AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್

India-Nepal Economic Partnership: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಭಾರತದೊಂದಿಗೆ ದೃಢ ಆರ್ಥಿಕ ಸಂಬಂಧ ಬಯಸಿದ್ದಾರೆ. ಭಾರತವನ್ನು ತಾಂತ್ರಿಕ ಹಾಗೂ ಆರ್ಥಿಕ ಶಕ್ತಿಯಾಗಿ ಗುರುತಿಸಿ, ನೇಪಾಳದ ಆರ್ಥಿಕ ಪ್ರಗತಿಗಾಗಿ ಸಹಭಾಗಿತ್ವಕ್ಕೆ ಆಹ್ವಾನಿಸಿದ್ದಾರೆ. UPI ತಂತ್ರಜ್ಞಾನ ಬಳಸಿ ಉದ್ಯೋಗ ಸೃಷ್ಟಿ ಮಾಡುವ ಗುರಿ ಹೊಂದಿದ್ದಾರೆ. ಗಡಿ ವಿವಾದಗಳನ್ನು ಮುಕ್ತ ಚರ್ಚೆಯಿಂದ ಬಗೆಹರಿಸಿಕೊಳ್ಳಲು ನೇಪಾಳ ಸಿದ್ಧವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬಲಿಷ್ಠ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಬಯಸುತ್ತೇವೆ: ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್
ಶಿಶಿರ್ ಖನಾಲ್, ಜೈಶಂಕರ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2026 | 4:10 PM

Share

ನವದೆಹಲಿ, ಜೂನ್ 7: ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರುವ ಭಾರತದೊಂದಿಗೆ ನೇಪಾಳ ಉತ್ತಮ ಸ್ನೇಹ ಹಾಗೂ ಆರ್ಥಿಕ ಸಂಬಂಧ ಬಯಸುತ್ತದೆ ಎಂದು ನೇಪಾಳ ವಿದೇಶಾಂಗ ಸಚಿವ ಶಿಶಿರ್ ಖನಾಲ್ (Shishir Khanal) ಹೇಳಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ನೇಪಾಳದ ವಿದೇಶಾಂಗ ಸಚಿವರು, ಭಾರತವನ್ನು ಕೇವಲ ನೆರೆಹೊರೆಯ ರಾಷ್ಟ್ರವಾಗಿ ಮಾತ್ರವಲ್ಲದೆ, ಜಾಗತಿಕ ಮಟ್ಟದ ತಾಂತ್ರಿಕ ಮತ್ತು ಆರ್ಥಿಕ ಪವರ್‌ಹೌಸ್ (Economic Powerhouse) ಎಂದು ಬಣ್ಣಿಸಿದರು.

ಭಾರತ ಮತ್ತು ನೇಪಾಳ ನಡುವಿನ ಯಾವುದೇ ಗಡಿ ವಿವಾದವನ್ನು ಎರಡು ದೇಶಗಳು ‘ಮುಕ್ತ ಮನಸ್ಸಿನಿಂದ’ (Open Heart) ಚರ್ಚಿಸಿದರೆ ಬಗೆಹರಿಸಲು ಸಾಧ್ಯವಿಲ್ಲದಷ್ಟು ದೊಡ್ಡ ಸಮಸ್ಯೆಯೇನಲ್ಲ ಎಂದು ಸಚಿವರು ಹೇಳಿದ್ದಾರೆ. ನೇಪಾಳದ ಹೊಸ ಸರ್ಕಾರವು ಭಾರತವನ್ನು 21ನೇ ಶತಮಾನದ ಅತಿ-ಸೂಕ್ಷ್ಮ ಭೌಗೋಳಿಕ ರಾಜಕೀಯದ (Geopolitics) ದೃಷ್ಟಿಕೋನದಿಂದ ನೋಡುತ್ತಿಲ್ಲ. ಬದಲಿಗೆ ನೇಪಾಳದ ಆರ್ಥಿಕ ಅಭಿವೃದ್ಧಿಗಾಗಿ ಭಾರತದೊಂದಿಗೆ ಮುಕ್ತ ಮತ್ತು ಪಾರದರ್ಶಕ ಸಹಭಾಗಿತ್ವವನ್ನು ಬಯಸುತ್ತಿದೆ ಎಂದಿದ್ದಾರೆ ಶಿಶಿರ್ ಖನಾಲ್.

ಭಾರತದ ಅತ್ಯಾಧುನಿಕ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (UPI ನಂತಹ ಕ್ರಾಸ್-ಬಾರ್ಡರ್ ಪೇಮೆಂಟ್ ಸಿಸ್ಟಂ) ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ನೇಪಾಳದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಪ್ರಗತಿ ಸಾಧಿಸುವುದು ನೇಪಾಳದ ಉದ್ದೇಶವಾಗಿದೆ ಎಂದೂ ಶಿಶಿರ್ ವಿವರಿಸಿದರು.

ಇದನ್ನೂ ಓದಿ: ಸ್ಪೇಸ್​ಎಕ್ಸ್ ಕಂಪ್ಯೂಟಿಂಗ್ ಬಳಸಲು ತಿಂಗಳಿಗೆ 9,000 ಕೋಟಿ ರೂ ಬಾಡಿಗೆ ಪಾವತಿಸುವ ಗೂಗಲ್

ಗಡಿ ವಿವಾದಕ್ಕೆ ರಾಜತಾಂತ್ರಿಕ ಪರಿಹಾರ

ಇತ್ತೀಚೆಗೆ ನೇಪಾಳದ ಪ್ರಧಾನಿ ಬಾಳೇಂದ್ರ ಶಾ (Balen Shah) ಅವರು ಗಡಿ ವಿವಾದದ ಕುರಿತು ಮಾಡಿದ್ದ ಕೆಲವು ಕಾಮೆಂಟ್‌ಗಳಿಂದ ಉಭಯ ದೇಶಗಳ ನಡುವೆ ಸಣ್ಣ ಮಟ್ಟದ ವಿವಾದ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಖನಾಲ್, “ನಾವು ಮುಕ್ತ ಮನಸ್ಸಿನಿಂದ ಕುಳಿತು ಚರ್ಚಿಸಿದಾಗ ಯಾವುದೇ ಗಡಿಯೂ ಸಂಕೀರ್ಣವಾಗಿ ಉಳಿಯುವುದಿಲ್ಲ. ಅತಿ-ರಾಷ್ಟ್ರೀಯತೆಯ (Hyper-nationalistic) ರಾಜಕೀಯ ಪ್ರದರ್ಶನ ಮಾಡುವ ಬದಲು, ನಾವು ಶಾಂತಿಯುತವಾಗಿ, ದತ್ತಾಂಶ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿದ್ದೇವೆ,” ಎಂದು ಸ್ಪಷ್ಟಪಡಿಸಿದರು.

ಭಾರತದ ಆರ್ಥಿಕ ಬೆಳವಣಿಗೆಗೆ ಪ್ರಶಂಸೆ

ಭಾರತದ ಆರ್ಥಿಕ ಪ್ರಗತಿಯನ್ನು ಕೊಂಡಾಡಿದ ಅವರು, “ನಾವು ಗಡಿಯ ಆಚೆ ನೋಡಿದಾಗ ಉದಯಿಸುತ್ತಿರುವ ಭಾರತ ಕಾಣುತ್ತಿದೆ. ಜಾಗತಿಕ ಮಟ್ಟದಲ್ಲಿ ತಾಂತ್ರಿಕ ಹಾಗೂ ಆರ್ಥಿಕ ಶಕ್ತಿಯಾಗಿ ಭಾರತ ತನ್ನನ್ನು ತಾನು ಅದ್ಭುತವಾಗಿ ಮರುರೂಪಿಸಿಕೊಂಡಿದೆ. ತಂತ್ರಜ್ಞಾನ ಮತ್ತು ಉನ್ನತ ಆಕಾಂಕ್ಷೆಗಳಿರುವ ಈ ಭಾರತದೊಂದಿಗೆ ನಾವು ಕೈಜೋಡಿಸಲು ಬಯಸುತ್ತೇವೆ,” ಎಂದರು.

ಇದನ್ನೂ ಓದಿ: ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ?

ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಮಾತುಕತೆ

ತಮ್ಮ ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ, ಶಿಶಿರ್ ಖನಾಲ್ ಅವರು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರೊಂದಿಗೆ ಸುದೀರ್ಘ ಹಾಗೂ ಫಲಪ್ರದ ಚರ್ಚೆ ನಡೆಸಿದರು. ಈ ಸಭೆಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ, ಗಡಿ ಸಂಪರ್ಕ (Cross-border connectivity), ಇಂಧನ ಪಾಲುದಾರಿಕೆ (Energy partnership) ಮತ್ತು ಜನರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?