಯಮದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ.

ವೈಮಾನಿಕ ಕ್ಷೇತ್ರಕ್ಕೆ ಹೋಗುವ ಒಂದು ರೂ ಹಣದಿಂದ ಆರ್ಥಿಕತೆಗೆ 3 ಪಟ್ಟು ಲಾಭವಾ? ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ವಿಶ್ಲೇಷಣೆ
ವಿಮಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2023 | 6:03 PM

Share

ನವದೆಹಲಿ, ಸೆಪ್ಟೆಂಬರ್ 26: ಭಾರತದ ವೈಮಾನಿಕ ಕಂಪನಿಗಳು ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದರೂ ಆ ಕ್ಷೇತ್ರ ಮಾತ್ರ ಉಜ್ವಲವಾಗಿ ಬೆಳೆಯುತ್ತಿದೆ. ಇತ್ತೀಚೆಗೆ ಭಾರತದ ಎರಡು ಏರ್​ಲೈನ್ ಸಂಸ್ಥೆಗಳು ಭರಪೂರವಾಗಿ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿವೆ. ಭಾರತದ ಅತಿದೊಡ್ಡ ಏರ್​ಲೈನ್ ಕಂಪನಿಗಳಲ್ಲಿ ಒಂದಾದ ಇಂಡಿಗೋ ಏರ್​ಲೈನ್ಸ್​ನ ಸಿಇಒ ಪೀಟರ್ ಎಲ್ಬರ್ಸ್ (Indigo CEO Pieter Elbers) ಈ ವೇಳೆ ಕೆಲ ಕುತೂಹಲ ವಿಚಾರಗಳನ್ನು ತಿಳಿಸಿದ್ದಾರೆ. ಅವರ ಪ್ರಕಾರ ಭಾರತದ ವೈಮಾನಿಕ ಕ್ಷೇತ್ರಕ್ಕೆ (aviation sector) ಉಜ್ವಲ ಭವಿಷ್ಯ ಇದೆ. ಹಾಗೆಯೇ, ವೈಮಾನಿಕ ಉದ್ಯಮದ ಏಳಿಗೆಗೂ ದೇಶದ ಆರ್ಥಿಕ ಬೆಳವಣಿಗೆಗೂ ನೇರ ಲಿಂಕ್ ಇದೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಐಎಂಎನ 50ನೇ ನ್ಯಾಷನಲ್ ಮ್ಯಾನೇಜ್ಮೆಂಟ್ ಕನ್ವೆನ್ಷನ್​ನಲ್ಲಿ ಮಾತನಾಡುತ್ತಿದ್ದ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್, ಚೀನಾ ಮತ್ತು ಭಾರತದ ವೈಮಾನಿಕ ಪ್ರಮಾಣವನ್ನು ಹೋಲಿಕೆ ಮಾಡಿದ್ದಾರೆ. 140 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ 750 ವಿಮಾನಗಳು ಮಾತ್ರವೇ ಇದೆ. ಇಷ್ಟೇ ಜನಸಂಖ್ಯೆ ಇರುವ ಚೀನಾ ಬಳಿ 3,500 ವಿಮಾನಗಳಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೆಪ್ಟೆಂಬರ್ 30ರವರೆಗೂ ಡೆಡ್​ಲೈನ್ ಇರುವ ಹಣಕಾಸು ಕಾರ್ಯಗಳಿವು; ತಪ್ಪದೇ ಮಾಡಿ

ಕುತೂಹಲ ಎಂದರೆ ಸುಮಾರು 30 ಕೋಟಿಗಿಂತ ತುಸು ಹೆಚ್ಚು ಜನಸಂಖ್ಯೆ ಇರುವ ಅಮೆರಿಕದಲ್ಲಿ ಕಮರ್ಷಿಯಲ್ ವಿಮಾನಗಳ ಸಂಖ್ಯೆ 5,000 ಕ್ಕಿಂತಲೂ ಹೆಚ್ಚು. ಇನ್ನು, ಪಾಕಿಸ್ತಾನದಲ್ಲಿ ಸಂಖ್ಯೆ 100 ದಾಟಿಲ್ಲ.

ವೈಮಾನಿಕ ಶಕ್ತಿ ಬಲವಾದರೆ ಆರ್ಥಿಕತೆಗೆ ಬಲ

ಇಂಡಿಗೋ ಸಿಇಒ ಅವರು ದೇಶದ ಪ್ರಗತಿ ಮತ್ತು ವೈಮಾನಿಕ ಕ್ಷೇತ್ರದ ಪ್ರಗತಿ ನಡುವೆ ನೇರ ಸಂಬಂಧ ಇರುವುದನ್ನು ತಿಳಿಸಿದ್ದಾರೆ. ಹಾಗೆಯೇ, ಏವಿಯೇಶನ್ ಉದ್ಯಮದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂಬುದನ್ನೂ ವಿವರಿಸಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್ 14ರ ಭಾರತ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್; ದುಬಾರಿ ಆಯ್ತು ಅಹ್ಮದಾಬಾದ್ ಫ್ಲೈಟ್ ಟಿಕೆಟ್

ವೈಮಾನಿಕ ಕ್ಷೇತ್ರಕ್ಕೆ ಮಾಡುವ ಒಂದೊಂದು ರುಪಾಯಿ ಹೂಡಿಕೆಯಿಂದಲೂ ಒಟ್ಟಾರೆ ಆರ್ಥಿಕತೆಗೆ 3.1 ರೂನಷ್ಟು ರಿಟರ್ನ್ ನೀಡುತ್ತದೆ ಎಂದು ಹೇಳುವ ಪೀಟರ್ ಎಲ್ಬರ್ಸ್, ಇದೆ ಕಾರಣಕ್ಕೆ ಭಾರತ ಸರ್ಕಾರ ವೈಮಾನಿಕ ಉದ್ಯಮವನ್ನು ಬೆಳೆಸಲು ಆಸಕ್ತಿ ತೋರುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವೈಮಾನಿಕ ಕ್ಷೇತ್ರದಿಂದ ಆರ್ಥಿಕತೆಗೆ ಹೇಗೆ ಲಾಭ ಆಗುತ್ತದೆ ಎಂದು ವಿವರಿಸಿದ ಅವರು, ಒಂದು ವಿಮಾನದಿಂದ 100 ನೇರ ಉದ್ಯೋಗ ಹಾಗೂ ಇತರ 600 ಸಂಬಂಧಿತ ಉದ್ಯೋಗಗಳು ಸೃಷ್ಟಿ ಆಗುತ್ತವೆ. ಭಾರತದಲ್ಲಿ ಶೇ. 8-9ರಷ್ಟು ಮಂದಿ ಪಾಸ್​ಪೋರ್ಟ್ ಹೊಂದಿದ್ದು, ಇವರೆಲ್ಲರೂ ಕೂಡ ವಿದೇಶಗಳಿಗೆ ಪ್ರಯಾಣ ಮಾಡುವ ಆಸೆಯಲ್ಲಿದ್ದಾರೆ. ಭಾರತವು ಜಾಗತಿಕ ಏವಿಯೇಶನ್ ಹಬ್ ಆಗುವ ಅವಕಾಶ ಇದೆ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು