AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫ್ತು ಕ್ಷೇತ್ರದಲ್ಲಿ ಭಾರತವನ್ನು ಹಿಂದಿಕ್ಕುತ್ತಿವೆ ವಿಯೆಟ್ನಾಂ, ಬಾಂಗ್ಲಾದಂಥ ಸಣ್ಣ ಪುಟ್ಟ ದೇಶಗಳು: ವಿಶ್ವಬ್ಯಾಂಕ್ ವರದಿ

Manufacturing sectors India vs Bangla vs Vietnam: ಜವಳಿ, ಲೆದರ್ ಮತ್ತು ಉಡುಪು ಉತ್ಪನ್ನಗಳ ರಫ್ತಿನಲ್ಲಿ ವಿಯೆಟ್ನಾಂ, ಬಾಂಗ್ಲಾದಂಥ ಸಣ್ಣ ದೇಶಗಳು ಭಾರತವನ್ನು ಹಿಂದಿಕ್ಕುತ್ತಿವೆ. ಚೀನಾ ಪ್ಲಸ್ ನೀತಿಯ ಲಾಭ ಪಡೆಯಲು ಭಾರತ ವಿಫಲವಾಗಿದ ಎನ್ನುವ ಸಂಗತಿಯನ್ನು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ. ಈ ಮೇಲಿನ ಉತ್ಪನ್ನಗಳ ರಫ್ತಿನಲ್ಲಿ ಭಾರತದ ಜಾಗತಿಕ ಪಾಲು ಹತ್ತು ವರ್ಷಗಳಿಂದ ಕಡಿಮೆ ಆಗುತ್ತಾ ಬಂದಿದೆ.

ರಫ್ತು ಕ್ಷೇತ್ರದಲ್ಲಿ ಭಾರತವನ್ನು ಹಿಂದಿಕ್ಕುತ್ತಿವೆ ವಿಯೆಟ್ನಾಂ, ಬಾಂಗ್ಲಾದಂಥ ಸಣ್ಣ ಪುಟ್ಟ ದೇಶಗಳು: ವಿಶ್ವಬ್ಯಾಂಕ್ ವರದಿ
ರಫ್ತು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 04, 2024 | 4:00 PM

Share

ನವದೆಹಲಿ, ಸೆಪ್ಟೆಂಬರ್ 4: ಭಾರತದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಹೊಂದುತ್ತಿದೆಯಾದರೂ ಅದರ ಜಾಗತಿಕ ವ್ಯಾಪಾರ ಪಾಲು ಮಾತ್ರ ಹೆಚ್ಚುತ್ತಿಲ್ಲ. ಬಾಂಗ್ಲಾದೇಶ, ವಿಯೆಟ್ನಾಂ ಮೊದಲಾದ ದೇಶಗಳು ಮ್ಯಾನುಫ್ಯಾಕ್ಚರಿಂಗ್ ಉತ್ಪನ್ನಗಳ ರಫ್ತಿನಲ್ಲಿ ಭಾರತವನ್ನು ಹಿಂದಿಕ್ಕುತ್ತಿವೆ ಎಂದು ವಿಶ್ವ ಬ್ಯಾಂಕ್ ವರದಿಯಲ್ಲಿ ಹೇಳಿದೆ. ಜಿಡಿಪಿಗೆ ಪ್ರತಿಶತವಾಗಿ ಸರಕು ಮತ್ತು ಸೇವೆಗಳ ಪ್ರಮಾಣ ಕಳೆದ ಒಂದು ದಶಕದಲ್ಲಿ ಕಡಿಮೆ ಆಗುತ್ತಾ ಬಂದಿದೆ ಎನ್ನುವ ಸಂಗತಿ ವಿಶ್ವ ಬ್ಯಾಂಕ್ ವರದಿಯಲ್ಲಿ ವ್ಯಕ್ತವಾಗಿದೆ.

ಲೆದರ್, ಜವಳಿ, ಉಡುಪು, ಪಾದರಕ್ಷೆಗಳ ರಫ್ತಿನಲ್ಲಿ ಭಾರತದ ಜಾಗತಿಕ ಪಾಲು 2002ರಲ್ಲಿ ಶೇ. 0.9ರಷ್ಟಿತ್ತು. 2013ರಲ್ಲಿ ಅದು ಶೇ. 4.5ಕ್ಕೆ ಏರಿತ್ತು. ಅಲ್ಲಿಂದಾಚೆ ಕಡಿಮೆ ಆಗುತ್ತಾ ಬಂದಿದೆ. 2022ರಲ್ಲಿ ಈ ಪ್ರಮಾಣ ಶೇ. 3.50ಕ್ಕೆ ಇಳಿದಿದೆ.

ಅದೇ ವೇಳೆ, ಈ ಉತ್ಪನ್ನಗಳ ರಫ್ತಿನಲ್ಲಿ ಬಾಂಗ್ಲಾದೇಶದ ಪಾಲು ಶೇ. 5.1ರಷ್ಟಿದ್ದರೆ ವಿಯೆಟ್ನಾಂನದ್ದು ಶೇ. 5.9ರಷ್ಟಿದೆ. ರಫ್ತು ಸ್ಪರ್ಧೆಯಲ್ಲಿ ಸಣ್ಣ ಪುಟ್ಟ ದೇಶಗಳು ಭಾರತವನ್ನು ಹಿಂದಿಕ್ಕುತ್ತಿರುವುದು ವಿಶ್ವ ಬ್ಯಾಂಕ್ ಬಿಡುಗಡೆ ಮಾಡಿದ ದತ್ತಾಂಶದಿಂದ ಸ್ಪಷ್ಟವಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಹೂಡಿಕೆ ಎರಡು ಪಟ್ಟು ಹೆಚ್ಚಿಸುತ್ತೇವೆ: ಸಿಂಗಾಪುರದ ಕ್ಯಾಪಿಟಲ್ಯಾಂಡ್ ಸಂಸ್ಥೆ ಘೋಷಣೆ

ಭಾರತಕ್ಕೆ ಈ ರಫ್ತು ಯಾಕೆ ಮುಖ್ಯ?

ಮೇಲೆ ಹೇಳಿದ ಗಾರ್ಮೆಂಟ್ಸ್ ಮತ್ತು ಜವಳಿ ಉದ್ಯಮಗಳು ಸಾಕಷ್ಟು ಉದ್ಯೋಗ ಸೃಷ್ಟಿಸಬಲ್ಲಂಥವು. ಕಾರ್ಮಿಕರ ಶ್ರಮ ಬೇಡುವ ಕ್ಷೇತ್ರ. ಇದು ಪ್ರಬಲಗೊಂಡರೆ ಹೆಚ್ಚು ಉದ್ಯೋಗ ಸೃಷ್ಟಿಸಬಹುದು.

ಆದರೆ, ಭಾರತ ಮಾಡುತ್ತಿರುವ ರಫ್ತಿನಲ್ಲಿ ಹೆಚ್ಚಿನ ಭಾಗವು ಬಂಡವಾಳ ಬೇಡುವ ಕ್ಷೇತ್ರದ್ದಾಗಿದೆ. ಇಲ್ಲಿ ಉದ್ಯೋಗಸೃಷ್ಟಿ ಕಡಿಮೆ ಎನ್ನಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ವಿವಿಧ ಪಿಎಲ್​ಐ ಸ್ಕೀಮ್ ಮೂಲಕ ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ವಲಯವನ್ನು ಅಭಿವೃದ್ಧಿಪಡಿಸಲಾಗುತ್ತಿದೆಯಾದರೂ ಕಾರ್ಮಿಕ ಶ್ರಮ ಬೇಡುವ ಕ್ಷೇತ್ರದ ಕಡೆಗಣನೆ ಆದಂತಿದೆ.

ಇದನ್ನೂ ಓದಿ: ಶ್ರೀಮಂತರ ಶ್ರೀಮಂತಿಕೆ ಹೆಚ್ಚುತ್ತಿದೆ, ಭಾರತದ ಆರ್ಥಿಕತೆಗೇನೂ ಉಪಯೋಗ ಆಗುತ್ತಿಲ್ಲ: ವಿರಲ್ ಆಚಾರ್ಯ

ಜವಳಿ ಇತ್ಯಾದಿ ಕಾರ್ಮಿಕ ಶ್ರಮ ಅವಶ್ಯಕತೆಯ ಉತ್ಪಾದನಾ ವಲಯವು ಪ್ರಗತಿ ಹೊಂದಬೇಕಾದರೆ ವ್ಯಾಪಾರ ವೆಚ್ಚವನ್ನು ಸರ್ಕಾರ ಕಡಿಮೆಗೊಳಿಸಬೇಕು. ತೆರಿಗೆ ಮತ್ತು ತೆರಿಗೆಯೇತರ ಅಂತರವನ್ನು ತಗ್ಗಿಸಬೇಕು. ವ್ಯಾಪಾರ ಒಪ್ಪಂದಗಳನ್ನು ಪರಿಷ್ಕರಿಸಬೇಕು ಎಂದು ವರ್ಲ್ಡ್ ಬ್ಯಾಂಕ್ ಸಲಹೆ ನೀಡಿದೆ.

ಒಟ್ಟಾರೆ ರಫ್ತು ಬಂದರೆ ಭಾರತ ಮುಂದಿದೆ. ಒಂದು ವರ್ಷದಲ್ಲಿ ಸುಮಾರು 800 ಬಿಲಿಯನ್ ಡಾಲರ್​ನಷ್ಟು ರಫ್ತಾಗುತ್ತದೆ. ಇದಕ್ಕೆ ಹೋಲಿಸಿದರೆ ಬಾಂಗ್ಲಾದ ರಫ್ತು 60 ಬಿಲಿಯನ್ ಡಾಲರ್ ಆಸುಪಾಸಿನಲ್ಲಿದೆ. ಆದರೆ, ಜವಳಿ, ಉಡುಪು ಮತ್ತು ಲೆದರ್ ಉತ್ಪನ್ನಗಳ ರಫ್ತಿನಲ್ಲಿ ಬಾಂಗ್ಲಾ, ವಿಯೆಟ್ನಾಂ ದೇಶಗಳು ಭಾರತವನ್ನು ಹಿಂದಿಕ್ಕಿವೆ. ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ಚೀನಾ ದೇಶ ಈಗಲೂ ನಂಬರ್ ಒನ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್